ಮಮತಾ ಬ್ಯಾನರ್ಜಿ ಸಿಟ್ಟಾಗಲು ರಾಜ್ಯಪಾಲರೇ ಕಾರಣ!
ಬೆಂಗಳೂರು, ಮೇ 24: ನಿನ್ನೆ ಕುಮಾರಸ್ವಾಮಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಂದಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಹಳ ಸಿಟ್ಟಾಗಿದ್ದರು, ದೇವೇಗೌಡ, ಕುಮಾರಸ್ವಾಮಿ ಅವರ ಬಳಿಯೂ ತಮ್ಮ ಅಸಮಾಧಾನ ತೋಡಿಕೊಂಡಿದ್ದರು ಅದಕ್ಕೆ ಕಾರಣ ಈಗ ತಿಳುದುಬಂದಿದೆ.
ಟ್ರಾಫಿಕ್ ಸಮಸ್ಯೆಯಿಂದಾಗಿ ಅವರು ವಿಧಾನಸೌಧಕ್ಕೆ ನಡೆದುಕೊಂಡು ಬರಬೇಕಾದದ್ದು ಅವರ ಸಿಟ್ಟಿಗೆ ಕಾರಣ. ಆದರೆ ಹಾಗೆ ಟ್ರಾಫಿಕ್ ಜಾಮ್ ಉಂಟಾಗಿ ಅವರ ವಾಹನ ಸಿಕ್ಕಿಕೊಳ್ಳಲು ಕಾರಣವಾಗಿದ್ದು ರಾಜ್ಯಪಾಲ ವಜುಭಾಯಿ ವಾಲಾ ಅಂತೆ.
ಟ್ರಾಫಿಕ್ ಸಮಸ್ಯೆಯಿಂದಾಗಿ ಮಮತಾಬ್ಯಾನರ್ಜಿ ಅವರ ಕಾರು ವಿಧಾನಸೌಧದಕ್ಕಿಂತಲೂ ಕೆಲವು ಮೀಟರ್ಗಳ ಹಿಂದೆಯೇ ಸಿಕ್ಕಿಹಾಕಿಕೊಂಡು ಬಿಟ್ಟಿತು ಹಾಗಾಗಿ ಅವರು ನಡೆದುಕೊಂಡೇ ವಿಧಾನಸೌಧಕ್ಕೆ ಬಂದರು. ಇದು ಅವರ ಸಿಟ್ಟಿಗೆ ಕಾರಣವಾಗಿತ್ತು.

ಪ್ರಮಾಣ ವಚನ ಕಾರ್ಯಕ್ರಮದ ವೇದಿಕೆಗೆ ಬಂದ ಮಮತಾ ಬ್ಯಾನರ್ಜಿ ಅವರು ಐಜಿ ನೀಲಮಣಿ ರಾಜು ಅವರನ್ನು ತರಾಟೆಗೆ ತೆಗೆದುಕೊಂಡರು, ದೇವೇಗೌಡ, ಕುಮಾರಸ್ವಾಮಿ ಅವರ ಬಳಿಯೂ ಸಿಟ್ಟು ಹೊರಹಾಕಿದರು. ಅದನ್ನು ಗಂಭೀರವಾಗಿ ಪರಿಗಣಿಸಿದ ಕುಮಾರಸ್ವಾಮಿ ನೀಲಮಣಿ ರಾಜು ಅವರಿಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದ್ದರು.
ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ ನೀಲಮಣಿ ರಾಜು ಅವರು, ಮಮತಾ ಬ್ಯಾನರ್ಜಿ ಅವರಿಗೆ ತೊಂದರೆ ಆಗಲು ರಾಜ್ಯಪಾಲರು ಕಾರಣ ಎಂದು ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಆಗಮಿಸುವ ವೇಳೆಗೆ ಸರಿಯಾಗಿ ರಾಜ್ಯಪಾಲರೂ ವಿಧಾನಸೌಧಕ್ಕೆ ಆಗಮಿಸಿದ ಕಾರಣ ರಾಜ್ಯಪಾಲರ ವಾಹನಕ್ಕೆ ಟ್ರಾಫಿಕ್ ಫ್ರೀ ಮಾಡುವ ಭರದಲ್ಲಿ ಮಮತಾ ಬ್ಯಾನರ್ಜಿ ಅವರ ವಾಹನ ಟ್ರಾಫಿಕ್ನಲ್ಲಿ ಸಿಕ್ಕಿಕೊಂಡಿದೆ ಎಂದು ನೀಲಮಣಿ ರಾಜು ಅವರು ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು ನಿನ್ನೆ ನಡೆದ ಘಟನೆಯನ್ನು ಗಂಭೀರ ಭದ್ರತಾ ಲೋಪ ಎಂದೇ ಪರಿಗಣಿಸಿದ್ದು ನೀಲಮಣಿ ರಾಜು ವಿರುದ್ಧ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications