ಸಿದ್ದರಾಮಯ್ಯಗೆ ಸನ್ಮಾನ ಮಾಡ್ತಾರಂತೆ ಯಡಿಯೂರಪ್ಪ!
ಬೆಂಗಳೂರು, ನ. 20 : ಧರಣಿಯನ್ನು ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ನನ್ನ ಬಳಿಗೆ ಸಂಧಾನಕಾರರನ್ನು ಕಳುಹಿಸುವುದು ಬೇಡ, ಶಾದಿ ಭಾಗ್ಯ ಯೋಜನೆಯನ್ನು ಎಲ್ಲಾ ವರ್ಗಗಳಿಗೆ ವಿಸ್ತರಣೆ ಮಾಡಿದರೆ, ಅವರಿಗೆ ನಾನು ಸನ್ಮಾನ ಮಾಡುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿ ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ವರ್ಗಗಳಿಗೆ ವಿಸ್ತರಿಸರಣೆ ಮಾಡಬೇಕು ಹಾಗೂ ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆ ಮಾಡಬೇಕು ಎಂಬ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡೆಸುತ್ತಿರುವ ಅಹೋರಾತ್ರಿ ಧರಣಿ ಬುಧವಾರ 20ನೇ ದಿನಕ್ಕೆ ಕಾಲಿಟ್ಟಿದೆ.

ಧರಣಿ ಸ್ಥಳದಲ್ಲಿ ಆಯೋಜಿಸಿದ್ದ ಕನಕ ಜಯಂತಿ ಉತ್ಸವದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಧರಣಿ ನಿಲ್ಲಿಸುವಂತೆ ಸಂಧಾನಕಾರರನ್ನು ಕಳುಹಿಸುವುದು ಬೇಡ, ಅವರು ನನ್ನ ಬೇಡಿಕೆ ಈಡೇರಿಸಿ, ಎಲ್ಲಾ ವರ್ಗಗಳಿಗೆ ಶಾದಿ ಭಾಗ್ಯ ಯೋಜನೆ ವಿಸ್ತರಣೆ ಮಾಡಿದರೆ ಅವರಿಗೆ ನಾನು ಸನ್ಮಾನ ಮಾಡುತ್ತೇನೆ ಎಂದು ಘೋಷಿಸಿದರು. (ಮನವೊಲಿಕೆ ಯತ್ನ ವಿಫಲ, ಮುಂದುವರಿದ ಬಿಎಸ್ವೈ ಧರಣಿ)
ಧರಣಿಯ 19ನೇದಿನ ಮಂಗಳವಾರ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಯಡಿಯೂರಪ್ಪ ಮನವೊಲಿಕೆಗೆ ಮುಂದಾಗಿದ್ದರು. ಅದಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಿದ್ದರು. ವಾಟಾಳ್ ನಾಗರಾಜ್ ಮತ್ತು ಎಂ.ಡಿ.ಲಕ್ಷ್ಮೀನಾರಾಯಣ ಅವರೊಂದಿಗೆ ಧರಣಿ ಸ್ಥಳಕ್ಕೆ ತೆರಳಿ, ಯಡಿಯೂರಪ್ಪ ಅವರ ಮನವೊಲಿಸಲು ತೀರ್ಮಾನಿಸಿದ್ದರು.
ಆದರೆ, ಅದಕ್ಕೂ ಮೊದಲೇ ಜಯಚಂದ್ರ ಅವರಿಗೆ ಸ್ಪಷ್ಟ ಸಂದೇಶ ಕಳುಹಿಸಿದ ಯಡಿಯೂರಪ್ಪ ತಾವು ಧರಣಿ ಕೈ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದರು. ಇದರಿಂದ ಜಯಚಂದ್ರ ತಮ್ಮ ಆಲೋಚನೆಯನ್ನು ಹಿಂಪಡೆದಿದ್ದರು.
ಈ ಹಿನ್ನಲೆಯಲ್ಲಿ ಬುಧವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಸಂದೇಶ ಕಳಿಸಿರುವ ಯಡಿಯೂರಪ್ಪ, ನಮ್ಮ ಬೇಡಿಕೆ ಈಡೇರಿಸಿ ನಿಮಗೆ ಸನ್ಮಾನ ಮಾಡುತ್ತೇವೆ. ಆದರೆ, ಧರಣಿ ನಿಲ್ಲಿಸುವಂತೆ ಸಂಧಾಕಾರರನ್ನು ಕಳಿಸಬೇಡಿ ಎಂದು ಹೇಳಿದ್ದಾರೆ.
ನಮ್ಮ ಬೇಡಿಕೆ ಈಡೇರಿಸಿದರೆ ನಿಮಗೆ ಸನ್ಮಾನ ಮಾಡುತ್ತೇವೆ. ಇಲ್ಲದಿದ್ದರೆ ನ.24ರವರೆಗೆ ಧರಣಿ ಮುಂದುವರೆಸುತ್ತೇನೆ. ನಂತರ ಅಧಿವೇಶನದಲ್ಲಿಯೂ ಪ್ರತಿಭಟನೆ ಮುಂದುವರೆಸುವುದಾಗಿ ಅವರು ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications