ರುದ್ರೇಶ್ ಹಂತಕರಿಗೆ ಭಯೋತ್ಪಾದಕ ನಂಟು, 'ಎನ್ಐಎ'ನಿಂದ ಸ್ಪೋಟಕ ಮಾಹಿತಿ
ಕಳೆದ ಅಕ್ಟೋಬರಿನಲ್ಲಿ ಬೆಂಗಳೂರಿನ ಶಿವಾಜಿನಗರದಲ್ಲಿ ಹಾಡ ಹಗಲೇ ಹತ್ಯೆಯಾದ ರುದ್ರೇಶ್ ಹಂತಕರಿಗೆ ಇಂಡಿಯನ್ ಮುಜಾಹಿದ್ದೀನ್ ಜತೆ ನಂಟಿತ್ತು ಎಂಬ ಸ್ಪೋಟಕ ಮಾಹಿತಿಯನ್ನು ಎನ್ಐಎ ಬಹಿರಂಗಪಡಿಸಿದೆ.
ಬೆಂಗಳೂರು, ಏಪ್ರಿಲ್ 11: ಆರ್.ಎಸ್.ಎಸ್ ಕಾರ್ಯಕರ್ತ ರುದ್ರೇಶ್ ಹಂತಕರಿಗೆ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಜತೆ ಸಂಪರ್ಕ ಇತ್ತು ಎಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಖಚಿತಪಡಿಸಿದೆ.
ಕಳೆದ ಅಕ್ಟೋಬರಿನಲ್ಲಿ ರುದ್ರೇಶ್ ರನ್ನು ಬೆಂಗಳೂರಿನ ಶಿವಾಜಿನಗರದಲ್ಲಿ ಹಾಡುಹಗಲೇ ಕೊಲೆ ಮಾಡಲಾಗಿತ್ತು. ನಂತರ ಇದರ ತನಿಖೆಯ ಹೊಣೆಯನ್ನು ಎನ್ಐಎ ವಹಿಸಿಕೊಂಡಿತ್ತು.
ಐದು ಆರೋಪಿಗಳಿಗೆ ಇಂಡಿಯನ್ ಮುಜಾಹಿದ್ದೀನ್ ನಾಯಕ ಸೈಯದ್ ಇಸ್ಮಾಯಿಲ್ ಅಫಾಕ್ ಜತೆ ಸಂಪರ್ಕ ಇದ್ದುದಾಗಿ ಎನ್ಐಎ ಹೇಳಿದೆ. ಸೈಯದ್ ಇಸ್ಮಾಯಿಲ್ ಕರ್ನಾಟಕದ ಭಟ್ಕಳ ಮೂಲದವನಾಗಿದ್ದು, ಯಾಸೀನ್ ಭಟ್ಕಳ್ ನೀಡಿದ ಮಾಹಿತಿ ಮೇರೆಗೆ ಆತನನ್ನು ಈ ಹಿಂದೆ ಬಂಧಿಸಲಾಗಿತ್ತು.

ಬೆಂಗಳೂರು ಪಿಎಫ್ಐ ಜಿಲ್ಲಾಧ್ಯಕ್ಷ ಅಸೀಮ್ ಶರೀಫ್ ಸೇರಿ ಐವರನ್ನು ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಇರ್ಫಾನ್ ಪಾಷಾ, ವಸೀಮ್ ಅಹ್ಮೆದ್, ಮೊಹಮ್ಮದ್ ಸಾದಿಕ್, ಮಜೀಬುಲ್ಲಾ ಇತರ ಬಂಧಿತರಾಗಿದ್ದಾರೆ.
ವಿಚಾರಣೆ ವೇಳೆ ರುದ್ರೇಶ್ ಮಾತ್ರವಲ್ಲ ಇನ್ನೂ ಹಲವು ಬಿಜೆಪಿ ಮತ್ತು ಆರ್.ಎಸ್.ಎಸ್ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದಾಗಿ ಆರೋಪಿಗಳು ಬಾಯಿಬಿಟ್ಟಿದ್ದರು. ಜತೆಗೆ ಇಂಡಿಯನ್ ಮುಜಾಹಿದ್ದೀನ್ ಜತೆಗೆ ಇವರಿಗೆ ಸಂಪರ್ಕ ಇದೆ ಎಂಬುದು ತಿಳಿದು ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಎನ್ಐಎ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದೆ.
ರುದ್ರೇಶ್ ಹತ್ಯೆ ಭಯೋತ್ಪಾದನಾ ಕೃತ್ಯ ಎಂದು ಎನ್ಐಎ ಅಧಿಕಾರಿಗಳು ಹೇಳಿದ್ದಾರೆ. ಮತ್ತು ಈ ಕೃತ್ಯದ ಮೂಲಕ ಹಿಂದೂ ನಾಯಕರಿಗೆ ಎಚ್ಚರಿಕೆಯ ಸಂದೇಶ ನೀಡುವ ಉದ್ದೇಶವನ್ನು ಈ ಆರೋಪಿಗಳು ಹೊಂದಿದ್ದರು ಎಂಬುದಾಗಿ ಎನ್ಐಎ ಹೇಳಿದೆ.
ರುದ್ರೇಶ್ ಕೊಲೆ ಮಾಡುವಾಗ ಆರೋಪಿಗಳು ಆತನನ್ನು ಕಾಫಿರ ಎಂದು ಸಂಬೋಧಿಸಿದ್ದಾಗಿ ಎನ್ಐಎ ಇದೇ ಸಂದರ್ಭದಲ್ಲಿ ಹೇಳಿದ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD









Click it and Unblock the Notifications