ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೋಲನ್ನು ಸವಾಲಾಗಿ ಸ್ವೀಕರಿಸಿ ಪಕ್ಷ ಸಂಘಟಿಸುತ್ತೇನೆ: ದೇವೇಗೌಡ

|
Google Oneindia Kannada News

Recommended Video

ಮತ್ತೆ ಪಕ್ಷ ಸಂಘಟನೆ ಮಾಡ್ತೀನಿ ಎಂದ್ರು ಗೌಡ್ರು

ಬೆಂಗಳೂರು, ಜೂನ್ 07: ಲೋಕಸಭೆ ಚುನಾವಣೆ ಸೋಲನ್ನು ಸವಾಲಾಗಿ ಸ್ವೀಕರಿಸಿ, ಮೈತ್ರಿ ಸರ್ಕಾರಕ್ಕೆ ಧಕ್ಕೆ ಆಗದ ರೀತಿಯಲ್ಲಿ ಜೆಡಿಎಸ್ ಪಕ್ಷವನ್ನು ಪುನಃ ಸಂಘಟಿಸುತ್ತೇನೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು ಹೇಳಿದರು.

ನಗರದ ಅರಮನೆ ಮೈದಾನದಲ್ಲಿ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಜೆಡಿಎಸ್ ಜನಪ್ರತಿನಿಧಿಗಳಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇವೇಗೌಡರಿಂದಲೇ ಜೆಡಿಎಸ್ ಉಳಿದಿದೆ: ಕುಮಾರಸ್ವಾಮಿದೇವೇಗೌಡರಿಂದಲೇ ಜೆಡಿಎಸ್ ಉಳಿದಿದೆ: ಕುಮಾರಸ್ವಾಮಿ

ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ ಮನೆಯಲ್ಲಿ ಕೂರುವುದಿಲ್ಲ, ಭೂಮಿಯಿಂದ ಎದ್ದು ಬರುವ ಬಲ ಇದೆ ಎಂದು ವೀರಾವೇಶದ ಮಾತನ್ನಾಡಿದರು.

I will re unite jds party from root level: Deve Gowda

ಈಗ ನಗರಸಭೆ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದವರಿಂದಲೇ ತಾಲ್ಲೂಕು ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಿಸಲಾಗುವುದು ಎಂದು ಯೋಜನೆ ಬಿಚ್ಚಿಟ್ಟ ಅವರು, ಎಲ್ಲ ಸಮುದಾಯದವರು ಒಗ್ಗಟ್ಟಾಗಿ ಹಿಂದಿನ ಕಹಿಗಳನ್ನು ಮರೆತು ಪಕ್ಷಕ್ಕಾಗಿ ದುಡಿಯಬೇಕು ಎಂದು ಹೇಳಿದರು.

ಮಗನ ಹೇಳಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟೀಕರಣಮಗನ ಹೇಳಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟೀಕರಣ

ಯಾರೇ ಪಕ್ಷ ಬಿಟ್ಟು ಹೋದರು ಹೆದರುವುದಿಲ್ಲ, ಪಕ್ಷಕ್ಕೆ ನಿಷ್ಠರಾದವರು ಮಾತ್ರವೇ ಪಕ್ಷದಲ್ಲಿ ಉಳಿಯಲಿ, ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಪಕ್ಷದ ಕಾರ್ಯ ನೀಡಲಾಗುವುದು ಎಂದು ಅವರು ಹೇಳಿದರು.

English summary
JDS president Deve Gowda said that i will not take rest, i will re organize jds party. He said i am not afraid of lok sabha elections 2019 loose.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X