3,00,00,000 ರೂಪಾಯಿ ಮೌಲ್ಯದ ಒತ್ತುವರಿ ತೆರವು, ಭೂಗಳ್ಳರಿಗೆ ಆಘಾತ!
ಬೆಂಗಳೂರಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬಂದು ಒತ್ತುವರಿ ಮಾಡಿಕೊಳ್ಳುವ ಭೂಗಳ್ಳರ ಕಾಟ ಈಗ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಸ್ಥಳೀಯ ಪ್ರಭಾವಿಗಳ ಸಹಾಯ ಪಡೆದು, ಕೋಟಿ ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ಗುಳುಂ ಮಾಡಿದ್ದಾರೆ. ಇಂತಹ ಜಾಗದಲ್ಲಿ ಈಗಾಗಲೇ ದೊಡ್ಡ ದೊಡ್ಡ ಕಟ್ಟಡ & ಲೇಔಟ್ ನಿರ್ಮಾಣ ಕೂಡ ನಡೆದಿದೆ. ಆದರೆ ಇಂತಹ ಭೂಗಳ್ಳರಿಗೆ ಇದೀಗ ದೊಡ್ಡ ಆಘಾತ ನೀಡಲು ಮುಂದಾಗಿದೆ ಬೆಂಗಳೂರು ಜಿಲ್ಲಾಡಳಿತ!
ಬೆಂಗಳೂರು ಕನ್ನಡಿಗರ ರಾಜಧಾನಿ ಆಗಿದ್ದರೂ ಇದೀಗ ಸಾಕಷ್ಟು ಬದಲಾಗಿ ಹೋಗಿದೆ, ಕನ್ನಡಿಗರನ್ನ ಬಿಟ್ಟು ಬೇರೆಬೇರೆ ರಾಜ್ಯಗಳಿಂದ ಬಂದವರು ಕರ್ನಾಟಕ ಭೂಮಿ ಒತ್ತುವರಿ ಮಾಡ್ಕೊಂಡು ಮೆರೆದಿದ್ದರು. ಕನ್ನಡಿಗರ ರಾಜಧಾನಿ ಬೆಂಗಳೂರು ಜಗತ್ತು ಗುರುತಿಸುವ ಹಂತಕ್ಕೆ ಬೆಳೆದು ನಿಂತಿದ್ದು, ಎಲ್ಲರೂ ಸಲಾಂ ಹೊಡೆಯುತ್ತಾರೆ. ಆದರೆ ಈ ಸಮಯದಲ್ಲೇ ಬೆಂಗಳೂರಲ್ಲಿ ಒತ್ತುವರಿ ಮಾಡುವವರ ಕಾಟ ಜೋರಾಗಿದ್ದು ಅವರಿಗೆ ಸರಿಯಾಗಿ ಪಾಠ ಕಲಿಸುವ ಕೆಲಸ ಕೂಡ ಜೋರಾಗಿದೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿ ಆಗಿರುವ 3.18 ಕೋಟಿ ರೂಪಾಯಿ ಮೌಲ್ಯದ ಜಮೀನು ಮತ್ತೆ ವಶಕ್ಕೆ ಪಡೆಯದಲಾಗಿದೆ.

3.18 ಕೋಟಿ ರೂಪಾಯಿ ಒತ್ತುವರಿ ತೆರವು
ಹೌದು, ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಇದೀಗ ಮತ್ತೆ ಚುರುಕಾಗಿದೆ. ಇದೀಗ ಬೆಂಗಳೂರು ನಗರ ಜಿಲ್ಲೆಯ ವಿವಿಧ ತಾಲೂಕುಗಳ ತಹಸೀಲ್ದಾರ್ ಕಾರ್ಯಾಚರಣೆ ಅಖಾಡಕ್ಕೆ ಇಳಿದಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಶುರು ಮಾಡಲಾಗಿದ್ದು, ಇಂದು ಒಂದೇ ದಿನ 3.18 ಕೋಟಿ ಅಂದಾಜು ಮೌಲ್ಯದ ಒಟ್ಟು 0-34 ಗುಂಟೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆಯಲಾಗಿದೆ. ಗುಂಡುತೋಪು ಹಾಗೂ ಕಾಂಪೌಂಡ್ ಹಾಕಿದ್ದ ಪ್ರದೇಶಕ್ಕೆ ಭೇಟಿ ನೀಡಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ಯಾವ ಯಾವ ಏರಿಯಾದಲ್ಲಿ ತೆರವು?
ಬೆಂಗಳೂರು ದಕ್ಷಿಣ ತಾಲೂಕಿನಲ್ಲಿರುವ ಬೇಗೂರು ಹೋಬಳಿ ವಿಟ್ಟಸಂದ್ರದ ಸರ್ವೆ ನಂ 27ರ ಸರ್ಕಾರಿ ಗುಂಡುತೋಪು ಒತ್ತುವರಿ ತೆರವು ಮಾಡಲಾಗಿದ್ದು, 0.04 ಗುಂಟೆ ಜಾಗ ಮರಳಿ ವಶಕ್ಕೆ ಪಡೆಯಲಾಗಿದೆ. ಉತ್ತರಹಳ್ಳಿ ಹೋಬಳಿ ಕೊತ್ತನೂರು ಗ್ರಾಮದ ಸರ್ವೆ ನಂ. 46 ಕಾಂಪೌಂಡ್ ಒತ್ತುವರಿ ತೆರವುಗೊಳಿಸಿರುವ ಅಧಿಕಾರಿಗಳು, 0.20 ಗುಂಟೆ ಜಾಗವನ್ನು ಈಗ ವಶಕ್ಕೆ ಪಡೆದಿದ್ದಾರೆ. ಈ ಜಾಗದ ಮೌಲ್ಯವು 2.50 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಹಾಗೂ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿ ಕಮ್ಮಸಂದ್ರದ ಸರ್ವೆ ನಂ 09 ಸರ್ಕಾರಿ ಗುಂಡು ತೋಪು ಒತ್ತುವರಿ ತೆರವುಗೊಳಿಸಿ 0.10 ಗುಂಟೆ ಜಾಗ ವಶಕ್ಕೆ ಪಡೆಯಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications