ಬ್ರಿಕ್ಸ್ ಪಟ್ಟಿ: ಭಾರತೀಯ ವಿಜ್ಞಾನ ಸಂಸ್ಥೆಗೆ 25ನೇ ಸ್ಥಾನ
ಬೆಂಗಳೂರು, ಡಿ.4: ಬ್ರಿಕ್ಸ್( ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ) ವಿಶ್ವದ ಟಾಪ್ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಭಾರತದಲ್ಲೇ ಅತ್ಯುತ್ತಮ ಸ್ಥಾನ ಮಾನ ಹೊಂದಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಪಟ್ಟಿಯಲ್ಲಿ 25 ನೇ ಸ್ಥಾನ ಪಡೆದುಕೊಂಡಿದೆ.
ಒಟ್ಟು 18 ದೇಶಗಳ ವಿವಿಧ ವಿಶ್ವವಿದ್ಯಾಲಯಗಳ ಸ್ಥಿತಿ ಗತಿ, ಶಿಕ್ಷಣ ಪದ್ಧತಿ ಎಲ್ಲವನ್ನು ಅಧ್ಯಯನ ನಡೆಸಿ ಪಟ್ಟಿ ತಯಾರಿಸಲಾಗಿದೆ. ಟಾಪ್ 40 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಭಾರತದ 4 ವಿಶ್ವ ವಿದ್ಯಾಲಯಗಳು ಸ್ಥಾನ ಪಡೆದಿವೆ.[ಸಂಶೋಧನಾ ವಿಭಾಗದಲ್ಲಿ ಐಐಎಸ್ಸಿಗೆ 11ನೇ ಸ್ಥಾನ]

ಬ್ರಿಕ್ಸ್ ಪಟ್ಟಿಯಲ್ಲಿ ಬೆಂಗಳೂರಿನ ಐಐಎಸ್ ಸಿ, ಐಐಟಿ ಮುಂಬೈ. ರೊರ್ಕೆ ಐಐಟಿ, ಚಂಡಿಘಡದ ಪಂಜಾಬ್ ವಿಶ್ವವಿದ್ಯಾಲಯಗಳು ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿವೆ, ಅಲ್ಲದೇ ಟಾಪ್ 100 ವಿವಿಗಳಲ್ಲಿ ಭಾರತದ 7 ವಿಶ್ವವಿದ್ಯಾಲಯಗಳು ಸ್ಥಾನ ಪಡೆದುಕೊಂಡಿವೆ.
ಸಂಶೋಧನಾ ವಿಭಾಗದಲ್ಲಿ ಸಾಧನೆ
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್) ಮತ್ತೊಮ್ಮೆ ವಿಶ್ವಮಟ್ಟದಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದ್ದು ಕಳೆದ ಸಪ್ಟೆಂಬರ್ ನಲ್ಲಿ ಕ್ವಾಕ್ಕ್ವಾರೆಲ್ಲಿ ಸೈಮಂಡ್ಸ್(ಕ್ಯೂಎಸ್) ಬಿಡುಗಡೆ ಮಾಡಿದ್ದ ವಿಶ್ವದ ಅತ್ಯುತ್ತಮ ವಿವಿಗಳ ಪಟ್ಟಿಯ ಸಂಶೋಧನಾ ವಿಭಾಗದಲ್ಲಿ ಐಐಎಸ್ಸಿ 11 ನೇ ಸ್ಥಾನ ಪಡೆದುಕೊಂಡಿತ್ತು.
ಪೂರಕ ಸಂಶೋಧನಾ ವಿಭಾಗ ಅಂದರೆ ಒಂದು ದೊಡ್ಡ ಸಂಶೋಧನೆಗೆ ಅಗತ್ಯವಾದ ಚಿಕ್ಕ ಚಿಕ್ಕ ಸಂಶೋಧನೆಗಳನ್ನು ಪ್ರಚುರಪಡಿಸುವಲ್ಲಿ ವಿವಿ ಬೋಧಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ತೋರಿರುವ ಪ್ರಗತಿ ಮೆಚ್ಚುವಂಥದ್ದು ಎಂದು ಪಟ್ಟಿ ತಿಳಿಸಿತ್ತು.
-
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ!












Click it and Unblock the Notifications