Get Updates
Get notified of breaking news, exclusive insights, and must-see stories!

ರಾಜ ಕಾಲುವೆ ಒತ್ತುವರಿ : 14 ಅಧಿಕಾರಿಗಳ ಅಮಾನತು

ಬೆಂಗಳೂರು, ಆಗಸ್ಟ್ 10 : ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಮೇಲೆ 14 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬಿಬಿಎಂಪಿ ನಗರದಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದೆ. [ಒತ್ತುವರಿಗೆ ಸಹಕಾರ ನೀಡಿದ ಅಧಿಕಾರಿಗಳಿಗೆ ಯಾವ ಶಿಕ್ಷೆ?]

ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಲು 20 ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಅಧಿಕಾರಿಗಳ ಹೆಸರುಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಡುಗಡೆ ಮಾಡಿದೆ. ಅಧಿಕಾರಿಗಳನ್ನು ಅಮಾನತು ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.[ರಾಜ ಕಾಲುವೆ ಒತ್ತುವರಿ, ಈಗ ಅಧಿಕಾರಿಗಳಿಗೆ ಶಿಕ್ಷೆ]

Illegal constructions in Bengaluru, 14 officials suspended

ಕ್ರಮ ಕೈಗೊಳ್ಳಲು ಸೂಚಿಸಿರುವ 20 ಅಧಿಕಾರಿಗಳಲ್ಲಿ 6 ಅಧಿಕಾರಿಗಳು ನಿವೃತ್ತರಾಗಿದ್ದಾರೆ. ಬಿಬಿಎಂಪಿ ಗುರುತಿಸಿರುವ 20 ಅಧಿಕಾರಿಗಳು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲು ಸಹಕಾರ ನೀಡಿದ್ದಾರೆ ಎಂಬುದು ಪ್ರಾಥಮಿಕವಾಗಿ ಸಾಬೀತಾಗಿದೆ.[ಮನೆ ಕಳೆದುಕೊಂಡವರಿಂದ ಬಿಬಿಎಂಪಿಗೆ ಪ್ರಶ್ನೆಗಳ ಸುರಿಮಳೆ]

ಬಿಬಿಎಂಪಿ ಪಟ್ಟಿ ಮಾಡಿರುವ 20 ಅಧಿಕಾರಿಗಳ ಪೈಕಿ ಸೇವೆಯಲ್ಲಿರುವ ಎಲ್ಲರನ್ನೂ ತಕ್ಷಣದಿಂದಲೇ ಅಮಾನತು ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ (ಕಾಮಗಾರಿ) ಅವರಿಂದ ಈ ಬಗ್ಗೆ ತನಿಖೆ ಆದೇಶ ನೀಡಲಾಗಿದೆ.[ರಾಜಕಾಲುವೆ ಒತ್ತುವರಿ ತೆರವಿನಲ್ಲೂ ಪ್ರಭಾವದ ಒಳಸುಳಿ]

ನಿವೃತ್ತರಾಗಿರುವ ಅಧಿಕಾರಿಗಳು ಕಾನೂನು ಹೋರಾಟ ನಡೆಸಬೇಕಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲು ಮತ್ತು ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ.

officials
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+