National Horticulture Fair 2025: ಬೆಂಗಳೂರಲ್ಲಿ ರಾಷ್ಟ್ರೀಯ ತೋಟಗಾರಿಕೆ ಮೇಳ, ಅಪ್ಡೇಟ್ಸ್
ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (IIHR) ವತಿಯಿಂದ 04 ದಿನಗಳ ಕಾಲ 'ರಾಷ್ಟ್ರೀಯ ತೋಟಗಾರಿಕೆ ಮೇಳ -2025' ಹಮ್ಮಿಕೊಳ್ಳಲಾಗಿದೆ. ರೈತರು ಆದಾಯ ಹೆಚ್ಚಿಸುವ, ಕೃಷಿ ಮತ್ತು ತೋಟಗಾರಿಕೆ ಸಂಬಂಧ ಗೋಷ್ಠಿಗಳು, ಕಾರ್ಯಕ್ರಮ ನಡೆಯಲಿವೆ. ಇದರ ಅನಾವರಣ ಕಾರ್ಯಕ್ರಮವು ಫೆಬ್ರವರಿ 24 ರಂದು ನಡೆಯಲಿದೆ ಎಂದು ಐಐಎಚ್ಆರ್ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಫೆಬ್ರವರಿ 24ರಂದು ಬೆಳಗ್ಗೆ 10.30 ಗಂಟೆಗೆ ಹೆಸರಘಟ್ಟದ ಕಚೇರಿಯಲ್ಲಿ 'ಭಾರತೀಯ ತೋಟಗಾರಿಕೆ ಮೇಳ 2025' ಅನಾವರಣ ಜೊತೆಗೆ ಪ್ರಮುಖ ಸುದ್ದಿಗೋಷ್ಠಿ ನಡೆಯಲಿದೆ. ಈ ರಾಷ್ಟ್ರೀಯ ತೋಟಗಾರಿಕಾ ಮೇಳವು 'ಪೌಷ್ಠಿಕಾಂಶದ ಶ್ರೀಮಂತ ಬೆಳೆಗಳು ಮತ್ತು ಪೌಷ್ಠಿಕಾಂಶವನ್ನು ಹೆಚ್ಚಿಸಲು ಸುಧಾರಿತ ತಂತ್ರಜ್ಞಾನಗಳ ಪ್ರಚಾರವನ್ನು ತೋಟಗಾರಿಕೆಯ ವಿವಿಧ ಅಂಶಗಳ ಮೇಲೆ ಕೇಂದ್ರೀಕರಿಸಿದೆ. ಇಲ್ಲಿ ತೋಟಗಾರಿಕಾ ಸಮಸ್ಯೆಗೆ ನವೀನ ಪರಿಹಾರಗಳು ಮತ್ತು ಕಾರ್ಯಕ್ರಮಗಳನ್ನು ಒದಗಿಸುವ ಮೂಲಕ ರೈತರನ್ನು ಸಬಲೀಕರಣಗೊಳಿಸುವ ಗುರಿ ಹೊಂದಲಾಗಿದೆ.

ಮೇಳವು ತೋಟಗಾರಿಕೆ ಬೆಳೆಗಾರರಿಗೆ ಜೀವನೋಪಾಯ ಸುಧಾರಣೆಗೆ ಸಹಕಾರಿಯಾಗಲಿದೆ. ಉತ್ಪಾದಕತೆ, ಆದಾಯ ಮತ್ತು ಜೀವನೋಪಾಯವನ್ನು ಹೆಚ್ಚಿಸುವ ತೋಟಗಾರಿಕಾ ತಂತ್ರಜ್ಞಾನಗಳನ್ನು ಉತ್ತೇಜಿಸುವ ಉದ್ದೇಶವೇ ಈ ಮೇಳ ಪ್ರಮುಖ ಅಂಶವಾಗಿದೆ.
ಸಾಮಾಜಿಕ-ಆರ್ಥಿಕ ಹಿಂದುಳಿದ ಗುಂಪುಗಳನ್ನು ಉತ್ತೇಜಿಸಲಿದೆ. ಸಾಮಾಜಿಕವಾಗಿ ಹೊಂದಾಣಿಕೆಯಾದ, ಆರ್ಥಿಕವಾಗಿ ಕಾರ್ಯಸಾಧ್ಯವಾದ ಮತ್ತು ಪರಿಸರ ಸುಸ್ಥಿರ ಪರಿಹಾರಗಳನ್ನು ಒತ್ತಿ ಹೇಳುತ್ತದೆ. ಈ ಮೇಳದಲ್ಲಿ 250 ಸಂಸ್ಥೆಗಳು ಪ್ರದರ್ಶನ ಮಳಿಗೆಗಳಲ್ಲಿ ವಿವಿಧ ವರ್ಗದ ತೋಟಗಾರಿಕಾ ತಂತ್ರಜ್ಞಾನ ಸಂಬಂಧಿ ಅವಿಷ್ಕಾರ ಪ್ರದರ್ಶನಗೊಳ್ಳಲಿವೆ.
ಐಸಿಎಆರ್-ಐಐಹೆಚ್ಆರ್ ವೈವಿಧ್ಯಮಯ ಸುಧಾರಣೆ, ಬೆಳೆ ಉತ್ಪಾದನೆ, ಬೆಳೆ ಸಂರಕ್ಷಣೆ, ಸುಗ್ಗಿಯ ನಂತರದ ನಿರ್ವಹಣೆ, ಮೌಲ್ಯವರ್ಧನೆ, ಮತ್ತು ತೋಟಗಾರಿಕಾ ಯಂತ್ರೋಪಕರಣಗಳು ಮತ್ತು ಉಪಕರಣಗಳನ್ನು ಒಳಗೊಂಡ 250 ಕ್ಕೂ ಹೆಚ್ಚು ಪ್ರಭೇದಗಳು ಮತ್ತು ತಂತ್ರಜ್ಞಾನಗಳನ್ನು ಪ್ರಸ್ತುತಪಡಿಸುತ್ತದೆ.
ಪ್ರದರ್ಶನವು ಐಸಿಎಆರ್ ಸಂಸ್ಥೆಗಳು, ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು (SAUs), ಖಾಸಗಿ ಕೈಗಾರಿಕೆಗಳು, ರೈತ ಉತ್ಪಾದಕ ಸಂಸ್ಥೆಗಳು (ಎಫ್ಪಿಒಗಳು), ಎನ್ಜಿಒಗಳು ಮತ್ತು ಉದ್ಯಮಿಗಳ ಮಳಿಗೆಗಳನ್ನು ಹೊಂದಿರುತ್ತದೆ. ತೋಟಗಾರಿಕೆಯಲ್ಲಿ ತಮ್ಮ ಇತ್ತೀಚಿನ ಅವಿಷ್ಕಾರಗಳು ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶಿಸುತ್ತದೆ. ಈ ಮೇಳದಲ್ಲಿ ತೋಟಗಾರಿಕೆ ಕ್ಷೇತ್ರದ 75,000 ಕ್ಕೂ ಹೆಚ್ಚು ರೈತರು ಮತ್ತು ಭಾಗೀದಾರರುಗಳನ್ನು ಆಕರ್ಷಿಸುವ ಸಾಧ್ಯತೆ ಇದೆ ಎಂದು ಐಐಎಚ್ಆರ್ ಪ್ರಕಟಣೆಯಲ್ಲಿ ತಿಳಿಸಿದೆ.
'ವಿಕಸಿತ ಭಾರತಕ್ಕಾಗಿ ತೋಟಗಾರಿಕೆ ಘೋಷಣೆ, ಸಬಲೀಕರಣ ಮತ್ತು ಜೀವನೋಪಾಯ' ಶಿರ್ಷಿಕೆಯಡಿ ಈ ಮೇಳ ಹಮ್ಮಿಕೊಳ್ಳಲಾಗಿದೆ. ಲಕ್ಷಾಂತರ ರೈತರು, ತೋಟಗಾರಿಕೆ ಬೆಳಗಾರರು ಆಗಮಿಸಲಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications