ರೋಷನ್ ಬೇಗ್ ನಾಳೆ ಜೈಲಿನಿಂದ ಬಿಡುಗಡೆ ಆಗ್ತಾರಾ ?
ಬೆಂಗಳೂರು, ಡಿಸೆಂಬರ್ 04: ಐಎಂಎ ವಂಚನೆ ಪ್ರಕರಣದಲ್ಲಿ ಸಿಬಿಐ ಬಂಧನಕ್ಕೆ ಒಳಗಾಗಿರುವ ಮಾಜಿ ಶಾಸಕ ರೋಷನ್ ಬೇಗ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಜಾಮೀನು ಸಿಗುತ್ತಾ ? ಜೈಲಿನಿಂದ ಹೊರಗೆ ಬರುತ್ತಾರಾ ? ಅಥವಾ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಮುಂದುವರೆಯುತ್ತಾರೆ. ಎಲ್ಲವನ್ನು ತೀರ್ಮಾನಿಸುವುದು ಅವರ ಸಲ್ಲಿಸಿರುವ ಜಾಮಿನು ಅರ್ಜಿ ಏನಾಯ್ತು ಎಂಬುದರ ವಿವರ ಇಲ್ಲಿದೆ ನೋಡಿ.
ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೊಪಿ ಮನ್ಸೂರ್ ಖಾನ್ ನಿಂದ ಸುಮಾರು ನಾನೂರು ಕೋಟಿ ರೂಪಾಯಿ ಪಡೆದ ಆರೋಪ ರೋಷನ್ ಬೇಗ್ ಮೇಲಿದೆ. ಇದನ್ನು ಮನ್ಸೂರ್ ಖಾನ್ ಖುದ್ದು ಅಡಿಯೋ ಮಾಡಿ ನಗರ ಪೊಲೀಸ್ ಆಯುಕ್ತರಿಗೆ ಅಡಿಯೋ ರವಾನೆ ಮಾಡಿದ್ದರು. ಐಎಂಎ ವಂಚನೆ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆಗೆ ಕೈಗೆತ್ತಿಕೊಂಡಿತ್ತು. ಈ ವೇಳೆಯೇ ರೋಷನ್ ಬೇಗ್ ವಿಚಾರಣೆಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮುಂದಾಗಿದ್ದರು. ರೋಷನ್ ಬೇಗ್ ಅಲ್ದಾಣದ ಬಳಿ ವಿಚಾರಣೆಗೆ ಬರಲು ನಿರಾಕರಿಸಿದ್ದರು. ಇದೇ ಹಂತದಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.
ಐಎಂಎ ವಂಚನೆ ಪ್ರಕರಣದಲ್ಲಿ ಅನೇಕ ರಾಜಕಾರಣಿಗಳ ಹೆಸರು ಕೇಳಿ ಬಂದಿತ್ತು. ಅದರಲ್ಲಿ ರೋಷನ್ ಬೇಗ್ ಅವರ ಹೆಸರು ಅಗ್ರ ಸ್ಥಾನದಲ್ಲಿತ್ತು. ಸಿಬಿಐ ಅಧಿಕಾರಿಗಳು ಪ್ರಕರಣ ತನಿಖೆ ಮುಂದುವರೆಸಿದರೂ ರಾಜಕಾರಣಿಗಳ ಪಾತ್ರ ಇರುವ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಲೇ ಇಲ್ಲ. ಐಎಂಎ ವಂಚನೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಅಧಿಕಾರಿಗಳ ವಿಚಾರಣೆ ಮತ್ತು ಅವರ ವಿರುದ್ಧ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸುವ ಕಾರ್ಯದಲ್ಲಿ ತೊಡಗಿತ್ತು. ಇತ್ತೀಚೆಗೆ ಇದ್ದಕ್ಕಿದ್ದಂತೆ ರೋಷನ್ ಬೇಗ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಬರಲು ಸೂಚಿಸಿತ್ತು. ವಿಚಾರಣೆಗೆ ಹಾಜರಾದ ಬೇಗ್ ವಾಪಸು ಮನೆಗೆ ಬರಲಿಲ್ಲ. ಬದಲಿಗೆ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದರು. ಜೈಲಿನಿಂದಲೂ ಪೊಲೀಸ್ ಕಸ್ಟಡಿಗೆ ಪಡೆದು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಅನಾರೋಗ್ಯದ ಕಾರಣ ನೀಡಿ ಚಿಕಿತ್ಸೆ ಕೂಡ ಪಡೆದಿದ್ದರು.

ಜಾಮೀನು ಕೋರಿ ಅರ್ಜಿ : ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಜಾಮೀನು ಕೋರಿ ರೋಷನ್ ಬೇಗ್ ಪರ ವಕೀಲರಾದ ಶಶಿಕಿರಣ್ ಶೆಟ್ಟಿ ಅವರು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇಂದು ನಡೆಯಿತು. 2018 ರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ಬಂಧಿಸಿದ್ದಾರೆ. ಸಿಬಿಐ ತನಿಖೆಗೆ ನಮ್ಮ ಕಕ್ಷಿದಾರರು ಸ್ಪಂದಿಸಿದ್ದಾರೆ. ಯಾವಾಗ ಬೇಕಾದರೂ ವಿಚಾರಣೆಗೆ ಕರೆದರೆ ಹೋಗಲು ಸಿದ್ಧರಿದ್ದಾರೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಹುರುಳಿಲ್ಲ. ಈಗಾಗಲೇ 36 ಆರೋಪಿಗಳ ಪೈಕಿ 35 ಮಂದಿಗೆ ಜಾಮೀನು ಲಭ್ಯವಾಗಿದೆ. ರೋಷನ್ ಬೇಗ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಯೋ ಸಹಜ ಕಾಯಿಲೆಗಳಿಂದ ಅವರು ನರಳುತ್ತಿದ್ದಾರೆ. ನ್ಯಾಯಾಲಯ ಯಾವುದೇ ಷರತ್ತು ವಿಧಿಸಿದರು ಅದನ್ನು ಪಾಲಿಸಲಿದ್ದು, ಜಾಮೀನು ನೀಡಬೇಕು ಎಂದು ಬೇಗ್ ಪರ ವಕೀಲರು ವಾದ ಮಂಡಿಸಿದರು.
Recommended Video
ಇದಕ್ಕೆ ಅಕ್ಷೇಫ ವ್ಯಕ್ತಪಡಿಸಿದ ಸಿಬಿಐ ವಿಶೇಷ ಅಭಿಯೋಜಕರು, ರೋಷನ್ ಬೇಗ್ ಪ್ರಭಾವಿ ವ್ಯಕ್ತಿ. ಅವರು ಹೊರಗೆ ಬಂದರೆ ಸಾಕ್ಷಿ ನಾಶ ಪಡಿಸುವ ಸಾಧ್ಯತೆಯಿದೆ. ನಾನೂರು ಕೋಟಿ ರೂಪಾಯಿ ವಂಚನೆ ಮಾಡಿರುವ ಗಂಭೀರ ಆರೋಪ ಇರುವುದರಿಂದ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು. ವಾದ ಮತ್ತು ಪ್ರತಿವಾದ ಆಲಿಸಿದ ಸಿಬಿಐ ವೀಶೇಷ ನ್ಯಾಯಾಲಯ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಜಾಮೀನು ಸಿಕ್ಕರೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ತಪ್ಪಿದರೆ ಹೈಕೋರ್ಟ್ ಮೊರೆ ಹೋಗಬೇಕಾಗುತ್ತದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications