ಕಟ್ಟಡಗಳ ನಿರ್ಮಾಣಕ್ಕೆ ಬೇಕಾದ ನಿವೇಶನಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸಿ: ತುಷಾರ್ ಗಿರಿನಾಥ್

ಬೆಂಗಳೂರು, ಡಿಸೆಂಬರ್ 19: ಕಟ್ಟಡಗಳ ನಿರ್ಮಾಣಕ್ಕೆ ಬೇಕಾಗಿರುವ ನಿವೇಶನಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸಿ ಎಂದು ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅಂಗನವಾಡಿ, ವಿದ್ಯಾರ್ಥಿನಿಲಯ, ರುದ್ರಭೂಮಿ, ಘನತ್ಯಾಜ್ಯ ಸಂಸ್ಕರಣಾ ಘಟಕಗಳ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗಳಿಗೆ ಅಗತ್ಯವಿರುವ ಭೂಮಿಗಾಗಿ ಪ್ರಸ್ತಾವನೆ ಶೀಘ್ರ ಸಲ್ಲಿಸಿ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸ್ವಂತ ಕಟ್ಟಡವಿಲ್ಲದೇ ಸುಮಾರು 620 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಕೂಡಲೆ ಆನೇಕಲ್ ತಾಲೂಕಿನಲ್ಲಿ 50 ನಿವೇಶನಗಳಿಗೆ ಪ್ರಸ್ತಾವನೆ ಸಿದ್ದಪಡಿಸಿ ಸಲ್ಲಿಸುವಂತೆ ಇಲಾಖಾ ಉಪನಿರ್ದೇಶಕಿ ಡಾ. ಉಷಾ ಅವರಿಗೆ ಸೂಚಿಸಿದ ಕಾರ್ಯದರ್ಶಿಗಳು ಹಂತ ಹಂತವಾಗಿ ಈ ಕೊರತೆಯನ್ನು ನೀಗಿಸುವತ್ತ ಕ್ರಮ ವಹಿಸುವಂತೆ ತಿಳಿಸಿದರು.

Immediately Submit A Proposal For A Construction Site

ಈಗಾಗಲೇ, ಗುರುತಿಸಲಾಗಿರುವ ಲಭ್ಯವಿರುವ ಭೂಮಿಯನ್ನು ಕಂದಾಯ, ನಗರಸಭೆ, ಪಾಲಿಕೆ ಅಥವಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಹಸ್ತಾಂತರ ಮಾಡುವ ಪ್ರಕ್ರಿಯೆ ಕ್ಷಿಪ್ರಗತಿಯಲ್ಲಿ ನಡೆಯಬೇಕು ಎಂದರು.

ಜಿಲ್ಲೆಯಲ್ಲಿ ರುದ್ರಭೂಮಿಗಾಗಿ ಅಗತ್ಯವಿರುವ ನಿವೇಶನವನ್ನು ಪ್ರಥಮಾದ್ಯತೆ ಮೇರೆಗೆ ಮಂಜೂರು ಮಾಡುವುದರೊಂದಿಗೆ ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಕಂದಾಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಭೂ ಒಡೆತನ ಯೋಜನೆಯಡಿ ಸಾಧಿಸಿರುವ ಪ್ರಗತಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಥಮಾದ್ಯತೆ ಮೇರೆಗೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಸೂಚಿಸಿದರು.

ಭೂಮಾಪನಾ ಹಾಗೂ ಭೂದಾಖಲೆ ಇಲಾಖೆಯಲ್ಲಿ ಇರುವ 43 ಸರ್ವೆ ಅಧಿಕಾರಿಗಳು ಕೈಗೊಂಡಿರುವ ಕಾರ್ಯದ ಅಂಕಿ ಅಂಶವು ನಿಗದಿತ ಗುರಿಯನ್ನು ತಲುಪಿರದ ಬಗ್ಗೆ ಕಾರ್ಯದರ್ಶಿಗಳು ಅಸಮಧಾನ ವ್ಯಕ್ತ ಪಡಿಸಿದರು.

ಇಲಾಖಾ ಉಪನಿರ್ದೇಶಕರು ಇದಕ್ಕೆ ಉತ್ತರಿಸಿ ಕಂದಾಯ ಇಲಾಖೆಯ ಭೂಮಿಯು ಸೇರಿದಂತೆ ಪಾಲಿಕೆ, ಬಿಡಿಎ, ಅರಣ್ಯ, ಕೆರೆಗಳು ಹಾಗೂ ರಾಜಕಾಲುವೆಗಳ ಸರ್ವೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇಲಾಖೆ ಹೊರತುಪಡಿಸಿ ಹೆಚ್ಚುವರಿಯಾಗಿ ಇತರೆ ಇಲಾಖೆಗಳ ಕಾರ್ಯವನ್ನು ತಮ್ಮ ಪ್ರಗತಿ ಸಾಧನೆಗೆ ಸೇರಿಸಿಕೊಳ್ಳುವಂತೆ ಕಾರ್ಯದರ್ಶಿಗಳು ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+