ಲಾಕ್ ಡೌನ್ ವಿಸ್ತರಣೆ ಸಾಧ್ಯವೇ ಇಲ್ಲ ಎಂದ ಸಿಎಂ ಬಿಎಸ್ವೈ: ತಜ್ಞರು ನೀಡಿದ ಹೊಸ ಸಲಹೆ
ಬೆಂಗಳೂರು, ಜುಲೈ 18: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಜಾಸ್ತಿಯಾಗುತ್ತಿರುವುದರಿಂದ, ಲಾಕ್ ಡೌನ್ ವಿಸ್ತರಣೆ ಮಾಡುವುದೇ ಸರಿಯಾದ ಮಾರ್ಗ ಎಂದು ತಜ್ಞರು ಸರಕಾರಕ್ಕೆ ಸಲಹೆಯನ್ನು ನೀಡಿದ್ದಾರೆ.
Recommended Video
ರಾಜಧಾನಿಯ 198 ವಾರ್ಡ್ ಗಳ ಪೈಕಿ 196 ವಾರ್ಡ್ ಗಳಲ್ಲಿ ಸೋಂಕಿತರು ಇದ್ದಾರೆ. ಈ ವೇಳೆ, ಲಾಕ್ ಡೌನ್ ಸಡಿಲಿಸಿದರೆ, ಪರಿಸ್ಥಿತಿ ಕೈತಪ್ಪಿ ಹೋಗುತ್ತದೆ. ನಾವು, ಜಾಗರೂಕತೆಯಿಂದ ಇರಬೇಕಾದ ಸಮಯವಿದು. ಇಲ್ಲದಿದ್ದರೆ, ಜುಲೈ ಅಂತ್ಯದೊಳಗೆ ಕೇಸುಗಳು ಡಬಲ್ ಆಗಲಿದೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ.
ಆರ್ಥಿಕ ಕಾರಣದಿಂದ ಲಾಕ್ ಡೌನ್ ಮುಂದುವರಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನೇರಾನೇರವಾಗಿ ಈಗಾಗಲೇ ಹೇಳಿದ್ದಾರೆ. ಲಾಕ್ ಡೌನ್ ಮುಂದುವರಿಸಲು ಸಾಧ್ಯವೇ ಆಗುವುದಿಲ್ಲ ಎನ್ನುವುದಾದರೆ, ಅದಕ್ಕೆ ತಜ್ಞರು ಪರ್ಯಾಯ ಮಾರ್ಗದ ಸಲಹೆಯನ್ನು ನೀಡಿದ್ದಾರೆ.

ಲಾಕ್ ಡೌನ್ ಅನ್ನು ಇನ್ನು ಕನಿಷ್ಠ ಪಕ್ಷ ಒಂದು ವಾರವಾದರೂ ವಿಸ್ತರಣೆಯನ್ನು ಮಾಡಲಿ. ಅದು ಸಾಧ್ಯವೇ ಇಲ್ಲ ಎಂದಾದಲ್ಲಿ, ಹಾಟ್ ಸ್ಪಾಟ್ ಪ್ರದೇಶಗಳನ್ನಾದರೂ ಲಾಕ್ ಡೌನ್ ಮಾಡಿ ಎನ್ನುವ ಪರ್ಯಾಯ ಮಾರ್ಗವೇ ಸೂಕ್ತ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಹಾಟ್ ಸ್ಪಾಟ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳೋಣ, ಮತ್ತೆ ಲಾಕ್ ಡೌನ್ ವಿಸ್ತರಣೆ ಬೇಡ. ಈ ಬಗ್ಗೆ, ಇನ್ನೆರಡು ದಿನಗಳಲ್ಲಿ ನಾನೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ. ಯಾರೂ ಈ ಬಗ್ಗೆ ಹೇಳಿಕೆ ನೀಡಿ, ಗೊಂದಲ ಸೃಷ್ಟಿಸಬೇಡಿ ಎಂದು ಸಿಎಂ ಬಿಎಸ್ವೈ, ಸಚಿವರಿಗೆ ನಿರ್ದೇಶನ ನೀಡಿದ್ದಾರೆ.
''ಕೊವಿಡ್ ವಿರುದ್ಧ ಹೋರಾಡಲು ನಮಗೆ ಇನ್ನು ಸ್ವಲ್ಪ ಸಮಯ ಸಿಕ್ಕರೆ ಸೂಕ್ತ, ಹಾಗಾಗಿ ಇನ್ನೊಂದು ವಾರಗಳ ಲಾಕ್ಡೌನ್ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ'' ಎಂದು ಬೆಂಗಳೂರು ಮೇಯರ್ ಗೌತಂ ಕುಮಾರ್ ಹೇಳಿದ್ದರು.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications