ಅಕ್ರಮ ಗಣಿಗಾರಿಕೆ: ಶಾಸಕ ಅನಿಲ್ ಲಾಡ್ ಗೆ ಜಾಮೀನು
ಬೆಂಗಳೂರು, ಜುಲೈ 27: ಅಕ್ರಮ ಗಣಿಗಾರಿಕೆ, ಅದಿರು ರಫ್ತು ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರಿಗೆ ಸೋಮವಾರ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಸಿಬಿಐ ವಿಶೇಷ ನ್ಯಾಯಾಲಯದಿಂದ ಅನಿಲ್ ಲಾಡ್ ಅವರಿಗೆ ವೈದ್ಯಕೀಯ ಕಾರಣಗಳಿಂದ ಜಾಮೀನು ಮಂಜೂರಾಗಿದೆ.
ಬಂಧಿತ ಅನಿಲ್ ಲಾಡ್ ಅವರು ಸಿಬಿಐ ತಂಡದ ವಶದಲ್ಲಿದ್ದರು. ಅಕ್ರಮವಾಗಿ ಕಬ್ಬಿಣ ಅದಿರು ರಫ್ತು ಮಾಡಿದ ಆರೋಪದ ಮೇಲೆ ಅನಿಲ್ ಲಾಡ್ ಅವರನ್ನು ಬುಧವಾರ (ಜುಲೈ 15) ಸಂಜೆ ಸಿಬಿಐ ತಂಡ ಬಂಧಿಸಿತ್ತು. [ಸಿಬಿಐನಿಂದ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬಂಧನ]
ಈ ಪ್ರಕರಣದಲ್ಲಿ ಜಾಮೀನು ಕೋರಿ ಅನಿಲ್ ಲಾಡ್ ಸಲ್ಲಿಸಿರುವ ಅರ್ಜಿ ವಿಚಾರಣೆ ಜುಲೈ 20ಗೂ ಮುಂಚಿತವಾಗಿ ಬರಬೇಕಿತ್ತು. ಆದರೆ, ವಿಧಾನಸಭೆ ಅಧಿವೇಶನ ಮುಕ್ತಾಯದ ನಂತರ ಅರ್ಜಿ ವಿಚಾರಣೆ ನಡೆಸಲಾಯಿತು.

ಅನಿಲ್ ಲಾಡ್ ಅವರಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವುದನ್ನು ಪರಿಗಣಿಸಿ ಸಿಬಿಐ ನ್ಯಾ ಎಚ್ ಕೆ ಮಲ್ಲಪ್ಪ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ ಎಂದು ಲಾಡ್ ಅವರ ಪರ ವಕೀಲ ಸಿವಿ ನಾಗೇಶ್ ಹೇಳಿದ್ದಾರೆ.
2010ರಲ್ಲಿ ಶಾಸಕ ಸತೀಶ್ ಸೈಲ್ ಒಡೆತನದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ ಲಿಮಿಟೆಡ್ ನಿಂದ ಕಾರವಾರದ ಬೇಲೇಕೇರಿ ಬಂದರಿನಿಂದ ಕಾನೂನು ಬಾಹಿರವಾಗಿ 15 ಸಾವಿರ ಮೆಟ್ರಿಕ್ ಟನ್ ಅದಿರು ರಫ್ರು ಮಾಡಿದ ಆರೋಪವನ್ನು ಅನಿಲ್ ಲಾಡ್ ಎದುರಿಸುತ್ತಿದ್ದಾರೆ.[ಪೂರ್ತಿ ವಿವರ ಇಲ್ಲಿದೆ ಓದಿ]
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಶಾಸಕರಾದ ಆನಂದ್ ಸಿಂಗ್, ಬಿ ನಾಗೇಂದ್ರ, ಸತೀಶ್ ಸೈಲ್, ಸುರೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಿ ಬಂಧಿಸಲಾಗಿತ್ತು. ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಮಿತ್ರ ಬಿ ಶ್ರೀರಾಮುಲು ಅವರನ್ನು ಕೂಡಾ ಪ್ರಶ್ನಿಸಲಾಗಿತ್ತು. [ಶ್ರೀರಾಮುಲುಗೆ ಸಂಕಟ?]
ಅನಿಲ್ ಲಾಡ್ ಅವರು 10 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ನೀಡಬೇಕು, ಪ್ರತಿ ಶನಿವಾರ ಸಿಬಿಐ ಕಚೇರಿಗೆ ಹಾಜರಾಗಬೇಕು, ದೇಶ ಬಿಟ್ಟು ಹೊರಕ್ಕೆ ಹೋಗುವಂತಿಲ್ಲ, ಪೊಲೀಸ್ ಠಾಣೆಗೆ ಪಾಸ್ ಪೋರ್ಟ್ ಒಪ್ಪಿಸಬೇಕು ಇವೆ ಮುಂತಾದ ಷರತ್ತುಗಳನ್ನು ವಿಧಿಸಲಾಗಿದೆ. (ಒನ್ ಇಂಡಿಯಾ ಸುದ್ದಿ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications