ಕಟ್ಟಡ ಯೋಜನೆಯಲ್ಲಿ ಭ್ರಷ್ಟಾಚಾರ ತಡೆಯಲು ಸ್ವಯಂಚಾಲಿತ ಯೋಜನೆ ಅನುಮೋದನೆ ವ್ಯವಸ್ಥೆ ಜಾರಿ
ಬೆಂಗಳೂರು, ಅಕ್ಟೋಬರ್ 11: ಮನೆ ನಿರ್ಮಾಣಕ್ಕಾಗಿ ಕಟ್ಟಡಗಳ ಯೋಜನೆಗಳನ್ನು ಅನುಮೋದಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು, ಕರ್ನಾಟಕ ಸರ್ಕಾರವು ಸ್ವಯಂಚಾಲಿತ ಯೋಜನೆ ಅನುಮೋದನೆ (ಎಪಿಎ) ವ್ಯವಸ್ಥೆಯನ್ನು ಪ್ರಾರಂಭಿಸಲು ಯೋಜಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ 50/60 ಅಡಿ ಅಳತೆಯ ಪ್ಲಾಟ್ಗಳಲ್ಲಿ ಮನೆಗಳನ್ನು ನಿರ್ಮಿಸುತ್ತಿರುವ ಮತ್ತು ಪ್ರಮಾಣೀಕೃತ ವಾಸ್ತುಶಿಲ್ಪಿಗಳಿಂದ ಯೋಜನೆಯನ್ನು ರೂಪಿಸಿದ ಹೊಸ ವ್ಯವಸ್ಥೆಗೆ ಆಸ್ತಿ ಮಾಲೀಕರು ಮಾತ್ರ ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗಿದೆ.

ಕಟ್ಟಡದ ಯೋಜನೆ ಸಿದ್ಧವಾದ ನಂತರ ಆಸ್ತಿ ಮಾಲೀಕರು ಡಾಕ್ಯುಮೆಂಟ್ ಅನ್ನು ಸಿಸ್ಟಮ್ಗೆ ಅಪ್ಲೋಡ್ ಮಾಡಬೇಕು. ಅದು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ಸ್ವಯಂಚಾಲಿತವಾಗಿ ಅನುಮೋದಿಸುತ್ತದೆ. ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದಷ್ಟು ಬೇಗ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಪ್ರಕ್ರಿಯೆ ಪಾರದರ್ಶಕತೆಗೆ ಎಪಿಎ ವ್ಯವಸ್ಥೆ:
ಸ್ವಯಂಚಾಲಿತ ಯೋಜನೆ ಅನುಮೋದನೆ (ಎಪಿಎ) ವ್ಯವಸ್ಥೆಯು ಯೋಜನೆ ಅನುಮೋದನೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಹೊಸ ವ್ಯವಸ್ಥೆಯು ಕಾರ್ಯರೂಪಕ್ಕೆ ಬಂದ ನಂತರ, ಆಸ್ತಿ ಮಾಲೀಕರು ಅನುಮೋದನೆಗಾಗಿ ನಿಗದಿತ ಶುಲ್ಕವನ್ನು ಮಾತ್ರ ಪಾವತಿಸಬೇಕಾಗುತ್ತದೆ ಮತ್ತು ಬಿಬಿಎಂಪಿ ಕಚೇರಿಗಳಿಗೆ ಭೇಟಿ ನೀಡಬೇಕಾಗಿಲ್ಲ.
ಸ್ವಯಂಚಾಲಿತ ಯೋಜನೆ ಅನುಮೋದನೆ ವ್ಯವಸ್ಥೆಯು ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸುತ್ತದೆ. ಆದರೆ ಇದನ್ನು 50/60 ಅಡಿ ಅಳತೆಯ ನಿವೇಶನಗಳಲ್ಲಿ ಮನೆ ನಿರ್ಮಿಸುವವರಿಗೆ ಮಾತ್ರ ವ್ಯವಸ್ಥೆ ಕಲ್ಪಿಸಲಾಗಿದೆಯೇ ಹೊರತು ಅಪಾರ್ಟ್ಮೆಂಟ್ ನಿರ್ಮಿಸುವ ಬಿಲ್ಡರ್ಗಳಿಗೆ ಅಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಆಸ್ತಿ ತೆರಿಗೆ ಆದಾಯ ಹೆಚ್ಚಿಸುವ ಗುರಿ:
ಆಸ್ತಿ ತೆರಿಗೆಯಿಂದ ಆದಾಯವನ್ನು ಹೆಚ್ಚಿಸಲು ಸರ್ಕಾರವು ಆಸ್ತಿ ತೆರಿಗೆಯ ಸ್ವಯಂ ಮೌಲ್ಯಮಾಪನ ಯೋಜನೆಯನ್ನು ಬದಲಿಸಲು ಹೊಸ ವ್ಯವಸ್ಥೆಯನ್ನು ಪರಿಚಯಿಸಲು ಯೋಜಿಸುತ್ತಿದೆ. ಬೆಂಗಳೂರು ಪ್ರಸ್ತುತ ಆದಾಯಕ್ಕಿಂತ ಮೂರು ಪಟ್ಟು ಹೆಚ್ಚು ತೆರಿಗೆ ಸಂಗ್ರಹಿಸಬಹುದು. ಸದ್ಯ ಬಿಬಿಎಂಪಿಗೆ ಪ್ರತಿ ವರ್ಷ ಸರಾಸರಿ 3,000 ಕೋಟಿ ರೂಪಾಯಿ ಆಸ್ತಿ ತೆರಿಗೆ ಬರುತ್ತಿದೆ. ಆಸ್ತಿ ಮಾಲೀಕರು ಕಡಿಮೆ ಆಸ್ತಿ ಘೋಷಣೆ ಮಾಡುವ ಮೂಲಕ ನಾಗರಿಕ ಸಂಸ್ಥೆಗೆ ವಂಚನೆ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.
ಅಕ್ರಮಗಳನ್ನು ಪರಿಶೀಲಿಸಲು, ಆಸ್ತಿಗಳನ್ನು ಪರಿಶೀಲಿಸಿದ ನಂತರ ಆಸ್ತಿ ಮಾಲೀಕರಿಗೆ ಡಿಜಿಟಲ್ ಆಸ್ತಿ ದಾಖಲೆಗಳನ್ನು ನೀಡಲು ಸರ್ಕಾರ ಶೀಘ್ರದಲ್ಲೇ ಪ್ರಾರಂಭಿಸುತ್ತದೆ. ನಗರ ಆಸ್ತಿ ಮಾಲೀಕತ್ವ ದಾಖಲೆಗಳ (UPOR) ಅಡಿಯಲ್ಲಿ ಪಟ್ಟಿ ಮಾಡಲಾದ ಎಲ್ಲಾ ಆಸ್ತಿಗಳನ್ನು ಸರ್ವೆ, ಸೆಟ್ಲ್ಮೆಂಟ್ ಮತ್ತು ಭೂ ದಾಖಲೆಗಳ ಇಲಾಖೆಯಿಂದ ಸಮೀಕ್ಷೆ ಮಾಡಲಾಗುತ್ತಿದೆ. ಯುಪಿಒಆರ್ ಡೇಟಾವನ್ನು ನಂತರ ಬಿಬಿಎಂಪಿಯ ಡೇಟಾ ಬೇಸ್ನೊಂದಿಗೆ ಲಿಂಕ್ ಮಾಡಲಾಗುತ್ತದೆ, ಇದು ಹೊಸ ತೆರಿಗೆ ವ್ಯವಸ್ಥೆಯನ್ನು ವಿನ್ಯಾಸಗೊಳಿಸಲು ಸಹಾಯ ಮಾಡುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಅಲೆದಾಟಕ್ಕೆ ಬ್ರೇಕ್: AI ಬಳಸಿ ಸುಲಭವಾಗಿ ಮನೆ ಹುಡುಕಿದ ಬೆಂಗಳೂರು ಯುವಕ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications