IIMB Recruitment 2023: 12ಲಕ್ಷ ಪ್ಯಾಕೇಜ್ ಹುದ್ದೆಗೆ ಫೆ.6 ರೊಳಗೆ ಅರ್ಜಿ ಸಲ್ಲಿಸಿ, ವಿಧಾನ ತಿಳಿಯಿರಿ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ (IIMB) ಖಾಲಿ ಇರುವ ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಹೇಗೆ ಸಲ್ಲಿಸಬೇಕು, ಅರ್ಹತೆಗಳೇನು, ವೇತನ ಎಷ್ಟು ಎಂ
ಬೆಂಗಳೂರು, ಜನವರಿ 26: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ (IIMB) ಖಾಲಿ ಇರುವ ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಲಾಗಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ (IIMB) ಒಟ್ಟು ಎರಡು ಅಸೋಸಿಯೇಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಮುಂದಿನ ತಿಂಗಳ ಫೆಬ್ರುವರಿ 06 ರೊಳಗೆ ಅರ್ಜಿ ಸಲ್ಲಿಸಬೇಕಿದೆ.
ವಿಶೇಷವೆಂದರೆ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವವರಿಗೆ ರಾಜಧಾನಿ ಬೆಂಗಳೂರಿನಲ್ಲಿ ಉದ್ಯೋಗವಕಾಶ ನೀಡಲಾಗುವುದು. ಈ ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದೆ. ಅರ್ಜಿ ಸಲ್ಲಿಸುವ ವಿಧಾನ, ವೇತನ, ವಿದ್ಯಾರ್ಹತೆ, ಪ್ರಮುಖ ದಿನಾಂಕಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಬಹುದು.

ಹುದ್ದೆಗಳ ಸಂಪೂರ್ಣ ಮಾಹಿತಿ
ಖಾಲಿ ಹುದ್ದೆ- 02
ಹುದ್ದೆ ಹೆಸರು- ಅಸೋಸಿಯೇಟ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್
ವಿದ್ಯಾರ್ಹತೆ- ಪದವಿ, ಸ್ನಾತಕೋತ್ತರ ಪದವಿ
ವೇತನ ಎಷ್ಟು- 7 ಲಕ್ಷ ರೂ. ನಿಂದ 12ವರೆಗೆ (ವಾರ್ಷಿಕ)
ಉದ್ಯೋಗ ಸ್ಥಳ- ಬೆಂಗಳೂರು
ಶೈಕ್ಷಣಿಕ ಅರ್ಹತೆ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಹೊರಡಿಸಿರುವ ಅಧಿಸೂಚನೆಯಂತೆ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು.
ವಯಸ್ಸಿನ ಮೀತಿ- ವೇತನ ವಿವರ
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಎಷ್ಟು ಎಂದು ಸಂಸ್ಥೆ ತಿಳಿಸಿಲ್ಲ. ಬದಲಾಗಿ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ತಿಳಿಸಿದೆ.

ಇನ್ನೂ ವೇತನ ನೋಡುವುದಾದರೆ ಆಯ್ಕೆ ಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳನ್ವಯ ಅಂದರೆ ಅಸಿಸ್ಟೆಂಟ್ ಮ್ಯಾನೇಜರ್ ಗೆ 7 ಲಕ್ಷ ರೂ.ನಿಂದ 9.20 ಲಕ್ಷ ರೂ.ವರೆಗೆ ವಾರ್ಷಿಕ ಪ್ಯಾಕೇಜ್ ನೀಡಲಾಗುವುದು. ಅಸೋಸಿಯೇಟ್ ಮ್ಯಾನೇಜರ್ ಗೆ 10.70 ಲಕ್ಷ ರೂ.ನಿಂದ 12.30 ಲಕ್ಷ ರೂಪಾಯಿ ವರೆಗೆ ವಾರ್ಷಿಕ ಪ್ಯಾಕೇಜ್ ಘೋಷಿಸಲಾಗಿದೆ.
ಪರೀಕ್ಷೆ ಮೂಲಕ ಆಯ್ಕೆ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಇರಲಿದೆ. ಅದಾದ ಬಳಿಕ ಸಂರ್ದನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇಲ್ಲ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಮಾಹಿತಿ ನೀಡಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications