ವಿಶ್ವದ ಟಾಪ್ ಸಂಶೋಧನಾ ವಿವಿಯಲ್ಲಿ ಬೆಂಗಳೂರಿನ ಐಐಎಸ್ಸಿ ನಂ. 1
ಬೆಂಗಳೂರು, ಜೂನ್ 9: ಭಾರತದ ಮೂರು ವಿಶ್ವವಿದ್ಯಾಲಯಗಳು ಕ್ಯೂ.ಎಸ್. ವಿಶ್ವವಿದ್ಯಾಲಯ ಶ್ರೇಯಾಂಕಗಳು 2022ರಲ್ಲಿ ಉನ್ನತ 200 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಬೆಂಗಳೂರಿನ ಐ.ಐ.ಎಸ್.ಸಿ.ಯು ಸಂಶೋಧನೆಗೆ ಸಂಬಂಧಿಸಿದಾ ಪಟ್ಟಿಯಲ್ಲಿ ವಿಶ್ವದಲ್ಲಿಯೇ ಒಂದನೇ ಸ್ಥಾನದಲ್ಲಿದೆ. ಜಾಗತಿಕ ಉನ್ನತ ಶಿಕ್ಷಣ ವಿಶ್ಲೇಷಣಾ ಸಂಸ್ಥೆ ಕ್ಯೂಎಸ್ ಕ್ವಾಕರೇಲಿ ಸೀಮಂಡ್ಸ್ ಇಂದು ಜಾಗತಿಕ ಅಂತಾರಾಷ್ಟ್ರೀಯ ಶ್ರೇಯಾಂಕಗಳ 18 ನೇ ಆವೃತ್ತಿಯನ್ನು ಬಿಡುಗಡೆ ಮಾಡಿದೆ.
ಐ.ಐ.ಟಿ. ಬಾಂಬೆ 177 ನೇ ಸ್ಥಾನವನ್ನು ಗಳಿಸಿದೆ. ಐ.ಐ.ಟಿ. ದಿಲ್ಲಿ 185 ನೇ ಸ್ಥಾನ ಪಡೆದಿದೆ ಮತ್ತು ಐ.ಐ.ಎಸ್.ಸಿ ಬೆಂಗಳೂರು, ವಿಶ್ವವಿದ್ಯಾಲಯಗಳ ಶ್ರೇಯಾಂಕಗಳಲ್ಲಿ 186 ನೇ ಸ್ಥಾನ ಪಡೆದಿದ್ದು, ಕೇಂದ್ರ ಶಿಕ್ಷಣ ಸಚಿವರಾದ ರಮೇಶ ಪೋಖ್ರಿಯಾಲ್ ಅಭಿನಂದಿಸಿದ್ದಾರೆ.
ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಭಾರತವು ದಾಪುಗಾಲಿಕ್ಕುತ್ತಿದೆ ಮತ್ತು ಅದು ವಿಶ್ವಗುರುವಾಗಿ ಹೊರಹೊಮ್ಮುತ್ತಿದೆ ಎಂದು ಶ್ರೀ ಪೋಖ್ರಿಯಾಲ್ ಹೇಳಿದ್ದಾರೆ. ನಾವು ಗುರು ವಿನಂತಹ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಹೊಂದಿರುವ ಬಗ್ಗೆ ಅಷ್ಟೇ ಹೆಮ್ಮೆ ಪಡುತ್ತೇವೆ, ಅವರು ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಭಾರತೀಯ ಶಿಕ್ಷಣ ವಲಯದ ಇತರ ಎಲ್ಲಾ ಭಾಗೀದಾರರ ಕಲ್ಯಾಣದ ಬಗ್ಗೆ ನಿರಂತರ ಚಿಂತಿಸುತ್ತಿರುತ್ತಾರೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.

Recommended Video
ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ಶ್ರೇಷ್ಠತಾ ಸಂಸ್ಥೆಗಳಂತಹ ಉಪಕ್ರಮಗಳು ನಮ್ಮ ಕಾಲೇಜುಗಳನ್ನು ಮತ್ತು ಸಂಸ್ಥೆಗಳನ್ನು ಜಾಗತಿಕವಾಗಿ ಶ್ರೇಯಾಂಕಕ್ಕೆ ಪರಿಗಣಿಸುವಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸಿವೆ ಎಂದೂ ಸಚಿವರು ಹೇಳಿದ್ದಾರೆ. ಇದನ್ನು ಕ್ಯೂ ಎಸ್ ಮತ್ತು ಟೈಮ್ಸ್ ಗುಂಪು ಘೋಷಿಸಿದ ವಿಶ್ವವಿದ್ಯಾಲಯ ಶ್ರೇಯಾಂಕಗಳನ್ನು ನೋಡಿದಾಗ ಅನುಭವಕ್ಕೆ ಬರುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.
Congratulations to @iiscbangalore, @iitbombay and @iitdelhi. Efforts are underway to ensure more universities and institutions of India scale global excellence and support intellectual prowess among the youth. https://t.co/NHnQ8EvN28
— Narendra Modi (@narendramodi) June 9, 2021
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ಯು.ಎಸ್. ಜಗತ್ತಿನ ವಿಶ್ವವಿದ್ಯಾಲಯಗಳ ಶ್ರೇಯಾಂಕ 2022ರ ಮೊದಲ 200ರಲ್ಲಿ ಸ್ಥಾನ ಪಡೆದಿರುವ ಐಐಟಿ ಬಾಂಬೆ, ಐಐಟಿ ದೆಹಲಿ ಮತ್ತು ಐಐಎಸ್ಸಿ ಬೆಂಗಳೂರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
"@ಐಐಎಸ್ಸಿ ಬೆಂಗಳೂರು, @ಐಐಟಿಬಾಂಬೆ ಮತ್ತು @ಐಐಟಿ ದೆಹಲಿಗೆ ಅಭಿನಂದನೆಗಳು. ಭಾರತದ ಇನ್ನೂ ಹಲವು ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳ ಜಾಗತಿಕ ಔನ್ನತ್ಯ ಖಾತ್ರಿಪಡಿಸಲು ಮತ್ತು ಯುವಕರಲ್ಲಿನ ಬೌದ್ಧಿಕ ಶಕ್ತಿಯನ್ನು ಬೆಂಬಲಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications