ಮಾನ್ಸೂನ್ ಮಾರುತಗಳ ಅಸ್ಥಿರತೆ ಕುರಿತು ಕಾರ್ಯಾಗಾರ
ಮಾನ್ಸೂನ್ ಮಾರುತಗಳಲ್ಲಿ ಅಸ್ಥಿರತೆ ಕುರಿತು ಅಂತರರಾಷ್ಟ್ರೀಯ ಸೈದ್ಧಾಂತಿಕ ವಿಜ್ಞಾನ ಸಂಸ್ಥೆಯು ಸುಲೋಚನಾ ಗಾದ್ಗಿಲ್ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಿದೆ.
ಬೆಂಗಳೂರು, ನವೆಂಬರ್, 25: ಅಂತರರಾಷ್ಟ್ರೀಯ ಸೈದ್ಧಾಂತಿಕ ವಿಜ್ಞಾನ ಸಂಸ್ಥೆ (ICTS-TIFR) ಪ್ರತಿ ತಿಂಗಳು ಆಯೋಜಿಸುವ 'ಕಾಪಿ ವಿತ್ ಕ್ಯೂರಿಯಾಸಿಟಿ' ಕಾರ್ಯಕ್ರಮದ ಭಾಗವಾಗಿ 'ಮಾನ್ಸೂನ್ ಮಾರುತಗಳಲ್ಲಿ ಅಸ್ಥಿರತೆ' ಕುರಿತು ಈ ತಿಂಗಳು ಸುಲೋಚನಾ ಗಾದ್ಗಿಲ್ ಅವರ ಉಪನ್ಯಾಸವನ್ನು ಏರ್ಪಡಿಸಿದೆ.
ಜವಹರ್ ಲಾಲ್ ನೆಹರೂ ತಾರಾಲಯ ಮತ್ತು ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಲಾಯ ಸಹಯೋಗದಲ್ಲಿ ಸಂಸ್ಥೆ ಈ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದೆ.

ಸುಲೋಚನಾ ಗಾದ್ಗಿಲ್ ಅವರು ಪ್ರಖ್ಯಾತ ಪವನ ತಜ್ಞರಾಗಿದ್ದು, ಭಾರತೀಯ ವಿಜ್ಞಾನ ಸಂಸ್ಥೆಯ ವಾತಾವರಣ ಸಾಗರ ವಿಜ್ಞಾನ ವಿಭಾಗದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.
ಮಾನ್ಸೂನ್ ಮಾರುತಗಳು ಪ್ರತಿ ವರ್ಷ ದೇಶವನ್ನು ಪ್ರವೇಶಿಸುತ್ತಿವೆ. ಆದರೆ ವರ್ಷದಿಂದ ವರ್ಷಕ್ಕೆ ಮಾರುತಗಳ ಅವುಗಳ ಪ್ರಭಾವ ತೀರಾ ಭಿನ್ನವಾಗಿರುತ್ತದೆ. ಬೇಸಿಗೆಯಲ್ಲೂ ಇದೇ ಪ್ರಭಾವ ಇರುತ್ತದೆ.
ಈ ಸಮಸ್ಯೆ ಕೇವಲ ರೈತರಷ್ಟೇ ಅಲ್ಲದೆ ಆರ್ಥಿಕ ತಜ್ಞರು, ವಾತಾವರಣ ತಜ್ಞರನ್ನೂ ಕಾಡುತ್ತಿದೆ. ಮಾನ್ಸೂನ್ ಮಾರುತಗಳಲ್ಲಿ ಆಗುತ್ತಿರುವ ಈ ಬದಲಾವಣೆ ಕುರಿತು ಗಾದ್ಗಿಲ್ ಅವರು ಉಪನ್ಯಾಸ ನೀಡಲಿದ್ದಾರೆ.
ಶನಿವಾರ (ನವೆಂಬರ್ 26) ಸಂಜೆ 4 ರಿಂದ 6 ಗಂಟೆ ವರೆಗೆ ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ https://www.icts.res.in/outreach/kaapi-with-kuriosity ವೆಬ್ ಸೈಟ್ ಸಂಪರ್ಕಿಸಿ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications