ಸರ್ಕಾರಕ್ಕೆ ಧಮ್ ಇದ್ದರೆ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸಲಿ: ಬ್ರಿಜೇಶ್ ಕಾಳಪ್ಪ
ಬೆಂಗಳೂರು, ಅ.1: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧಮ್ ಇದ್ದರೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಿರಿ ಎಂದು ಬಿಜೆಪಿ ಸಮಾವೇಶದಲ್ಲಿ ಹೇಳಿದ್ದರು. ಅದೇ ರೀತಿ ಧಮ್ ಇದ್ದರೆ ಬಿಬಿಎಂಪಿಗೆ ಚುನಾವಣೆ ನಡೆಸಲಿ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡರಾದ ಬ್ರಿಜೇಶ್ ಕಾಳಪ್ಪ ಹೇಳಿದ್ದಾರೆ.
ಬಿಜೆಪಿಗೆ ಬೆಂಗಳೂರಿನ ಹಿತಕ್ಕಿಂತ ಅಡ್ಡದಾರಿಯಲ್ಲಿ ಅಧಿಕಾರ ಚಲಾಯಿಸುವುದೇ ಮುಖ್ಯವೆಂಬುದು ಬಿಬಿಎಂಪಿ ಚುನಾವಣೆಯ ಪದೇಪದೇ ಮುಂದೂಡಿಕೆಯಿಂದ ಸ್ಪಷ್ಟವಾಗಿದೆ ಎಂದು ಬ್ರಿಜೇಶ್ ಕಾಳಪ್ಪ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು.
"ಕಳೆದ ಬಿಬಿಎಂಪಿ ಚುನಾವಣೆ ವೇಳೆ ಬೆಂಗಳೂರಿಗೆ ಆಗಮಿಸಿದ್ದ ನರೇಂದ್ರ ಮೋದಿ ಹಾಗೂ ಅಮಿತ್ ಷಾರವರು ಬೆಂಗಳೂರನ್ನು ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದ್ದರು. ಬಿಜೆಪಿಯು ಡಬಲ್ ಎಂಜಿನ್ ಕೇಳಿದ್ದರೆ, ಜನರು ದೇಶ, ರಾಜ್ಯ ಹಾಗೂ ಬಿಬಿಎಂಪಿಯಲ್ಲೂ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ತ್ರಿಬಲ್ ಎಂಜಿನ್ ನೀಡಿದರು. ಆದರೆ ಅಧಿಕಾರ ಸಿಕ್ಕ ಬಳಿಕೆ ಬೆಂಗಳೂರಿನ ಜನರನ್ನು ಬಿಜೆಪಿ ಮರೆತಿದ್ದು, ಬಿಬಿಎಂಪಿ ಚುನಾವಣೆಗೆ ಹೆದರುವ ಸ್ಥಿತಿ ತಲುಪಿದೆ. ಸರ್ಕಾರಕ್ಕೆ ಧಮ್ ಇದ್ದರೆ ಚುನಾವಣೆ ನಡೆಸಲಿ" ಎಂದು ಹೇಳಿದರು.

"ಮೃತಪಟ್ಟ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರಿ ನೀಡಿದ್ದಾರೆ. ಆದರೆ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಬಲಿಯಾದವರ ಕುಟುಂಬದವರಿಗೆ ನೌಕರಿ ನೀಡಿಲ್ಲ. ಬೆಂಗಳೂರಿಗರ ಬಗ್ಗೆ ಮುಖ್ಯಮಂತ್ರಿಗಿರುವ ತಾತ್ಸಾರವನ್ನು ಇದರಿಂದ ತಿಳಿಯಬಹುದು. ಬಿಬಿಎಂಪಿ ಚುನಾವಣೆ ನಡೆದರೆ ಜನರ ಸಮಸ್ಯೆಗಳಿಗೆ ಸ್ಪಂದಿಸಲು 243 ಜನಪ್ರತಿನಿಧಿಗಳು ಸಿಗುತ್ತಾರೆ ಎಂಬ ಯೋಚನೆ ಕೂಡ ಈ ಸರ್ಕಾರಕ್ಕಿಲ್ಲ. ಮೊನ್ನೆ ನೆರೆ ಬಂದಾಗ ಕೂಡ ಯಾರನ್ನು ಪ್ರಶ್ನಿಸಬೇಕು ಎಂಬ ಗೊಂದಲವು ಬೆಂಗಳೂರಿನ ಜನರನ್ನು ಕಾಡಿತು. ಬಿಬಿಎಂಪಿ ಚುನಾವಣೆ ನಡೆದರೆ ಬಿಜೆಪಿ ಗೆಲ್ಲುವುದಿಲ್ಲ ಎಂಬ ಕಾರಣಕ್ಕೆ ರಾಜ್ಯ ಸರ್ಕಾರವು ಚುನಾವಣೆಯನ್ನು ಮುಂದೂಡುತ್ತಲೇ ಬಂದಿದೆ" ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು.
"ಬೆಂಗಳೂರಿನ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ 28 ಶಾಸಕರಿದ್ದಾರೆ. ಅವರಲ್ಲಿ ಯಾರೂ ಕೂಡ ಬಿಬಿಎಂಪಿ ಚುನಾವಣೆ ನಡೆಯಬೇಕು ಎಂದು ಗಟ್ಟಿಧ್ವನಿಯಲ್ಲಿ ಕೇಳುವ ಪ್ರಯತ್ನ ಮಾಡಿಲ್ಲ. ಅವರ್ಯಾರಿಗೂ ಬಿಬಿಎಂಪಿ ಚುನಾವಣೆ ನಡೆಯುವುದು ಹಾಗೂ ಬೆಂಗಳೂರಿನ ಸಮಸ್ಯೆಗಳಿಗೆ ಜವಾಬ್ದಾರಿ ಹೊರುವವರು ಇರಬೇಕು ಎಂಬ ಕಾಳಜಿಯಿಲ್ಲ. ಆಮ್ ಆದ್ಮಿ ಪಾರ್ಟಿಯೊಂದೇ ಬಿಬಿಎಂಪಿ ಚುನಾವಣೆ ನಡೆಯಬೇಕೆಂದು ದೀರ್ಘಕಾಲದಿಂದ ಆಗ್ರಹಿಸುತ್ತಾ ಬಂದಿದೆ. ಏಕೆಂದರೆ ಎಎಪಿಗೆ ಮಾತ್ರ ಬೆಂಗಳೂರಿನ ಸಮಸ್ಯೆಗಳು ಕಾಣಿಸುತ್ತಿವೆ" ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications