ಬೆಂಗಳೂರಿನ ಇಂದಿರಾ ಕ್ಯಾಂಟೀನ್ಗಳಲ್ಲಿ ಇಡ್ಲಿ ಸಿಗುತ್ತಿಲ್ಲ!
ಬೆಂಗಳೂರು, ಅಕ್ಟೋಬರ್ 16 : ಬೆಂಗಳೂರು ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ಮತ್ತೆ ಸುದ್ದಿಯಲ್ಲಿದೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕ್ಯಾಂಟೀನ್ನಲ್ಲಿ ಇಡ್ಲಿ, ಸಾಂಬಾರ್ ಸಿಗುತ್ತಿಲ್ಲ. ಪೊಂಗಲ್, ರೈಸ್ ಬಾತ್ ಮಾತ್ರ ಸಿಗುತ್ತಿದೆ.
ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆ, ಆಹಾರ ಸರಬರಾಜಿಗೆ ಬಿಬಿಎಂಪಿ ಹೊಸ ಟೆಂಡರ್ ಕರೆದಿತ್ತು. ಟೆಂಡರ್ ಅಂತಿಮಗೊಂಡು ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, ಕಿಚನ್ ಹಸ್ತಾಂತರವಾಗದ ಕಾರಣ ಇಡ್ಲಿಗೆ ಕತ್ತರಿ ಬಿದ್ದಿದೆ.
ಆಹಾರ ತಯಾರು ಮಾಡುವ ಅಡುಗೆ ಮನೆಗಳು ಹಳೆಯ ಟೆಂಡರ್ದಾರರ ಕೈಯಲ್ಲಿಯೇ ಉಳಿದಿವೆ. ಇದರಿಂದಾಗಿ ಹೊಸ ಟೆಂಡರ್ ಪಡೆದವರು ಇಂದಿರಾ ಕ್ಯಾಂಟೀನ್ಗಳಿಗೆ ಇಡ್ಲಿ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ.

ಪಶ್ಚಿಮ ಬೆಂಗಳೂರಿನಲ್ಲಿ 44 ಇಂದಿರಾ ಕ್ಯಾಂಟೀನ್, 4 ಮೊಬೈಲ್ ಕ್ಯಾಂಟೀನ್ಗಳಿಗೆ ಉಪಹಾರ, ಊಟ ಮತ್ತು ರಾತ್ರಿಯ ಊಟ ಸರಬರಾಜು ಮಾಡುವ ಟೆಂಡರ್ ಅದಮ್ಯ ಚೇತನದ ಮುಖ್ಯಸ್ಥೆ ತೇಜಸ್ವಿನಿ ಅನಂತ್ ಕುಮಾರ್ ಪಡೆದಿದ್ದಾರೆ.
ಆದರೆ, ಕಿಚನ್ ಹಸ್ತಾಂತರವಾಗದ ಕಾರಣ ಇಡ್ಲಿ ಪೂರೈಕೆ ಮಾಡುವಂತಿಲ್ಲ. ಹಲಸೂರು, ಎಸ್ಕೆ ಗಾರ್ಡನ್, ಕಾಚರಕನಹಳ್ಳಿ, ಮನೋರಾಯನಪಾಳ್ಯ ಸೇರಿದಂತೆ ಇತರ ಪ್ರದೇಶಗಳಿಗೆ ಆಹಾರ ವಿತರಣೆ ಮಾಡುವ ಮೊಬೈಲ್ ಕ್ಯಾಂಟೀನ್ ವಾಹನಗಳನ್ನು ಸಹ ಬಿಬಿಎಂಪಿ ಇನ್ನೂ ಹಸ್ತಾಂತರ ಮಾಡಿಲ್ಲ.
"ಆದಮ್ಯ ಚೇತನದ ಕಿಚನ್ನಲ್ಲಿ ಇಡ್ಲಿ ಮಾಡುವ ಯೂನಿಟ್ ಸ್ಥಾಪನೆ ಮಾಡಲು ಸಾಧ್ಯವಿಲ್ಲ. ಇದರ ವೆಚ್ಚ ಸುಮಾರು 40 ಲಕ್ಷ ಆಗುತ್ತದೆ. ಬಿಬಿಎಂಪಿ ಕಿಚನ್ ಹಸ್ತಾಂತರ ಮಾಡಲಿದೆ ಎಂದು ನಾವು ಕಾಯುತ್ತಿದ್ದೇವೆ" ಎಂದು ತೇಜಸ್ವಿನಿ ಅನಂತ್ ಕುಮಾರ್ ಹೇಳಿದ್ದಾರೆ.
ಇಂದಿರಾ ಕ್ಯಾಂಟೀನ್ನಲ್ಲಿ ಬೆಳಗಿನ ಉಪಹಾರಕ್ಕೆ ಇಡ್ಲಿ, ಸಾಂಬಾರ್, ಚಟ್ನಿ ಸಿಗುತ್ತಿಲ್ಲ. ಆದ್ದರಿಂದ, ಕ್ಯಾಂಟೀನ್ಗೆ ಬಂದ ಜನರಿಗೆ ಪೊಂಗಲ್, ರೈಸ್ ಬಾತ್ ಪೂರೈಕೆ ಮಾಡಲಾಗುತ್ತಿದೆ. ಅಡುಗೆ ಮನೆ ಹಸ್ತಾಂತರವಾದರೆ ಕ್ಯಾಂಟೀನ್ ಮೆನುವಿನಲ್ಲಿ ಇಡ್ಲಿ ಮತ್ತೆ ಸೇರಲಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, "ನಾನು ಈ ಕುರಿತು ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತೇನೆ. ಶೀಘ್ರವೇ ಸಮಸ್ಯೆ ಬಗೆಹರಿಸಲು ಪ್ರಯತ್ನ ನಡೆಸುತ್ತೇನೆ" ಎಂದು ಹೇಳಿದ್ದಾರೆ.
5 ರೂ. ಗೆ ಉಪಹಾರ, 10 ರೂ.ಗೆ ಊಟ ನೀಡುವ ಮಹತ್ವದ ಉದ್ದೇಶದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೊಳಿಸಲಾಯಿತು. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಕ್ಯಾಂಟೀನ್ ನಿರ್ವಹಣೆ ನೋಡಿಕೊಳ್ಳುತ್ತದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications