ಮೈಸೂರು ರಸ್ತೆಯ ಪಂತರಪಾಳ್ಯದಲ್ಲಿ ಅಕ್ರಮ ಅಂಗಡಿ ನೆಲಸಮ
ಬೆಂಗಳೂರು, ಅಕ್ಟೋಬರ್ 20 : ಮೈಸೂರು ರಸ್ತೆಯ ನಾಯಂಡಹಳ್ಳಿಯಲ್ಲಿರುವ ಪಂತರಪಾಳ್ಯದ ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಅಂಗಡಿ ಮುಂಗಟ್ಟುಗಳನ್ನು ಮಂಗಳವಾರ ತೆರವುಗೊಳಿಸಲಾಗಿದೆ. ಜೆಸಿಬಿ ಸಹಾಯದಿಂದ ಎಲ್ಲ ಅಂಗಡಿಗಳನ್ನು ನಿರ್ನಾಮ ಮಾಡಲಾಗಿದೆ.
ನಾಯಂಡಹಳ್ಳಿಯ ಅಂಬೇಡ್ಕರ್ ಕಾಲೋನಿ ಬಳಿ ಬಡ ಜನತೆಗೆಂದು ನಿರ್ಮಿಸಲಾಗಿರುವ ವಸತಿ ಸಮುಚ್ಚಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಅಂಗಡಿಗಳನ್ನು ಪೊಲೀಸ್ ಕಾವಲಿನಲ್ಲಿ ಮಂಗಳವಾರ 10 ಗಂಟೆ ಸುಮಾರಿಗೆ ತೆರವುಗೊಳಿಸಲಾಗಿದೆ. ರಸ್ತೆ ಅಗಲೀಕರಣದ ಉದ್ದೇಶದಿಂದಲೂ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. [ಮೃತ್ಯುರೂಪಿ ನಾಯಂಡಹಳ್ಳಿ ಜಂಕ್ಷನ್ ಹೀಗಿದೆ ನೋಡಿ]

ದಶಕಗಳಿಂದಲೂ ಈ ಸ್ಥಳದಲ್ಲಿ ವ್ಯಾಪಾರಿಗಳು ಸಣ್ಣಸಣ್ಣ ಅಂಗಡಿ ಹಾಕಿಕೊಂಡು ಟೈರ್ ಮಾರಾಟ, ಸ್ಟೌ ರಿಪೇರಿ, ಪಂಚರ್ ಅಂಗಡಿ, ಗಾರೆ ಕೆಲಸದ ಸಾಮಗ್ರಿ ಮಾರುವ ವ್ಯಾಪಾರ ನಡೆಸುತ್ತಿದ್ದರು. ಇದೇ ಸಾಲಿನಲ್ಲಿ ಕಲ್ವಾರಿ ದೇವಾಲಯ ಅಂತ ಬರೆದಿರುವ ಪುಟ್ಟ ಕ್ರೈಸ್ತರ ಚರ್ಚ್ ಕೂಡ ಇದೆ. ಇದನ್ನು ಸದ್ಯಕ್ಕೆ ಕೆಡವಲಾಗಿಲ್ಲ.
ಅಂಗಡಿ ಮುಂಗಟ್ಟು ನಾಶವಾಗಿದ್ದಲ್ಲದೆ, ಪ್ರಾರ್ಥನಾ ಸ್ಥಳಕ್ಕೂ ಸಂಚಕಾರ ಬಂದಿದ್ದರಿಂದ ಈ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಚರ್ಚ್ ನಿರ್ಮಿಸಿದ ಮಾಲಿಕರಿಗೂ ನೋಟೀಸ್ ನೀಡಲಾಗಿದ್ದು, 15 ದಿನಗಳಲ್ಲಿ ಆ ಸ್ಥಳವನ್ನು ಕೂಡ ನೆಲಸಮ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದರು.

ಕೆಲವರು ತಮ್ಮ ಸಾಮಾನು ಸರಂಜಾಮುಗಳನ್ನು ಟೆಂಪೋದಲ್ಲಿ ಹಾಕಿಕೊಂಡು ಬೇರೆ ಸ್ಥಳಕ್ಕೆ ಸ್ಥಳಾಂತರಗೊಳ್ಳುತ್ತಿದ್ದರು. ಕೆಲವು ಅಂಗಡಿಗಳಿಂದ ಹೊರಬಿದ್ದಿದ್ದ ಸಮಾನುಗಳು ಮಾಲಿಕರಿಗಾಗಿ ಕಾದು ರಸ್ತೆಯಲ್ಲಿ ಕುಳಿತಿದ್ದವು. ಗುಜರಿಗೆ ಹಾಕಬೇಕಾದ ವಸ್ತುಗಳೇ ಅಲ್ಲಿ ಹೆಚ್ಚಿದ್ದವು.
ಬಣ್ಣದ ಲುಂಗಿ ಸುತ್ತಿಕೊಂಡಿದ್ದ ಮುಷ್ತಾಕ್ ಎಂಬುವವರು, ತಮ್ಮ ಸಾಮಾನುಗಳ ಸಮೇತ ಏನು ಮಾಡಬೇಕೆಂದು ತೋಚದೆ ರಸ್ತೆಯಲ್ಲೇ ನಿಂತಿದ್ದರು. ಮುಂದೇನು? ಎಂಬ ಪ್ರಶ್ನೆಗೆ "ಏನೋ ಗೊತ್ತಿಲ್ಲ ಸ್ವಾಮಿ, ಎಲ್ಲಿಗೆ ಹೋಗಬೇಕೋ ಗೊತ್ತಾಗುತ್ತಿಲ್ಲ" ಅಂತ ತಮ್ಮ ಅಳಲನ್ನು ತೋಡಿಕೊಂಡರು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications