ಡಿಕೆ ರವಿ ಕೇಸ್ : ಪ್ರಮುಖರಿಗೆ ಸಿಬಿಐ ಸಮನ್ಸ್ ಭೀತಿ
ಬೆಂಗಳೂರು, ಏ.16: ಐಎಎಸ್ ಅಧಿಕಾರಿ ಡಿಕೆ ರವಿ ಡೆತ್ ಕೇಸ್ ಫೈಲ್ ಮತ್ತೆ ಓಪನ್ ಆಗಿದೆ. ಚೆನ್ನೈನ ಸಿಬಿಐ ತಂಡ ಮತ್ತೊಮ್ಮೆ ಎಫ್ ಐಆರ್ ದಾಖಲಿಸಿಕೊಂಡು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಸಿಬಿಐ ತಂಡದ ಮೊದಲ ಸಮನ್ಸ್ ಯಾರಿಗೆ ಜಾರಿಯಾಗಲಿದೆ. ಯಾವ ಜನಪ್ರತಿನಿಧಿ, ಉದ್ಯಮಿ, ಅಧಿಕಾರಿ ವಿಚಾರಣೆಗೊಳಪಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
ಮಾ.23ರಂದು ಕರ್ನಾಟಕ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯಲ್ಲಿದ್ದ ಷರತ್ತುಗಳಿಗೆ ಸಿಬಿಐ ಒಪ್ಪಿರಲಿಲ್ಲ. ಮುಖ್ಯವಾಗಿ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳ್ಳಬೇಕು ಎಂಬ ಷರತ್ತಿಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿ ಅಧಿಸೂಚನೆ ಹಿಂತಿರುಗಿಸಿತ್ತು. ರವಿ ಕೇಸ್ ಕೈಗೆತ್ತಿಕೊಳ್ಳುವುದೇ ಅನುಮಾನ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು.[ರವಿ ಸಾವಿನ ನಿಗೂಢತೆ: ಸಿದ್ದುಗೆ ಸತ್ಯ ಗೊತ್ತಾಗಿದ್ಯಾ?]
ಅದರೆ, ಸಿದ್ದರಾಮಯ್ಯ ಸರ್ಕಾರ ತ್ವರಿತಗತಿಯಲ್ಲಿ ನಡೆ ಇಟ್ಟು ಯಾವುದೇ ಷರತ್ತುಗಳಿಲ್ಲದೆ ಮುಕ್ತವಾಗಿ ತನಿಖೆ ನಡೆಸುವಂತೆ ಸಿಬಿಐಗೆ ಮತ್ತೊಮ್ಮೆ ಅಧಿಸೂಚನೆ ಕಳಿಸಿತ್ತು. ಇದಕ್ಕೆ ಕೇಂದ್ರ ಗೃಹಸಚಿವಾಲಯದ ಒಪ್ಪಿಗೆಯೂ ಸಿಕ್ಕಿತ್ತು. ಇದಾದ ಬಳಿಕೆ ಸಿಬಿಐ ತಂಡ ತನ್ನ ತನಿಖೆ ಮುಂದುವರೆಸಿದೆ. [ಸಿಬಿಐಗೆ ಷರತ್ತು ರಹಿತ ಸೂಚನೆ ಕೊಟ್ಟ ಸಿದ್ದು]
ಈ ನಡುವೆ ಪ್ರಕರಣವನ್ನು ಮತ್ತೊಮ್ಮೆ ಸಿಬಿಐಗೆ ವಹಿಸಿರುವುದನ್ನು ಸ್ವಾಗತಿಸಿದ ರವಿ ಅವರ ಗೆಳತಿ ಐಎಎಸ್ ಅಧಿಕಾರಿ, ಸತ್ಯಕ್ಕೆ ಜಯವಾಗಲಿ ಎಂದು ತಮ್ಮ ಫೇಸ್ ಬುಕ್ ಪುಟದಲ್ಲಿ ಬರೆದುಕೊಂಡಿದ್ದರು.

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುವ ತಂಡದ ವಿವರ ಈಗ ಪ್ರಕಟವಾಗಿದೆ. ಚೆನ್ನೈ ಸಿಬಿಐ ಘಟಕದ ಡಿಐಜಿ ಸೆಲ್ವರಾಜ್ ಸೆಂಗತ್ತೀರ್ ಹಾಗೂ ವಿಶೇಷ ಬ್ರ್ಯಾಂಚಿನ ಎಸ್ಪಿ ಶರವಣನ್ ಅವರ ನೇತೃತ್ವದ ವಿಶೇಷ ತಂಡ ತನಿಖೆ ನಡೆಸುತ್ತಿದೆ. [ಡಿಕೆ ರವಿ ಕೇಸ್: ಸಿಬಿಐ ಪ್ರಕರಣ ಕೈ ಬಿಡುವ ಸಾಧ್ಯತೆ?]
ಯಾರಿಗೆ ಮೊದಲ ಸಮನ್ಸ್: ಮೂಲಗಳ ಪ್ರಕಾರ ಡಿಕೆ ರವಿ ಅವರ ಕಾರಿನ ಚಾಲಕನನ್ನು ಮೊದಲಿಗೆ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ. ಸಿಐಡಿಯಿಂದ ಅಧಿಕೃತವಾಗಿ ಕೇಸಿಗೆ ಸಂಬಂಧಿಸಿದ ದಾಖಲೆಗಳನ್ನು ಸಿಬಿಐ ಪಡೆದುಕೊಳ್ಳಬೇಕಿದೆ.
ಡಿಕೆ ರವಿ ಪತ್ನಿ, ಮಾವ, ಅಣ್ಣ ಹಾಗೂ ಇತರೆ ಕುಟುಂಬಸ್ಥರು, ಡಿಕೆ ರವಿ ಸಹದ್ಯೋಗಿಗಳು, ಡಿಕೆ ರವಿ ರೈಡ್ ಮಾಡಿದ ಕಂಪನಿಗಳು ಸೇರಿದಂತೆ ಜನಪ್ರತಿನಿಧಿಗಳು, ಉದ್ಯಮಿಗಳು, ವಾಣಿಜ್ಯ ತೆರಿಗೆ ವಂಚಕರು, ರಿಯಲ್ ಎಸ್ಟೇಟ್ ಸಂಸ್ಥೆ ಮಾಲೀಕರು ಹಾಗೂ ಅಧಿಕಾರಿಗಳು ಸಿಬಿಐ ವಿಚಾರಣೆ ಲಿಸ್ಟ್ ನಲ್ಲಿದ್ದಾರೆ. [ರವಿ ಕೇಸ್: ಸಾವು, ಸಿಐಡಿ, ಸಿಬಿಐ ತನಕ ಟೈಮ್ ಲೈನ್]
ಸಿಬಿಐನ ಒಂದು ತಂಡ ರವಿ ಅವರ ಮೊಬೈಲ್, ಈಮೇಲ್, ಫೇಸ್ಬುಕ್ ಖಾತೆಗಳನ್ನು ಪರಿಶೀಲಿಸಲಿದೆ. ಈ ಬಗ್ಗೆ ಸೈಬರ್ ಕ್ರೈಂ ವಿಭಾಗದಿಂದ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಜೊತೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾದ ಮರಣೋತ್ತರ ಪರೀಕ್ಷೆ ವರದಿ
ಹೈದರಾಬಾದ್ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಡೆಸಲಾದ ಎಫ್ ಎಸ್ ಎಲ್ ವರದಿಯನ್ನು ಸಿಬಿಐ ತಂಡ ಪಡೆಯಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications