ಹೊಸವರ್ಷಕ್ಕೆ ಬೆಂಗಳೂರಿಗರು ಗುಂಡು ಹಾಕದಿದ್ದರೆ ಸರ್ಕಾರಕ್ಕೆಷ್ಟು ನಷ್ಟ?
Recommended Video

ಬೆಂಗಳೂರು, ಡಿಸೆಂಬರ್ 15 : ಹೊಸ ವರ್ಷದ ಹಿಂದಿನ ದಿನ ಮತ್ತು ಹೊಸ ವರ್ಷದಂದು ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಿದರೆ ಸರ್ಕಾರಕ್ಕೆ 70 ಕೋಟಿ ನಷ್ಟ ಉಂಟಾಗಲಿದೆ.
ಹೊಸ ವರ್ಷದ ಮುನ್ನಾದಿನ ಹಾಗೂ ಹೊಸ ವರ್ಷದ ಮೊದಲ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಂಗಳೂರು ನಗರದಲ್ಲಿ ಮದ್ಯ ಮಾರಾಟ ನಿಷೇಧ ಮಾಡಿದರೆ 80 ಲಕ್ಷ ಲೀಟರ್ ಮದ್ಯ ಮಾರಾಟ ನಿಂತು ಹೋಗಿ ಸುಮಾರು 70 ಕೋಟಿ ನಷ್ಟ ಉಂಟಾಗಲಿದೆ.
ಹೊಸ ವರ್ಷಾಚರಣೆ ನೆಪದಲ್ಲಿ ಮದ್ಯ ಸೇವನೆ ಮಾಡಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರುವ ಡಿಸೆಂಬರ್ 31 ಹಾಗೂ 2018 ರ ಜನವರಿ 1 ರಂದು ಬೆಂಗಳೂರು ನಗರದಲ್ಲಿ ಮದ್ಯ ಮಾರಾಟ ನಿರ್ಬಂಧಿಸುವಂತೆ ಸೂಚನೆ ನೀಡಬೇಕು ಎಂದು ಪುರುಷ ರಕ್ಷಣಾ ವೇದಿಕೆ ಕಾರ್ಯಕರ್ತ ನಾಗೇಶ್ ಎಂಬುವವರು ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಡಿ.15 ರಂದು ಈ ಕುರಿತು ಆದೇಶ ಹೊರ ಬೀಳುವ ನಿರೀಕ್ಷೆ ಇದೆ.

ಒಂದು ವೇಳೆ ಹೈಕೋರ್ಟ್ ಎರಡು ದಿನಗಳ ಕಾಲ ಮದ್ಯ ಮಾರಾಟ ಬೇಡ ಎಂದು ಹೇಳಿದಲ್ಲಿ ಬೆಂಗಳೂರು ನಗರದಲ್ಲಿ ಸರಿಸುಮಾರು 80 ಲಕ್ಷ ಲೀಟರ್ ಮದ್ಯ ಮಾರಾಟಕ್ಕೆ ತಡೆ ಬೀಳಲಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ 70 ಕೋಟಿ ರು.ಗಳಷ್ಟು ಆದಾಯ ಖೋತಾ ಆಗುವ ಸಾದ್ಯತೆಗಳಿವೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಅಂದಾಜು ಮಾಡಿದ್ದಾರೆ.
ಪ್ರತಿ ತಿಂಗಳು ರಾಜ್ಯದಲ್ಲಿ 45 ಲಕ್ಷ ಕಾರ್ಟೂನ್ ಬಾಕ್ಸ್ಗಳಷ್ಟು ಮದ್ಯ ಮಾರಾಟ ಆಗುತ್ತದೆ. ಒಂದು ಕಾರ್ಟೂನ್ ಬಾಕ್ಸ್ನಲ್ಲಿ 9 ಲೀಟರ್ ಮದ್ಯ ಇರುತ್ತದೆ. ಅಂದರೆ ತಿಂಗಳಿಗೆ 4.5 ಕೋಟಿ ಲೀಟರ್ ಮದ್ಯ ಮಾರಾಟ ಆಗುತ್ತದೆ. ಆ ಪೈಕಿ ಶೇ.೩೫ರಷ್ಟು ಮದ್ಯ ಬೆಂಗಳೂರು ನಗರವೊಂದರಲ್ಲೇ ಮಾರಾಟ ಆಗುತ್ತದೆ.
ಇದೇ ವೇಳೆ ಮಾಸಿಕ 1,418 ಕೋಟಿ ರು.ಗಳು ಮದ್ಯ ಮಾರಾಟದಿಂದ ಸರ್ಕಾರಕ್ಕೆ ಆದಾಯ ಬರುತ್ತದೆ. ಅಂದರೆ ದಿನಕ್ಕೆ 48 ಕೋಟಿ ರು. ಬರುತ್ತದೆ. ಆ ಪೈಕಿ ಶೇ.35ರಷ್ಟು ಆದಾಯ ಬೆಂಗಳೂರು ನಗರದಿಂದ ಸಂಗ್ರಹವಾಗುತ್ತದೆ. ಹೀಗಾಗಿ ದಿನದ 18 ಕೋಟಿ ರು.ಗಳ ಆದಾಯ ಬೆಂಗಳೂರು ನಗರದ ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ದಕ್ಕುತ್ತದೆ.
ವರ್ಷದ ಕೊನೆಯ ದಿನ ಹಾಗೂ ಮೊದಲ ದಿನ ಮದ್ಯ ಮಾರಾಟದ ಪ್ರಮಾಣ ಸಾಮಾನ್ಯಕ್ಕಿಂತ ಒಂದೂವರೆಯಿಂದ ಎರಡು ಪಟ್ಟು ಹೆಚ್ಚಾಗಿರುತ್ತದೆ. ಅಂದರೆ ವರ್ಷಾಂತ್ಯಕ್ಕೆ ಬೆಂಗಳೂರು ನಗರವೊಂದರಲ್ಲೇ 80 ಲಕ್ಷದಿಂದ ಒಂದು ಕೋಟಿ ಲೀಟರ್ ಮದ್ಯ ಮಾರಾಟವಾಗುತ್ತದೆ. ಅದರಿಂದ 70 ಕೋಟಿ ರು.ಗಳ ಆದಾಯ ಸಂದಾಯವಾಗುತ್ತದೆ ಎನ್ನುತ್ತವೆ ಅಬಕಾರಿ ಇಲಾಖೆಯ ಮೂಲಗಳು.
ಹೀಗಾಗಿ ಬೆಂಗಳೂರಿನ ನಾಗರಿಕರು ಮಾತ್ರವಲ್ಲ, ರಾಜ್ಯ ಸರ್ಕಾರ ಕೂಡ ಶುಕ್ರವಾರ ಕರ್ನಾಟಕ ಹೈಕೋರ್ಟ್ ನೀಡುವ ಆದೇಶದತ್ತ ದೃಷ್ಟಿ ನೆಟ್ಟಿದೆ. ವಿಶೇಷವಾಗಿ ಅಬಕಾರಿ ಇಲಾಖೆ ಲಾಭ-ನಷ್ಟ ಲೆಕ್ಕಾಚಾರದಲ್ಲಿ ತೊಡಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications