ಬೆಂಗಳೂರಲ್ಲಿ ಭೂಗಳ್ಳರು ಉಡೀಸ್, 31.35 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಒತ್ತುವರಿ ತೆರವು!
ನಮ್ಮ ಬೆಂಗಳೂರಿಗೆ ಎಲ್ಲೆಲ್ಲಿಂದಲೋ ಬಂದು ಸೇರಿರುವ ಕೆಲವು ಭೂಗಳ್ಳರು ಸದ್ದೇ ಇಲ್ಲದೆ ಭೂಮಿಯನ್ನ ಗುಳುಂ ಮಾಡಿ ಹಾಕುತ್ತಿದ್ದಾರೆ. ಇದೇ ರೀತಿ ಲಕ್ಷಾಂತರ ಕೋಟಿ ರೂಪಾಯಿ ಜಮೀನು ಗುಳುಂ ಆಗಿ, ಸ್ವಾಹ ಮಾಡಲಾಗಿರುವ ಆರೋಪ ಪದೇ ಪದೇ ಕೇಳಿ ಬರುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡುತ್ತಿರುವ ಬೆಂಗಳೂರು ಜಿಲ್ಲಾಡಳಿತ ಒತ್ತುವರಿ ತೆರವು ಮಾಡುತ್ತಾ ಬಂದಿದ್ದು, ಇದೀಗ ಬೆಂಗಳೂರಲ್ಲಿ ಭೂಗಳ್ಳರು ಉಡೀಸ್ ಆಗುವ ಮೂಲಕ 31.35 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಒತ್ತುವರಿ ತೆರವು ಮಾಡಲಾಗಿದೆ.
ಕನ್ನಡಿಗರ ರಾಜಧಾನಿ ಬೆಂಗಳೂರು ಜಗತ್ತು ಗುರುತಿಸುವ ಹಂತಕ್ಕೆ ಬೆಳೆದು ನಿಂತಿದ್ದು, ಎಲ್ಲರೂ ಸಲಾಂ ಹೊಡೆಯುತ್ತಾರೆ. ಬೆಂಗಳೂರಿನಲ್ಲಿ ಒತ್ತುವರಿ ಮಾಡುವವರ ಕಾಟ ಜೋರಾಗಿದ್ದು, ಇವತ್ತು ಮಧ್ಯಾಹ್ನ ಇದ್ದ ಕೆರೆ ನಾಳೆ ಬೆಳಗ್ಗೆಗೆ ಮಾಯ ಆಗಿ ಹೋಗಿರುತ್ತದೆ. ಹೀಗೆ ಎಲ್ಲೆಂದರಲ್ಲಿ ಕೆರೆಗಳನ್ನ & ಗೋಮಾಳ ಸೇರಿದಂತೆ ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಳ್ಳುವ ಕಳ್ಳರ ಕಾಟ ಹೆಚ್ಚಾಗಿದೆ. ಇಂತಹ ಸಮಯದಲ್ಲೇ ಬೆಂಗಳೂರು ಜಿಲ್ಲಾಡಳಿತ ಮತ್ತೆ ತನ್ನ ಒತ್ತುವರಿ ತೆರವು ಕಾರ್ಯವನ್ನ ಚುರುಕುಗೊಳಿಸಿದ್ದು, 31.35 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಒತ್ತುವರಿ ತೆರವು ಆಗಿದೆ.

ಯಾವ ಯಾವ ಪ್ರದೇಶದಲ್ಲಿ ಒತ್ತುವರಿ ತೆರವು?
ಅಂದಹಾಗೆ ಇದೀಗ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ 31.35 ಕೋಟಿ ರೂಪಾಯಿ ಮೌಲ್ಯದ ಒಟ್ಟು 18 ಎಕರೆ 13 ಗುಂಟೆ ಸರ್ಕಾರಿ ಜಮೀನನ್ನ ತೆರವು ಮಾಡಿ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಈ ಮೂಲಕ ಭೂಗಳ್ಳರಿಗೆ ಆಘಾತ ನೀಡಿದೆ ನಮ್ಮ ಬೆಂಗಳೂರು ಜಿಲ್ಲಾಡಳಿತ. ಖರಾಬು ಬಂಡೆ, ಕೆರೆ, ಖರಾಬು, ಕಟ್ಟೆ, ಸರ್ಕಾರಿ ಕರೆ & ಗೋಮಾಳ ಜಾಗಗಳಲ್ಲಿ ಭೂಮಿ ಒತ್ತುವರಿ ಮಾಡಿಕೊಂಡಿದ್ದರು. ಸರ್ಕಾರದ ಜಮೀನು ಭೂಗಳ್ಳರ ಪಾಲಾಗುವುದನ್ನ ಇದೀಗ ತಪ್ಪಿಸಲಾಗಿದ್ದು, ಇದೀಗ ಬೆಂಗಳೂರಿನ ಭೂಗಳ್ಳರಿಗೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ.
ಭೂಗಳ್ಳರು ಈಗ ಫುಲ್ ಸೈಲೆಂಟ್!
ಬೆಂಗಳೂರು ಪೂರ್ವ ತಾಲೂಕು ಕೆ.ಆರ್. ಪುರಂನ ಪಟ್ಟಂದೂರು ಅಗ್ರಹಾರ, ವರ್ತೂರು ಹೋಬಳಿ ಹಾಡೋಸಿದ್ದಾಪುರ ಗ್ರಾಮ, ಬಿದರಹಳ್ಳಿ ಹೋಬಳಿಯ ಹುಸ್ಕೂರು ಗ್ರಾಮ, ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿ ಮೈಲಸಂದ್ರ ಸೇರಿದಂತೆ ಉತ್ತರಹಳ್ಳಿ ಹೋಬಳಿ ವಡ್ಡರಪಾಳ್ಯ, ತಾವರೆಕೆರೆ ಹೋಬಳಿಯ ಕೋಲೂರು, ಬೆಂಗಳೂರು ಉತ್ತರ ತಾಲೂಕಿನ ದಾಸನಪುರ-2 ಹೋಬಳಿಯ ರಾವುತ್ತನ ಹಳ್ಳಿ, ಯಲಹಂಕ ತಾಲೂಕಿನ ಅದ್ವೆವಿಶ್ವನಾಥಪುರ ಗ್ರಾಮಗಳಲ್ಲಿ ಒತ್ತುವರಿ ತೆರವು ಮಾಡಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications