ಐಎಂಎ ಹಗರಣ: ಮನ್ಸೂರ್ ಖಾನ್ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು, ಆಗಸ್ಟ್ 17: ಐಎಂಎ ಹಗರಣ ಪ್ರಮುಖ ಆರೋಪಿ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ.
ಮನ್ಸೂರ್ ಖಾನ್ ನನ್ನು 13 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಆಗಸ್ಟ್ 30 ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಬೇಕಿದೆ. ಆ ನಂತರ ಮುಂದಿನ ವಿಚಾರಣೆ ನಡೆಸಲಾಗುವುದು.
ಐಎಂಎ ಸಂಸ್ಥೆಯು ಸಾರ್ವಜನಿಕರಿಗೆ ಸುಮಾರು 4000 ಕೋಟಿ ವಂಚನೆ ಮಾಡಿದೆ ಎಂಬ ಆರೋಪವಿದ್ದು, ಸರಿ ಸುಮಾರು 30,000 ಪ್ರಕರಣಗಳು ಮನ್ಸೂರ್ ಖಾನ್ ವಿರುದ್ಧ ದಾಖಲಾಗಿವೆ.

ಪ್ರಕರಣದ ತನಿಖೆಯನ್ನು ಎಸ್ಐಟಿ ಮತ್ತು ಕೇಂದ್ರದ ಇಡಿ ಸಂಸ್ಥೆಗಳು ನಡೆಸುತ್ತಿದ್ದು, ಪ್ರಸ್ತುತ ಎಸ್ಐಟಿಯ ವಶದಲ್ಲಿ ಮನ್ಸೂರ್ ಖಾನ್ ಇದ್ದಾರೆ. ಇಡಿಯು ಈಗಾಗಲೇ ವಿಚಾರಣೆಯನ್ನು ಮುಗಿಸಿದೆ.
ಮನ್ಸೂರ್ ಖಾನ್ಗೆ ಸೇರಿದ್ದ ಐಶಾರಾಮಿ ಅಪಾರ್ಟ್ಮೆಂಟ್ ಒಂದರಲ್ಲಿ ಭಾರಿ ಪ್ರಮಾಣದ ನಕಲಿ ಚಿನ್ನದ ಬಿಸ್ಕತ್ತುಗಳನ್ನು ಕೆಲವು ದಿನಗಳ ಹಿಂದಷ್ಟೆ ಎಸ್ಐಟಿಯು ವಶಪಡಿಸಿಕೊಂಡಿತ್ತು. ಅಷ್ಟೆ ಅಲ್ಲದೆ ಭಾರಿ ಪ್ರಮಾಣದ ಹಣ, ಆಸ್ತಿಗಳನ್ನು ಸಹ ಎಸ್ಐಟಿ ಜಪ್ತು ಮಾಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದ್ದು, ರೋಷನ್ ಬೇಗ್, ಜಮೀರ್ ಅಹ್ಮದ್ ಅವರಂತಹಾ ಪ್ರಭಾವಿ ರಾಜಕಾರಣಿಗಳನ್ನೂ ವಿಚಾರಣೆ ನಡೆಸಲಾಗುತ್ತಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications