ಐಎಂಎ ಹಗರಣ : ಮನ್ಸೂರ್ ಖಾನ್ಗೆ 14 ದಿನ ನ್ಯಾಯಾಂಗ ಬಂಧನ
Recommended Video
ಬೆಂಗಳೂರು, ಆಗಸ್ಟ್ 01 : ಬಹುಕೋಟಿ ರೂಪಾಯಿ ಐಎಂಎ ಹಗರಣದ ರೂವಾರಿ ಮನ್ಸೂರ್ ಖಾನ್ ಜೈಲು ಸೇರಿದ್ದಾನೆ. 14 ದಿನಗಳ ಕಾಲ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.
ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ಮನ್ಸೂರ್ ಖಾನ್ರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬೆಂಗಳೂರಿನಲ್ಲಿರುವ ಇಡಿ ವಿಶೇಷ ಕೋರ್ಟ್ 14 ದಿನಗಳ ಕಾಲ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಜುಲೈ 19ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಮನ್ಸೂರ್ ಖಾನ್ರನ್ನು ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದುಕೊಂಡಿತ್ತು. ನಿರಂತರ ವಿಚಾರಣೆ ಬಳಿಕ ಪುನಃ 5 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿತ್ತು.
ಕರ್ನಾಟಕ ಸರ್ಕಾರ ಐಎಂಎ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಇಂದು ಎಸ್ಐಟಿ ಆರೋಪಿಯನ್ನು ತನ್ನ ವಶಕ್ಕೆ ಪಡೆಯಲು ಬಯಸಿತ್ತು. ಆದರೆ, ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆಗಸ್ಟ್ 14ರ ತನಕ ಮನ್ಸೂರ್ ಖಾನ್ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಕಾರಣ ಆತನನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಿದ್ದಾರೆ.











Click it and Unblock the Notifications