ಮರುಮತಾಂತರಕ್ಕೆ ಕರೆದರೆ ಸ್ಪಂದಿಸುತ್ತೇನೆ : ಪೇಜಾವರ
ಉಡುಪಿ, ಡಿ. 27: ಜಿಲ್ಲೆಯಲ್ಲಿ 110 ಕ್ರೈಸ್ತ ಕುಟುಂಬಗಳನ್ನು ಮರು ಮತಾಂತರ ಮಾಡುವುದಾಗಿ ಸಂಘಪರಿವಾರ ನೀಡಿರುವ ಹೇಳಿಕೆಯನ್ನು ಪೇಜಾವರದ ವಿಶ್ವೇಶ್ವರತೀರ್ಥ ಸ್ವಾಮೀಜಿ ಬೆಂಬಲಿಸಿದ್ದಾರೆ. ಮರುಮತಾಂತರ ಕಾರ್ಯಕ್ರಮವನ್ನು ನಾನು ಆಯೋಜಿಸಿಲ್ಲ. ಆದರೆ, ನನಗೆ ಕರೆ ಬಂದಲ್ಲಿ ಸ್ಪಂದಿಸುವುದಾಗಿ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಹಿಂದೂಗಳನ್ನು ಇತರ ಧರ್ಮದವರು ಮತಾಂತರ ಮಾಡಿದಾಗ ಯಾರೂ ಮಾತನಾಡುವುದಿಲ್ಲ. ಆದರೆ, ಅವರು ಮಾತೃಧರ್ಮಕ್ಕೆ ಮರಳಿದಾಗ ಗದ್ದಲವಾಗುತ್ತದೆ. ಈ ತಾರತಮ್ಯ ಏಕೆ ಎಂದು ಪ್ರಶ್ನಿಸಿದ್ದಾರೆ. [ಸಂಘಪರಿವಾರದಿಂದ ಉಡುಪಿಯಲ್ಲಿ ಘರ್ ವಾಪಸಿ]

ಆಮಿಷ ಒಡ್ಡಿ, ಒತ್ತಡ ಹಾಕಿ ಮತಾಂತರ ಮಾಡುವುದು ತಪ್ಪು. ಆದ್ದರಿಂದ ಅಕ್ರಮ ಮತಾಂತರ ಕುರಿತು ತೀರ್ಮಾನಿಸಲು ಜಿಲ್ಲಾಮಟ್ಟದ ಸಮಿತಿ ರಚಿಸಬೇಕು. ಇದರಲ್ಲಿ ಎಲ್ಲ ಧರ್ಮ ಹಾಗೂ ಸರ್ಕಾರದ ಪ್ರತಿನಿಧಿಗಳು ಇರಬೇಕು. ಮತಾಂತರ ನಡೆಯುವ ಸ್ಥಳಕ್ಕೆ ತೆರಳಿ ವಾಸ್ತವ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಮರು ಮತಾಂತರ ಇಚ್ಛಿಸುವ ಕ್ರೈಸ್ತ ಕುಟುಂಬಗಳನ್ನು ಹುಡುಕಿ ಅವರ ಜೊತೆ ಪೇಜಾವರ ಶ್ರೀಗಳನ್ನು ಭೇಟಿ ಮಾಡಿಸುವುದಾಗಿ ಹಿಂದೂ ಸಂಘಟನೆಗಳು ಈಗಾಗಲೇ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀಗಳ ಹೇಳಿಕೆ ಮಹತ್ವ ಪಡೆದಿದೆ. [ಮರು ಮತಾಂತರ ಕಲ್ಪನೆಗೂ ಕರ್ನಾಟಕಕ್ಕೂ ಲಿಂಕ್ ಇದೆ]
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications