ಅರೆ, ಸಿ.ಟಿ.ರವಿ ಏಕೆ ಹೀಗಂದರು? ಬಹುಮತ ಸಾಬೀತು ಆಗಲ್ವಾ?
ಬೆಂಗಳೂರು, ಮೇ 18: ಬಿಜೆಪಿಯ ಯಾರೇ ಶಾಸಕರು, ಮುಖಂಡರನ್ನು ಮಾತನಾಡಿಸಿದರೂ ಹೇಳುತ್ತಿರುವುದು ಒಂದೇ ನಾವು ಬಹುಮತ ಸಾಬೀತು ಮಾಡಿಯೇ ತಿರುತ್ತೇವೆ ಎಂದು, ಆದರೆ ಸಿ.ಟಿ.ರವಿ ಮಾತ್ರ ಯಾಕೋ ಸ್ವಲ್ಪ ಭಿನ್ನವಾದ ಹೇಳಿಕೆ ನೀಡುತ್ತಿದ್ದಾರೆ ಇದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಹೌದು, ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, '1996ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಹುಮತ ಸಾಬೀತಾಗದಿದ್ದಾಗ ರಾಜಿನಾಮೆ ಕೊಟ್ಟು ಹೊರ ಹೊಗಿದ್ದರು, ಅದು ರಾಜಮಾರ್ಗ, ನಾವು ಆ ಮಾರ್ಗದಲ್ಲೇ ನಡೆಯುತ್ತೇವೆ' ಎಂದಿದ್ದಾರೆ.
ಯಡಿಯೂರಪ್ಪ, ಅನಂತ್ಕುಮಾರ್, ಶೋಭಾ ಕರಂದ್ಲಾಜೆ, ಈಶ್ವರಪ್ಪ ಎಲ್ಲರೂ ಖಂಡಿತ ಬಹುಮತ ಸಾಬೀತು ಮಾಡುತ್ತೇವೆ ಎಂದು ವಿಶ್ವಾಸದಿಂದ ಹೇಳುತ್ತಿರುವಾಗ ಸಿ.ಟಿ.ರವಿ ಅವರ ಈ ಹೇಳಿಕೆ ಅನುಮಾನ ಮೂಡಿಸಿದ್ದು, ನಾಳೆ ಬಹುಮತ ಸಾಬೀತಾಗದಿದ್ದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೆಯೇ ಎಂಬ ಅನುಮಾನ ಮೂಡಿದೆ.

ಮುಂದುವರೆದು ಮಾತನಾಡಿರುವ ಸಿ.ಟಿ.ರವಿ ಅವರು, ಸಿದ್ದರಾಮಯ್ಯ ಅವರು ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ನ ಏಳು ಶಾಸಕರಿಂದ ಮತ ಹಾಕಿಸಿಕೊಂಡಿದ್ದರು ಆದರೆ ಈಗ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ' ಎಂದರು.
ಕಾಂಗ್ರೆಸ್ ಶಾಸಕರಿಗೆ ಜೀವ ಬೆದರಿಕೆ ಎಂಬ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಹೇಳಿಕೆಗೆ ಸಿಟ್ಟಾದ ಸಿಟಿ ರವಿ, ಯಾವ ಶಾಸಕರಿಗೆ ಬೆದರಿಕೆ ಇದೆ ಎಂದು ಹೇಳಲಿ, ರಮ್ಯಾ ಅವರಿಗೆ ಬೆದರಿಕೆ ಇದ್ದರೂ ಹೇಳಲಿ ನಾನೇ ಭದ್ರತೆ ಕೊಡಿಸುತ್ತೇನೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications