ಐಎಂಎ ಪ್ರಕರಣ: ಜಮೀರ್ ಅಹ್ಮದ್ ಗೆ ಸಿಬಿಐ ನೊಟೀಸ್
ಬೆಂಗಳೂರು, ಅಕ್ಟೋಬರ್ 01: ಬಹುಕೋಟಿ ವಂಚನೆಯ ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಬಿಐ ನೊಟೀಸ್ ಜಾರಿ ಮಾಡಿದೆ.
ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರವು ಸಿಬಿಐಗೆ ವಹಿಸಿತ್ತು. ಪ್ರಕರಣ ವಹಿಸಿಕೊಂಡ ಸಿಬಿಐ ಜಮೀರ್ ಅವರಿಗೆ ಸೆಪ್ಟೆಂಬರ್ 19 ರಂದೇ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿತ್ತು. ಅದರಂತೆ ವಿಚಾರಣೆಗೆ ಹಾಜರಾಗಿದ್ದರು ಜಮೀರ್ ಅಹ್ಮದ್.
ಈಗ ಮತ್ತೆ ಸಿಬಿಐ ಜಮೀರ್ ಅವರಿಗೆ ನೊಟೀಸ್ ನೀಡಿದ್ದು, ಮತ್ತೆ ವಿಚಾರಣೆಗೆ ಬರುವಂತೆ ಕೋರಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೂ ನೊಟೀಸ್ ನೀಡಲಾಗಿದೆ ಎನ್ನಲಾಗಿದೆ.

ಜಮೀರ್ ಅಹ್ಮದ್ ಖಾನ್ ಹಾಗೂ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ನಡುವೆ ಆಸ್ತಿ ಮಾರಾಟದ ವ್ಯವಹಾರ ನಡೆದಿತ್ತು. ಅದರ ಬಗ್ಗೆ ಸಿಬಿಐ ಈ ಹಿಂದೆ ಪ್ರಶ್ನೆ ಮಾಡಿತ್ತು. ಕಡಿಮೆ ಬೆಲೆಗೆ ಆಸ್ತಿ ಮಾರಾಟವಾಗಿದೆ ಎಂಬುದು ಸಿಬಿಐ ಗುಮಾನಿಗೆ ಕಾರಣವಾಗಿದೆ ಎನ್ನಲಾಗಿದೆ.
ಐಎಂಎ ಪ್ರಕರಣದಲ್ಲಿ ಅನರ್ಹ ಶಾಸಕ ರೋಷನ್ ಬೇಗ್ಗೂ ಸಿಬಿಐ ನೊಟೀಸ್ ಕಳುಹಿಸಿದೆ. ಆದರೆ ಅವರಿನ್ನೂ ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications