ಡ್ರೋನ್ ಸರ್ವೆಯಲ್ಲಿ ಅಕ್ರಮ: ಆರ್.ಅಶೋಕ್ ವಿರುದ್ಧ ತನಿಖೆಗೆ ಎಎಪಿ ಆಗ್ರಹ
ಡ್ರೋನ್ ಸರ್ವೆ ಕಾರ್ಯದಲ್ಲಿ ಅಕ್ರಮವಾಗಿರುವ ಬಗ್ಗೆ ಮಾತುಗಳು ಕೇಳಿ ಬಂದಿವೆ. ಈ ಸಂಬಂಧ ಸಚಿವ ಆರ್.ಅಶೋಕ್ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷ (AAP) ಒತ್ತಾಯಿಸಿದೆ.
ಬೆಂಗಳೂರು, ಫೆಬ್ರವರಿ 20: ಡ್ರೋನ್ ಸರ್ವೆ ಕಾರ್ಯದಲ್ಲಿ ಅಕ್ರಮವಾಗಿರುವ ಬಗ್ಗೆ ಮಾತುಗಳು ಕೇಳಿ ಬಂದಿವೆ. ಈ ಸಂಬಂಧ ಸಚಿವ ಆರ್.ಅಶೋಕ್ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷ (AAP) ಒತ್ತಾಯಿಸಿದೆ.
ಪ್ರಕರಣವೊಂದರ ವಿಚಾರದಲ್ಲಿ ಐಪಿಎಸ್ ಅಧಿಕಾರಿ ರೂಪಾ ಡಿ.ಮೌದ್ಗಿಲ್ ಅವರು ಡ್ರೋನ್ ಸರ್ವೆ ಕಾರ್ಯದಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸೂಕ್ತ ತನಿಖೆಯಾಗಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್.ವಿ ಸದಂ ಹೇಳಿದರು.

ಸೋಮವಾರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದಿರುವ 423 ಕೋಟಿ ರೂಪಾಯಿ ಮೊತ್ತದ ಡ್ರೋನ್ ಸರ್ವೆ ಯೋಜನೆಯಲ್ಲಿ ಅಕ್ರಮ ನಡೆದಿದೆ. ಮೊದಲು ತಮಗೆ ಬೇಕಾದ ರೀತಿಯಲ್ಲಿ ಟೆಂಡರ್ ಮಾರ್ಗಸೂಚಿ ರೂಪಿಸಿದ್ದಾರೆ. ಬಳಿಕ ತಮ್ಮಿಷ್ಟದವರಿಗೆ ಟೆಂಡರ್ ನೀಡುತ್ತಿದ್ದಾರೆ. ಒಟ್ಟು 5,000 ಚದರ ಕಿಲೋ ಮೀಟರ್ ವ್ಯಾಪ್ತಿಯ 1,000 ಚದರ ಕಿಲೋಮೀಟರ್ಗೆ ಇಳಿಕೆ ಮಾಡಲಾಗಿದೆ ಎಂದರು.
ಅಕ್ರಮಕ್ಕಾಗಿಯೇ ಒಟ್ಟು ಗುತ್ತಿಗೆಯನ್ನು ತುಂಡು ಗುತ್ತಿಗೆಯಾಗಿ ಮಾರ್ಪಡಿಸಿದ್ದಾರೆ. 1.5 ಕೋಟಿ ರೂ.ನಿಂದ 8 ಕೋಟಿ ರೂಪಾಯಿಗೆ ಟೆಂಡರ್ ಮೊತ್ತ ಹೆಚ್ಚಿಸಲಾಗಿದೆ. ಇದನ್ನು ಹಣಕಾಸು ಇಲಾಖೆಯ ಗಮನಕ್ಕೆ ತರಬೇಕು ಎಂಬ ನಿಯಮವಿದ್ದು, ಅದನ್ನು ಗಾಳಿಗೆ ತೂರಲಾಗಿದೆ. ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಮಾಡಿರುವ ಆ ಆರೋಪಗಳನ್ನು ಗಮನಿಸಿದರೆ ಭಾರೀ ಪ್ರಮಾಣದ ಕಿಕ್ಬ್ಯಾಕ್ ಪಡೆದ ಅನುಮಾನ ವ್ಯಕ್ತವಾಗಿದೆ.

ಪ್ರಮುಖ ಅಧಿಕಾರಿಗಳ ಪಾತ್ರ
ಕಂದಾಯ ಸಚಿವರಾದ ಆರ್.ಅಶೋಕ್, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೌನೀಶ್ ಮೌದ್ಗಿಲ್ ಪಾತ್ರದ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಅವರು ಪುನರುಚ್ಚರಿಸಿದರು.
ಡ್ರೋನ್ ಸರ್ವೇ ಮಾಡಿಸಲು ಎರಡನೇ ಹಂತದಲ್ಲಿ ಟೆಂಡರ್ ಕರೆಯಲು ಸಿದ್ಧತೆ ನಡೆಸಿಕೊಂಡಿರುವ ಮೌನೀಶ್ ಅವರು ಆರವ್ ಎನ್ನುವ ಸಂಸ್ಥೆಗೆ ನೆರವಾಗುವ ಸಂಬಂಧ ಟೆಂಡರ್ ಮಾರ್ಗಸೂಚಿ ಬದಲಾಯಿಸಿದ್ದಾರೆ. ಈ ಹಿಂದಿನ ಗುತ್ತಿಗೆಗಳಿಗೆ ಆರವ್ ಸಂಸ್ಥೆಯು ಸಬ್ ಕಂಟ್ರ್ಯಾಕ್ಟರ್ ಆಗಿತ್ತು. ಇದೀಗ ಕೆಲವರು ಪ್ರಮುಖ ಸಂಸ್ಥೆಗಳಿಗೆ ಟೆಂಡರ್ ಸಿಗದಂತೆ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ ಅಕ್ರಮ ನಡೆಸಲಾಗಿದೆ. ವಿಶೇಷವೆಂದರೆ ಮೌನೀಶ್ ಮೌದ್ಗಿಲ್ ರೂಪಾ ಮೌದ್ಗೀಲ್ ಅವರೆ ಈ ಅಕ್ರಮ ಬಗ್ಗೆ ಆರೋಪ ಮಾಡಿದ್ದಾರೆ ಎಂದು ಜಗದೀಶ್ ತಿಳಿಸಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications