ಯಶವಂತಪುರದಿಂದ ಸ್ಪರ್ಧೆ, ಶೋಭಾ ಕರಂದ್ಲಾಜೆ ಹೇಳಿದ್ದೇನು?
Recommended Video

ಬೆಂಗಳೂರು, ಏಪ್ರಿಲ್ 18 : ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ 2018ರ ಚುನಾವಣೆಗೆ ಸ್ಪರ್ಧಿಸುವ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. 'ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು, 'ನನ್ನ ಸಂಸದ ಸ್ಥಾನದ ಅವಧಿ ಇನ್ನೂ ಒಂದು ವರ್ಷಗಳ ಕಾಲವಿದೆ. ನಂತರ ಮುಂದಿನ ರಾಜಕೀಯ ನಿರ್ಧಾರವನ್ನು ಕೈಗೊಳ್ಳುತ್ತೇನೆ' ಎಂದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
'ಯಶವಂತಪುರ ಕ್ಷೇತ್ರದಿಂದ ನಾನು ಚುನಾವಣೆಗೆ ಸ್ಪರ್ಧಿಸುವೆ ಎಂಬ ಸುದ್ದಿ ಸುಳ್ಳು. ರಾಜ್ಯ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ' ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ಶೋಭಾ ಕರಂದ್ಲಾಜೆ ಅವರು ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಬಿಜೆಪಿಯ 3ನೇ ಪಟ್ಟಿಯಲ್ಲಿ ಅವರ ಹೆಸರು ಘೋಷಣೆಯಾಗಲಿದೆ ಎಂಬ ಸುದ್ದಿ ಮಂಗಳವಾರ ಹಬ್ಬಿತ್ತು. ಇಂದು ಈ ಸುದ್ದಿಗಳಿಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
2008ರಲ್ಲಿ ಶೋಭಾ ಕರಂದ್ಲಾಜೆ ಅವರು ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 57,643 ಮತಗಳನ್ನು ಪಡೆದು ಜಯಗಳಿಸಿದ್ದರು. 2013ರ ಚುನಾವಣೆಯಲ್ಲಿ ಅವರು ಕೆಜೆಪಿ ಅಭ್ಯರ್ಥಿಯಾಗಿ ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 20,909 ಮತಗಳನ್ನು ಪಡೆದಿದ್ದರು.
ಯಶವಂತಪುರ ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್ನ ಎಸ್.ಟಿ.ಸೋಮಶೇಖರ್. ಈ ಬಾರಿಯ ಚುನಾವಣೆಗೂ ಅವರೇ ಅಭ್ಯರ್ಥಿ. ಜೆಡಿಎಸ್ನಿಂದ ಟಿ.ಎನ್.ಜವರಾಯಿ ಗೌಡ ಅವರು ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications