ಐಎಂಎ ಹಗರಣ: ಫಾರ್ಮಾ ಮಳಿಗೆ ಮೇಲೆ ದಾಳಿ ವೇಳೆ ಸಿಕ್ಕಿದ್ದೇನು?
ಬೆಂಗಳೂರು, ಜುಲೈ 03: ಐ.ಎಂ.ಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ ಐಟಿ)ವು ತನ್ನ ತನಿಖೆಯನ್ನು ಮುಂದುವರೆಸಿದ್ದು, ಐಎಂಎ ಒಡೆತನದ ಸಂಸ್ಥೆಗಳ ಮೇಲೆ ದಾಳಿ ನಡೆಸಿದೆ.
ಎಸ್ಐಟಿ ತಂಡದಿಂದ ಐಎಂಎ ಸಂಸ್ಥೆ ಒಡೆತನದ ಫ್ರಂಟ್ ಲೈನ್ ಫಾರ್ಮಾದ ಮೂರು ಮಳಿಗೆಗಳ ಮೇಲೆ ದಾಳಿ - 2.22 ಲಕ್ಷ ನಗದು ಸೇರಿದಂತೆ 55.22 ಲಕ್ಷ ರೂ ಬೆಲೆಯ ಫಾರ್ಮಸಿ & ವಿದ್ಯುನ್ಮಾನ ವಸ್ತುಗಳು ವಶ ಪಡೆಸಿಕೊಳ್ಳಲಾಗಿದೆ.
ಐ.ಎಂ.ಎ ಸಮೂಹ ಸಂಸ್ಥೆಗಳ ಒಡೆತನದ ಮಳಿಗೆಗಳ ಮೇಲೆ ಶೋಧನಾ ಕಾರ್ಯ ಮುಂದುವರೆಸಿದ ವಿಶೇಷ ತನಿಖಾ ತಂಡವು ಮಂಗಳವಾರದಂದು ಮಲ್ಲೇಶ್ವರಂ, ಯಶವಂತಪುರ ಮತ್ತು ವಿಜಯನಗರಗಳಲ್ಲಿದ್ದ 3 ಮಳಿಗೆಗಳ ಮೇಲೆ ದಾಳಿ ನಡೆಸಿತು.

ಡಿವೈಎಸ್ಪಿ ಅನಿಲ್ ಭೂಮಿ ರೆಡ್ಡಿ ರವರ ನೇತೃತ್ವದ ತಂಡ ದಾಳಿ ನಡೆಸಿದ್ದು, ಈ ಪೈಕಿ ಮಲ್ಲೇಶ್ವರಂನಲ್ಲಿರುವ ಫ್ರಂಟ್ಲೈನ್ ಫಾರ್ಮಾ ಮಳಿಗೆಯಲ್ಲಿ ದಾಸ್ತಾನು ಮಾಡಲಾಗಿದ್ದ 53 ಲಕ್ಷ ರೂ ಮೌಲ್ಯದ ಫಾರ್ಮಸಿ ಮತ್ತು ವಿದ್ಯುನ್ಮಾನ ಉಪಕರಣ ಹಾಗೂ 2.22 ಲಕ್ಷ ನಗದುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶ್ವಸಿಯಾಗಿದ್ದಾರೆ. ಉಳಿದಂತೆ ಯಶವಂತಪುರ ಹಾಗೂ ವಿಜಯನಗರದಲ್ಲಿರುವ ಮಳಿಗೆಗಳ ಶೋಧನಾ ಕಾರ್ಯವು ಮುಂದುವರೆದಿರುತ್ತದೆ.
ಈ ಕಾರ್ಯಾಚರಣೆಯನ್ನು ಐ.ಎಂ.ಎ ಪ್ರಕರಣದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಬಿ.ಆರ್.ರವಿಕಾಂತೇಗೌಡ, ಐಪಿಎಸ್, ಡಿಐಜಿ & ಜಂಟಿ ಪೊಲೀಸ್ ಆಯುಕ್ತರು, ಅಪರಾಧ, ಬೆಂಗಳೂರು ನಗರ ರವರ ಮತ್ತು ಗಿರೀಶ್.ಎಸ್, ಐಪಿಎಸ್, ಡಿಸಿಪಿ, ಅಪರಾಧ, ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಅನಿಲ್ ಭೂಮಿ ರೆಡ್ಡಿ ರವರ ನೇತೃತ್ವದ ತಂಡ ನಿರ್ವಹಿಸಿರುತ್ತದೆ.
ಇದಕ್ಕೂ ಮುನ್ನ ಜೂನ್ 30ರಂದು ಬಿಬಿಎಂಪಿ ನಾಮಿನೇಟಡ್ ಸದಸ್ಯ ಸೈಯದ್ ಮುಜಾಹೀದ್ ಎಂಬಾತನನ್ನು ಬಂಧಿಸಿ, ಆತನ ಮನೆ ಮೇಲೆ ದಾಳಿ ನಡೆಸಿದ್ದರು. ತನಿಖಾ ಸಂದರ್ಭದಲ್ಲಿ ಐ.ಎಂ.ಎ ಒಡೆತನದ ವಿವಿಧ ಕಂಪನಿಗಳ ಹೆಸರಿನಲ್ಲಿದ್ದ ಒಟ್ಟು 101 ವಿವಿಧ ಬ್ಯಾಂಕ್ ಖಾತೆಗಳನ್ನು ಪತ್ತೆ ಹಚ್ಚಿದ ಎಸ್.ಐ.ಟಿ ತಂಡವು ಈ ಖಾತೆಗಳಲ್ಲಿ ರೂ. 1,16,94,307 ಹಣ ಇರುವುದನ್ನು ತಿಳಿದು ಈ ಎಲ್ಲಾ ಖಾತೆಗಳ ಮುಂದಿನ ವ್ಯವಹಾರವನ್ನು ಸ್ಥಗಿತಗೊಳಿಸುವ ಕ್ರಮ ತೆಗೆದುಕೊಂಡಿರುತ್ತದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications