"ಹಿಂದಿಯವರು ಕರ್ನಾಟಕದಿಂದ ಹೋದ್ರೆ ಕನ್ನಡಿಗರ ಬಳಿ ₹10 ಕೂಡ ಗತಿ ಇರಲ್ಲ"
ಬೇರೆ ಊರಿನಿಂದ ಬಂದು ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಉತ್ತರ ಭಾರತೀಯರ ದರ್ಪ, ಅಟ್ಟಹಾಸ ದಿನೇ ದಿನೇ ಮಿತಿ ಮೀರಿದೆ. ಇಂತಹ ಘಟನೆ ದಿನಕ್ಕೊಂದು ಬೆಳಕಿಗೆ ಬರುತ್ತಿದ್ದು, ಬೆಂಗಳೂರಿನಲ್ಲಿ ಮತ್ತೊಬ್ಬ ನಾರ್ಥಿ ಕನ್ನಡಿಗರು, ಕರ್ನಾಟಕದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾನೆ. ಡೆಲಿವರಿ ಬಾಯ್ಗೆ ಮನಬಂದಂತೆ ನಿಂದಿಸಿದ್ದಲ್ಲದೆ, ಹಿಂದಿ ಭಾಷಿಕರು ಬೆಂಗಳೂರು ಬಿಟ್ಟರೆ ನಿಮ್ಮ ಬಳಿ ಟೊಮ್ಯಾಟೋ ಖರೀದಿಸಲೂ ಹತ್ತು ರೂಪಾಯಿ ಇರೋದಿಲ್ಲ ಎಂದಿದ್ದಾನೆ.
ಕನ್ನಡ ಮತ್ತು ಕನ್ನಡಿಗರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಭಾರತ ಮೂಲದ ಮಸಾಜ್ ಥೆರಪಿಸ್ಟ್ ಮಿಥುನ್ ಸರ್ಕಾರ್ ಎಂಬಾತನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಡೆಲಿವರಿ ಬಾಯ್ ರಂಜಿತ್ ಎಂಬುವವರಿಗೆ ನಿಂದಿಸಿ, ಇಲ್ಲಿ ಕನ್ನಡ ಸೂಪರ್ಸ್ಟಾರ್ ಅಲ್ಲ. ಹಿಂದಿ ಭಾಷಿಕರು ಬೆಂಗಳೂರು ತೊರೆದರೆ ಹತ್ತು ರೂಪಾಯಿ ಇರಲ್ಲ ಎಂದು ಎಗರಾಡಿದ್ದಾನೆ. ಕೊನೆಗೆ ಪೊಲೀಸರು ಮಿಥುನ್ ಸರ್ಕಾರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಕರ್ನಾಟಕದ ರುಚಿ ತೋರಿಸಿದ್ದಾರೆ.

ಕನ್ನಡಿಗರು ತುಂಬಾ ನೌಟಂಕಿ ಜನ!
ಈ ಘಟನೆ ಬೀಗೂರು ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಡೆಲಿವರಿ ಬಾಯ್ ರಂಜಿತ್ ಅವರೊಂದಿಗೆ ಮಸಾಜ್ ಥೆರಪಿಸ್ಟ್ ಟೀ-ಶರ್ಟ್ ಪಾರ್ಸೆಲ್ ಡೆಲಿವರಿ ಕುರಿತು ಮಾತುಕತೆ ನಡೆಸಿದ ವೇಳೆ ಈ ವಾಗ್ವಾದ ಉಂಟಾಗಿದೆ. ಬೆಂಗಳೂರಲ್ಲಿ ಶೇ 70ರಷ್ಟು ಹಿಂದಿಯವರೇ ಇದ್ದೇವೆ. ನಾವು ಇಲ್ಲಿಂದ ಹೋದರೆ ಕನ್ನಡಿಗರ ಬಳಿ ಟೊಮೆಟೊ ತೆಗೆದುಕೊಳ್ಳೋಕೂ 10 ರೂಪಾಯಿ ಕೂಡ ಗತಿ ಇರೋದಿಲ್ಲ, ಕನ್ನಡಿಗರು ತುಂಬಾ ನೌಟಂಕಿ ಜನ ಎಂದಿದ್ದಾನೆ. ಈ ವಿಡಿಯೋ ಅನ್ನು ಡೆಲಿವರಿ ಬಾಯ್ ರೆಕಾರ್ಡ್ ಮಾಡಿಕೊಂಡಿದ್ದ.
ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಕನ್ನಡಿಗರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಭಾಷೆ ಮತ್ತು ಕರ್ನಾಟಕ ಜನರ ಗೌರವಕ್ಕೆ ತಡೆಗಾಗಿ ಸರ್ಕಾರ ಮತ್ತು ಸಂಘಟನೆಗಳು ಕ್ರಮ ತೆಗೆದುಕೊಂಡಿದ್ದಾರೆ. ಬಳಿಕ ಮಿಥುನ್ ವಿರುದ್ಧ ಕರವೇ ದೂರು ದಾಖಲಿಸಿತ್ತು. ಈ ಹಿನ್ನೆಲೆ ಎಫ್ಐಆರ್ ದಾಖಲಿಸಿಕೊಂಡಿದ್ದ ಬೊಮ್ಮನಹಳ್ಳಿ ಪೋಲಿಸರು ರಾತ್ರಿಯಿಡೀ ಆತನ ಟವರ್ ಲೋಕೆಷನ್ ಪತ್ತೆ ಹಚ್ಚಿದ್ದಾರೆ. ಕನ್ನಡಿಗರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಕ್ಕೆ ಚೆನ್ನಾಗಿ ಬೆಂಡೆತ್ತಿದ್ದಾರೆ.
ಆರೋಪಿ ಬೇಗೂರು ಮುಖ್ಯ ರಸ್ತೆಯ ಹೊಂಗಸಂದ್ರದ ನಿವಾಸಿ, ಕಳೆದ ಒಂಬತ್ತು ವರ್ಷಗಳಿಂದ ಸಲೂನ್ ಮತ್ತು ಸ್ಪಾದಲ್ಲಿ ಮಸಾಜ್ ಥೆರಪಿಸ್ಟ್ ಆಗಿ ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದಾನೆ. ಆದರೂ ಕನ್ನಡಿಗರು, ಕರ್ನಾಟಕದವರ ಮೇಲೆ ದರ್ಪ ತೋರಿರುವುದು ಕೋಪಕ್ಕೆ ಕಾರಣವಾಗಿದೆ. ಇಂತವರನ್ನು ಮೊದಲು ಕರ್ನಾಟಕದಿಂದ ಹೊರಗೆ ಓಡಿಸಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications