ಬೆಂಗಳೂರು ಐಐಎಂಬಿ ವಿದ್ಯಾರ್ಥಿ ಒಡಿಶಾದ ಮೊದಲ ಮುಸ್ಲಿಂ ಶಾಸಕಿ!
ಬೆಂಗಳೂರು, ಜೂನ್ 09: ಒಡಿಶಾ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ಕಾಂಗ್ರೆಸ್ ಪಕ್ಷ 14 ಸ್ಥಾನಗಳಲ್ಲಿ ಜಯಗಳಿಸಿದೆ. ಬಾರಾಬತಿ-ಕಟಕ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಫಿಯಾ ಫಿರ್ದೌಸ್ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ನಿರ್ಮಾಣ ಮಾಡಿದ್ದಾರೆ.
ಬೆಂಗಳೂರಿನ ಐಐಎಂಬಿ ವಿದ್ಯಾರ್ಥಿಯಾಗಿದ್ದ 32 ವರ್ಷದ ಸೋಫಿಯಾ ಫಿರ್ದೌಸ್ ಈಗ ಒಡಿಶಾ ವಿಧಾನಸಭೆಯ ಶಾಸಕಿ. ಅಲ್ಲದೇ ಒಡಿಶಾ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳಾ ಮುಸ್ಲಿಂ ಶಾಸಕಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋಫಿಯಾ ಫಿರ್ದೌಸ್ 53,339 ಮತಗಳನ್ನು ಪಡೆದು, ಎದುರಾಳಿಯಾಗಿದ್ದ ಬಿಜೆಪಿ ಅಭ್ಯರ್ಥಿ ಪುರನ್ ಚಂದ್ರ ಮಹಾಪಾತ್ರ (45,338 ಮತ) ಮತ್ತು ಬಿಜೆಡಿಯ ಪ್ರಕಾಶ್ ಚಂದ್ರ ಬೆಹರಾ (40035 ಮತ) ಸೋಲಿಸಿದ್ದಾರೆ.
ಸೋಫಿಯಾ ಫಿರ್ದೌಸ್ ಪರಿಚಯ: ಮ್ಯಾನೇಜ್ಮೆಂಟ್ ಮತ್ತು ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿರುವ ಸೋಫಿಯಾ ಫಿರ್ದೌಸ್ ಈಗ ಒಡಿಶಾ ವಿಧಾನಸಭೆಯ ಮೊದಲ ಮಹಿಳಾ ಮುಸ್ಲಿಂ ಶಾಸಕಿ. ಸೋಫಿಯಾ ಫಿರ್ದೌಸ್ ತಂದೆ ಮೊಹಮ್ಮದ್ ಮೊಕ್ವಿಮ್ ಸಹ ಕಾಂಗ್ರೆಸ್ನ ನಾಯಕರು.
ಸೋಫಿಯಾ ಫಿರ್ದೌಸ್ ತಂದೆ ಮೊಹಮ್ಮದ್ ಮೊಕ್ವಿಮ್ ಬಾರಾಬತಿ-ಕಟಕ್ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. ಆದರೆ ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬಾರಾಬತಿ-ಕಟಕ್ ಕ್ಷೇತ್ರದ ಟಿಕೆಟ್ ಅನ್ನು ಸೋಫಿಯಾ ಫಿರ್ದೌಸ್ಗೆ ನೀಡಿತು.
ಭುವನೇಶ್ವರದ ಕೆಐಐಟಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಳಿಂಗ ಇನ್ಸಿಟಿಟ್ಯುಟ್ ಆಫ್ ಇಂಡಿಸ್ಟ್ರಿಯಲ್ ಟೆಕ್ನಾಲಜಿ ಇಂದ ಸೋಫಿಯಾ ಫಿರ್ದೌಸ್ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
2022ರಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸಿಟಿಟ್ಯುಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂಬಿ)ಯ ವಿದ್ಯಾರ್ಥಿನಿಯಾಗಿದ್ದರು ಸೋಫಿಯಾ ಫಿರ್ದೌಸ್. ಐಐಎಂಬಿಯಲ್ಲಿ ಅವರು ಎಕ್ಸಿಕ್ಯುಟಿವ್ ಜನರಲ್ ಮ್ಯಾನೇಜ್ಮೆಂಟ್ ಪ್ರೋಗ್ರಾಂ ಪೂರ್ಣಗೊಳಿಸಿದ್ದಾರೆ.
ರಾಜಕೀಯಕ್ಕೆ ಬರುವ ಮೊದಲು ಸೋಫಿಯಾ ಫಿರ್ದೌಸ್ ತಂದೆ ಮೊಹಮ್ಮದ್ ಮೊಕ್ವಿಮ್ ಒಡೆತನದ ಮೆಟ್ರೋ ಬಿಲ್ಡರ್ಸ್ನಲ್ಲಿ ನಿರ್ದೇಶಕಿಯಾಗಿದ್ದರು. ಭುವನೇಶ್ವರ ರಿಯಲ್ ಎಸ್ಟೇಟ್ ಡವಲಪರ್ಸ್ ಅಸೋಸಿಯೇಷನ್ನಲ್ಲಿಯೂ ಕೆಲಸ ಮಾಡಿದ್ದಾರೆ.
ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿರುವ ಪ್ರಮಾಣ ಪತ್ರಗಳ ಅನ್ವಯ ಸೋಫಿಯಾ ಫಿರ್ದೌಸ್ 5 ಕೋಟಿ ರೂ. ಆಸ್ತಿಯ ಒಡೆತಿ. 28 ಲಕ್ಷ ರೂ. ಸಾಲವನ್ನು ಅವರು ಹೊಂದಿದ್ದಾರೆ.
2019ರ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಸೋಫಿಯಾ ಫಿರ್ದೌಸ್ ತಂದೆ ಮೊಹಮ್ಮದ್ ಮೊಕ್ವಿಮ್ ಬಾರಾಬತಿ-ಕಟಕ್ ಕ್ಷೇತ್ರದಲ್ಲಿ 2,123 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2022ರಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. 2024ರ ಏಪ್ರಿಲ್ನಲ್ಲಿ ಒಡಿಶಾ ಹೈಕೋರ್ಟ್ ಈ ತೀರ್ಪು ಎತ್ತಿ ಹಿಡಿಯಿತು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು?











Click it and Unblock the Notifications