ಸಿಎಂ ಇಬ್ರಾಹಿಂ ಪರ ಎಚ್.ವಿಶ್ವನಾಥ್ ಗುಡುಗು: ನಾನಾಗಿದ್ದರೆ 6 ವರ್ಷ ಅಮಾನತು ಮಾಡುತ್ತಿದ್ದೆ
ಬೆಂಗಳೂರು, ಅಕ್ಟೋಬರ್ 17: ಲೋಕಸಭಾ ಚುನಾವಣೆ 2024 ಸಿದ್ಧತೆಯ ಭಾಗವಾಗಿ ಬಿಜೆಪಿ ಹಾಗೂ ಕರ್ನಾಟಕ ಸ್ಥಳೀಯ ಪಕ್ಷ ಜೆಡಿಎಸ್ ಮೈತ್ರಿ ಮುಂದಾಗಿವೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪರ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾತ್ ಬ್ಯಾಟ್ ಬೀಸಿದ್ದಾರೆ. ನಾನು ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದರೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರನ್ನು 6 ವರ್ಷ ಅಮಾನತು ಮಾಡುತ್ತಿದ್ದೆ ಎಂದು ಅವರು ಗುಡುಗಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಎಚ್ ವಿಶ್ವನಾಥ್ ಅವರು, ಒಬ್ಬ ರಾಜ್ಯಾಧ್ಯಕ್ಷನಾಗಿ ಸಿಎಂ ಇಬ್ರಾಹಿಂ ಅವರ ನಿಲುವು ಸರಿಯಾಗಿದೆ. ಏಕೆಂದರೆ ಅವರಿಗೆ ಉಚ್ಛಾಟನೆ ಮಾಡುವ ಅಧಿಕಾರ ಇದೆ ಎಂದು ಅವರ ಸ್ಟ್ಯಾಂಡ್ ಅನ್ನು ವಿಶ್ವನಾಥ್ ಬೆಂಬಲಿಸಿ ಮಾತನಾಡಿದರು.

ಎಚ್ಡಿ ಕುಮಾರಸ್ವಾಮಿ ಅವರು ವೈಯಕ್ತಿಕವಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಹೀಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕುಮಾರಸ್ವಾಮಿ ಅವರ ಜಾತ್ಯಾತೀತ ಎನ್ನುವ ಪದವನ್ನೇ ತೆಗೆದುಹಾಕಿ ಬಿಟ್ಟಿದ್ದಾರೆ. ಯಾರು ಚಮಚಾಗಿರಿ ಮಾಡುತ್ತಾರೆ ಅವರು ಮೈತ್ರಿಗೆ ಒಪ್ಪುತ್ತಾರೆ ಎಂದು ಸೋಮವಾರ ಸಿಎಂ ಇಬ್ರಾಹಿಂ ಹೇಳಿಕೆ ಬೆಂಬಲಿಸಿ ಜೆಡಿಎಸ್ ನಾಯಕ ಮೈತ್ರಿ ವಿರುದ್ಧ ಎಚ್ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ಬಿಜೆಪಿ ಜೆಡಿಎಸ್ ಮೈತ್ರಿ ಕುರಿತು ಸಿಡಿದೆದ್ದಿದ್ದ ಸಿಎಂ ಇಬ್ರಾಹಿಂ ಅವರು ಸ್ವಪಕ್ಷದ ವಿರುದ್ಧವೇ ಗುಡುಗಿದ್ದರು. ಎಚ್ಡಿ ಕುಮಾರಸ್ವಾಮಿ ಅವರ ಉಚ್ಚಾಟನೆ ಕುರಿತು ಮಾತನಾಡಿದ್ದರು.

ಸಿಎಂ ಇಬ್ರಾಹಿಂ ಹೆಸರಲ್ಲಿ ಉಚ್ಛಾಟನೆಯ ನಕಲಿ ಪತ್ರ
ಇದೀಗ ಮಂಗಳವಾರ ಸಿಎಂ ಇಬ್ರಾಹಿಂ ಅವರ ಲೆಟರ್ಹೆಡ್ನಲ್ಲಿ ಅವರ ನಕಲಿ ಸಹಿ ಒಳಗೊಂಡ ಪತ್ರ ಓಡಾಡುತ್ತಿದೆ. ಅದರಲ್ಲಿ ಜೆಡಿಎಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದರೆಂದು ಪತ್ರದಲ್ಲಿ ಉಲ್ಲೇಖಿಸಿ ಹರಿಬಿಡಲಾಗಿದೆ. ಆದರೆ ಇದೆಲ್ಲವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ತಳ್ಳಿ ಹಾಕಿದ್ದಾರೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications