ಹೈಕೋರ್ಟ್: ₹50 ಸಾವಿರ ದಂಡ ಕಟ್ಟಿದ ಐಎಎಸ್ ಅಧಿಕಾರಿ ರಶ್ಮಿ ಮಹೇಶ್
ಬೆಂಗಳೂರು, ಜನವರಿ 21: ಕೋರ್ಟ್ ಆದೇಶ ಪಾಲಿಸದೇ ಇರದ ಕಾರಣ ಹಿರಿಯ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ 50 ಸಾವಿರ ರೂಪಾಯಿ ದಂಡವನ್ನು ತಮ್ಮ ಸ್ವಂತ ಹಣದಲ್ಲಿ ಕಟ್ಟಿರುವ ಘಟನೆ ಹೈಕೋರ್ಟ್ನಲ್ಲಿ ನಡೆದಿದೆ.
ಇದರಿಂದಾಗಿ ಅವರು ನ್ಯಾಯಾಂಗ ನಿಂದನೆ ತೂಗುಗತ್ತಿಯಿಂದ ಪಾರಾಗಿದ್ದಾರೆ. ಇಲ್ಲವಾದರೆ ಅವರು ನ್ಯಾಯಾಂಗ ನಿಂದನೆ ಕ್ರಮವನ್ನು ಎದುರಿಸಬೇಕಾಗಿತ್ತು ಎನ್ನಲಾಗಿದೆ.
ಸರ್ಕಾರಿ ನೌಕರರಿಗೆ ಸರಿಸಮನಾಗಿ ದಯಾನಂದ ಸಾಗರ್ ಶೈಕ್ಷಣಿಕ ಸಂಸ್ಥೆಗಳ ನೌಕರರಿಗೆ ವೇತನ ನೀಡುವ ಕುರಿತ ಮನವಿ ಪರಿಗಣಿಸಲು ಎರಡು ವರ್ಷ ವಿಳಂಬ ಮಾಡಿದ ಪ್ರಕರಣದಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಹೈಕೋರ್ಟ್ಗೆ 50 ಸಾವಿರ ರೂಪಾಯಿ ದಂಡ ಪಾವತಿಸಿದ್ದಾರೆ.

ಏಕಸದಸ್ಯ ನ್ಯಾಯಪೀಠ 2020ರ ಮಾರ್ಚ್ 11ರಂದು ನೀಡಿದ ಆದೇಶ ಪಾಲಿಸಿಲ್ಲ ಎಂದು ಆಕ್ಷೇಪಿಸಿ ದಯಾನಂದ ಸಾಗರ ಕಾಲೇಜ್ ಆಫ್ ಎಂಜಿನಿಯರಿಂಗ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಲ್.ಹರ್ಷ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯಪೀಠದ ವಿಚಾರಣೆ ನಡೆಸಿತು.
2022ರ ನವೆಂಬರ್ 8ರಂದು ನ್ಯಾಯಪೀಠ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಅವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿತ್ತು. ದಂಡ ಮೊತ್ತವನ್ನು 15 ದಿನದಲ್ಲಿ ಪಾವತಿಸಬೇಕು. ತಪ್ಪಿದಲ್ಲಿ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಆದೇಶಿಸಿತ್ತು.
ಈ ಆದೇಶದ ಪಾಲನೆಯ ಹಿನ್ನೆಲೆಯಲ್ಲಿ ರಶ್ಮಿ ಮಹೇಶ್ ಅವರು ತಮ್ಮ ಸ್ವಂತ ಹಣದಿಂದ 50 ಸಾವಿರ ರೂಪಾಯಿ ಪಾವತಿ ಮಾಡಿದ್ದಾರೆ. ಅದನ್ನು ಪರಿಗಣಿಸಿದ ವಿಭಾಗೀಯ ಪೀಠ, ರಶ್ಮಿ ಮಹೇಶ್ ಮತ್ತು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಮೇಲಿನ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಕೈಬಿಟ್ಟಿದೆ.
ಪ್ರಕರಣದ ವಿವರವೇನು..?
ರಾಜ್ಯ ಸರ್ಕಾರಿ ನೌಕರರಿಗೆ ಸರಿಸಮನಾಗಿ ತಮಗೂ ವೇತನ ಹಾಗೂ ಸೌಲಭ್ಯ ವಿಸ್ತರಿಸಲು ನಿರ್ದೇಶಿಸಬೇಕು ಎಂದು ಕೋರಿ ದಯಾನಂದ ಸಾಗರ ಶಿಕ್ಷಣ ಸಂಸ್ಥೆಗಳ 27 ಬೋಧಕೇತರ ಕಾಯಂ ನೌಕರರು 2019ರಲ್ಲಿ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಉನ್ನತ ಶಿಕ್ಷಣ ಇಲಾಖೆಯ ಮರು ಪಶೀಲನಾ ಪ್ರಾಧಿಕಾರ (ಇಲಾಖೆ ಪ್ರಧಾನ ಕಾರ್ಯದರ್ಶಿ) ಅರ್ಜಿದಾರ ನೌಕರರ ಮನವಿಯನ್ನು ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಅಡಿಯಲ್ಲಿ ಪುನರ್ ವಿಮರ್ಶೆ ಮಾಡಿ ನಾಲ್ಕು ತಿಂಗಳಲ್ಲಿ ಸೂಕ್ತ ಆದೇಶ ಹೊರಡಿಸಬೇಕು ಎಂದು 2020ರ ಮಾರ್ಚ್ 3ರಂದು ಹೈಕೋರ್ಟ್ ಏಕ ಸದಸ್ಯಪೀಠವು ಈ ಆದೇಶ ಮಾಡಿತ್ತು.
ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಲ್.ಹರ್ಷ ಅವರು 2021ರ ಡಿಸೆಂಬರ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ, ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶವನ್ನು ಮರು ಪರಿಶೀಲನಾ ಪ್ರಾಧಿಕಾರ ಪಾಲಿಸಿಲ್ಲ ಎಂದು ಆರೋಪಿಸಿದ್ದರು. ಹಾಗಾಗಿ ವಿಭಾಗೀಯ ಪೀಠ ಮರು ಪಶೀಲನಾ ಪ್ರಾಧಿಕಾರದ ಅಧಿಕಾರಿಯಾದ ರಶ್ಮಿ ಮಹೇಶ್ ಅವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿತ್ತು. ರಶ್ಮಿ ಮಹೇಶ್ ದಂಡ ಕಟ್ಟಿರುವುದೇ ಅಲ್ಲದೆ, ಏಕಸದಸ್ಯಪೀಠದ ಆದೇಶವನ್ನು ಪಾಲನೆ ಮಾಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications