Get Updates
Get notified of breaking news, exclusive insights, and must-see stories!

ಮತ್ತೆ ಈದ್ಗಾ ಮೈದಾನ ವಿವಾದ: ಧ್ವಜಾರೋಹಣಕ್ಕೆ ಮನವಿ

ಬೆಂಗಳೂರು, ಜನವರಿ 17: ಗಣರಾಜ್ಯೋತ್ಸವಕ್ಕೂ ಮುನ್ನ ಬೆಂಗಳೂರಿನ ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣಕ್ಕೆ ಚಾಮರಾಜಪೇಟೆ ನಗರಿಕಾರ ಒಕ್ಕೂಟ ಹಾಗೂ ಇತರೆ ಬಲಪಂಥೀಯ ಗುಂಪುಗಳ ಸದಸ್ಯರು ರಾಜ್ಯ ಸರ್ಕಾರದಿಂದ ಅನುಮತಿ ಕೋರಿದ್ದಾರೆ ಎಂದು ವರದಿಗಳು ತಿಳಿಸಿವೆ.

ಜನವರಿ 15 ರಂದು ಬರೆದ ಪತ್ರದಲ್ಲಿ ಸಂಘಟನೆಗಳು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಗಣರಾಜ್ಯೋತ್ಸವವನ್ನು ಆಚರಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿವೆ ಎನ್ನಲಾಗಿದೆ. ಅನುಮತಿ ನೀಡದಿದ್ದರೆ ಆಡಳಿತದ ಸೂಚನೆಗಳನ್ನು ನಿರ್ಲಕ್ಷಿಸಿ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡುವುದಾಗಿಯೂ ವೇದಿಕೆ ಎಚ್ಚರಿಸಿದೆ.

ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠವು 25-8-2022 ರ ಮಧ್ಯಂತರ ಆದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಮತ್ತು ಇತರ ರಾಷ್ಟ್ರೀಯ ಹಬ್ಬಗಳನ್ನು ಮೈದಾನದಲ್ಲಿ ಆಚರಿಸಬಹುದು ಎಂದು ಹೇಳಿತ್ತು. ಇಲ್ಲಿ ಆ ಆದೇಶದ ಪ್ರತಿಯನ್ನು ಲಗತ್ತಿಸಿ ಅದರಂತೆ 15-8-2022 ರಂದು ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಎಂದು ಪತ್ರದಲ್ಲಿ ತಿಳಿಸಲಾಗಿದೆ.

26-1-2023 ರಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಶಾಲೆಗಳು, ಕಾಲೇಜುಗಳು ಮತ್ತು ಇತರ ಸಂಸ್ಥೆಗಳಿಂದ ದೇಶಾದ್ಯಂತ ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ವೈಭವದಿಂದ ಆಚರಿಸುವುದು ಕಡ್ಡಾಯವಾಗಿದೆ. 26-1-2023 ರಂದು ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸುವಂತೆ ನಾವು ರಾಜ್ಯ ಸರ್ಕಾರ ಮತ್ತು ಕಂದಾಯ ಇಲಾಖೆಯನ್ನು ಕೋರುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಡಿಸೆಂಬರ್‌ನಲ್ಲಿಯೂ ರಾಜ್ಯ ಸರ್ಕಾರಕ್ಕೆ ಪತ್ರ

ಡಿಸೆಂಬರ್‌ನಲ್ಲಿಯೂ ರಾಜ್ಯ ಸರ್ಕಾರಕ್ಕೆ ಪತ್ರ

ಈ ಕುರಿತು ರಾಜ್ಯ ಸರಕಾರ ಹಾಗೂ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವೇದಿಕೆಯ ಸದಸ್ಯ ಯಶವಂತಕುಮಾರ್ ಆರೋಪಿಸಿದ್ದಾರೆ. ನಾವು ರಾಜ್ಯ ಸರ್ಕಾರ ಮತ್ತು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇವೆ. ಆದರೆ ಅವರು ನಮ್ಮ ಮನವಿಗೆ ಸ್ಪಂದಿಸಿಲ್ಲ. ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಅವರೊಂದಿಗೆ ಸೋಮವಾರ ಸಭೆ ನಡೆಸಲಿದ್ದೇವೆ. ವೇದಿಕೆಯು ಕಳೆದ ವರ್ಷ ಡಿಸೆಂಬರ್‌ನಲ್ಲಿಯೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಧಿಕಾರಿಗೆ ಪತ್ರ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್‌ಗೆ ಸೇರಿದ ಆಸ್ತಿ

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್‌ಗೆ ಸೇರಿದ ಆಸ್ತಿ

ಕಳೆದ ವರ್ಷ ಜೂನ್‌ನಲ್ಲಿ ಈದ್ಗಾ ಮೈದಾನದ ಮಾಲೀಕತ್ವದ ವಿವಾದಕ್ಕೆ ಸಿಲುಕಿತ್ತು. ನಗರದ ಮಹಾನಗರ ಪಾಲಿಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಟದ ಮೈದಾನವನ್ನು ತನ್ನ ಆಸ್ತಿ ಎಂದು ಹೇಳಿಕೊಂಡರೆ, ಮುಸ್ಲಿಂ ಸಂಘಟನೆಗಳು ಭೂಮಿ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್‌ಗೆ ಸೇರಿದ್ದು ಎಂದು ವಾದಿಸಿದರು.

ನಾಗರಿಕ ಆಸ್ತಿ ಎಂದು ಸೂಚನೆ

ನಾಗರಿಕ ಆಸ್ತಿ ಎಂದು ಸೂಚನೆ

ಈ ಸ್ಥಳದಲ್ಲಿ ಗಣೇಶ ಚತುರ್ಥಿ ಮತ್ತು ಇತರ ಹಬ್ಬಗಳನ್ನು ನಡೆಸಲು ಹಲವಾರು ಹಿಂದೂ ಸಂಘಟನೆಗಳು ಅನುಮತಿ ಕೋರಿದ ನಂತರ ಜೂನ್, 2021 ರಲ್ಲಿ ವಿವಾದ ಭುಗಿಲೆದ್ದಿತು. 1974ರ ಮಹಾನಗರದ ಸಮೀಕ್ಷೆಯ ಪ್ರಕಾರ, ಈದ್ಗಾ ಮೈದಾನವು ನಗರದ ಪಾಲಿಕೆಗೆ ಸೇರಿದ ಆಟದ ಮೈದಾನ ಮತ್ತು ನಾಗರಿಕ ಆಸ್ತಿ ಎಂದು ಸೂಚಿಸಲಾಗಿದೆ ಎಂದು ಬಿಬಿಎಂಪಿ ಹೇಳಿಕೊಂಡಿದೆ. ವಕ್ಫ್ ಮಂಡಳಿಯು 2.1 ಎಕರೆ ವಿವಾದಿತ ಭೂಮಿ ನೋಂದಾಯಿತ ವಕ್ಫ್ ಆಸ್ತಿಯಾಗಿದೆ ಮತ್ತು ಇದು 1850 ರ ದಶಕದಿಂದಲೂ ಇದೆ ಎಂದು ಪ್ರತಿಪಾದಿಸಿತು.

ಆಟದ ಮೈದಾನವಾಗಿ ಬಳಸಲು ಆದೇಶ

ಆಟದ ಮೈದಾನವಾಗಿ ಬಳಸಲು ಆದೇಶ

ಬಿಬಿಎಂಪಿಯ ಆದೇಶದ ವಿರುದ್ಧ ವಕ್ಫ್ ಬೋರ್ಡ್ ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಮೈದಾನವು ಕಂದಾಯ ಇಲಾಖೆಗೆ ಸೇರಿದೆ ಎಂದು ಹೇಳಿದೆ. ಕಳೆದ ವರ್ಷ ಆಗಸ್ಟ್ 25ರಂದು ಮಧ್ಯಂತರ ಆದೇಶದಲ್ಲಿ ಏಕಸದಸ್ಯ ಪೀಠವು ಈ ಮೈದಾನವನ್ನು ಮುಸ್ಲಿಂ ಹಬ್ಬಗಳನ್ನು ಆಚರಿಸಲು ಮತ್ತು ಇತರ ಸಮಯದಲ್ಲಿ ಆಟದ ಮೈದಾನವಾಗಿ ಬಳಸಬೇಕೆಂದು ಆದೇಶಿಸಿತು. ಅಲ್ಲದೆ ಭೂಮಿಯ ಮೇಲಿನ ಯಥಾಸ್ಥಿತಿಗೆ ನಿರ್ದೇಶನ ನೀಡಿದೆ. ಆಗಸ್ಟ್ 15 ರಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಗಿ ಭದ್ರತೆಯ ನಡುವೆ ಕಂದಾಯ ಇಲಾಖೆ ಅಧಿಕಾರಿಗಳು ಮೈದಾನದಲ್ಲಿ ಭಾರತೀಯ ಧ್ವಜವನ್ನು ಹಾರಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+