ಬೆಂಗಳೂರು-ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಡಿಜಿ ಯಾತ್ರಾ ಯೋಜನೆ ಜಾರಿ
ಬೆಂಗಳೂರು, ಜುಲೈ, 19: ಫೇಶಿಯಲ್ ಪರಿಶೀಲನೆ ತಂತ್ರಜ್ಞಾನವನ್ನು ಬಳಸಿ ಪ್ರಯಾಣಿಕರಿಗೆ ಚೆಕ್-ಇನ್ ಮಾಡಲು ಬೆಂಗಳೂರು ಮತ್ತು ವಾರಣಾಸಿಯ ವಿಮಾನ ನಿಲ್ದಾಣಗಳಲ್ಲಿ ಡಿಜಿ ಯಾತ್ರಾ ಯೋಜನೆ ಪ್ರಾರಂಭವಾಗಲಿದೆ ಎಂದು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸೋಮವಾರ ತಿಳಿಸಿದ್ದಾರೆ.
ಮೊದಲ ಹಂತವು ಆಗಸ್ಟ್ 15 ರಂದು ಪ್ರಾರಂಭವಾಗಲಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ವಿವಿಧ ಚೆಕ್ ಪಾಯಿಂಟ್ಗಳ ಮೂಲಕ ಕಾಗದರಹಿತ ಮತ್ತು ಕಾಂಟ್ಯಾಕ್ಟ್ಲೆಸ್ ಪ್ರಕ್ರಿಯೆಯ ಮೂಲಕ ಒಳಗಡೆ ಹೋಗಬಹುದು. ಬೋರ್ಡಿಂಗ್ ಪಾಸ್ಗೆ ಲಿಂಕ್ ಮಾಡಲಾದ ಗುರುತನ್ನು ಸ್ಥಾಪಿಸಲು ಮುಖದ ರೀತಿಯಯಲ್ಲಿ ಗುರುತನ್ನು ಬಳಸಲಾಗುತ್ತದೆ.
ಈ ಯೋಜನೆಯ ಕುರಿತು ಸೋಮವಾರ ಸಲಹಾ ಸಮಿತಿಯನ್ನು ಮಾಡಲಾಗಿದ್ದು, ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾಹಿತಿ ನೀಡಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಪರಿಶೀಲನೆ ನಡೆಸುವ ಡಿಜಿಟಲೀಕರಣದ ಮೊದಲ ಯೋಜನೆ ಇದಾಗಿದೆ. ಬೆಂಗಳೂರು ಮತ್ತು ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಮೊದಲನೇ ಹಂತವನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಈ ಯೋಜನೆಯಲ್ಲಿ ಸಮಸ್ಯೆಗಳು ಆಗದಂತೆ ಕಾಳಜಿ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ಡಿಜಿ ಯಾತ್ರಾ ಯೋಜನೆಯಲ್ಲಿ ಮೊಬೈಲ್ ವ್ಯಾಲೆಟ್ ಆಧಾರಿತ ಗುರುತಿನ ಸೌಲಭ್ಯವನ್ನು ಕಲ್ಪಿಸಿದೆ. ಈ ಯೋಜನೆ ಫೌಂಡೇಶನ್ ಪ್ಯಾನ್ ಇಂಡಿಯಾದ ಘಟಕವಾಗಿದ್ದು, ಗೌಪ್ಯತೆ ಮತ್ತು ಡೇಟಾ ರಕ್ಷಣೆಯನ್ನು ಮಾಡುತ್ತದೆ.
ಸ್ಥಳೀಯ ವಿಮಾನ ನಿಲ್ದಾಣ ವ್ಯವಸ್ಥೆಗಳಿಗೆ ಅನುಗುಣವಾಗಿ ಮಾನದಂಡಗಳನ್ನು ಹೊಂದಿದ್ದು, ನಿಯಮಿತ ಲೆಕ್ಕಪರಿಶೋಧನೆಗಳನ್ನು ನಡೆಸುತ್ತದೆ. ಮುಂದಿನ ವರ್ಷ ಮಾರ್ಚ್ ತಿಂಗಳ ವೇಳೆಗೆ ಪುಣೆ, ವಿಜಯವಾಡ, ಕೋಲ್ಕತ್ತಾ, ದೆಹಲಿ ಮತ್ತು ಹೈದರಾಬಾದ್ನ ವಿಮಾನ ನಿಲ್ದಾಣಗಳಲ್ಲಿ ಈ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಈ ವ್ಯವಸ್ಥೆ ಮೊದಲನೇ ಬಾರಿಗೆ ಜಾರಿಗೆ ಬರಲಿದ್ದು, ಪ್ರಯಾಣಿಕರಿಗೂ ಹಾಗೂ ಪರಿಶೀಲನೆ ನಡೆಸುವವರಿಗೂ ಸಹಾಯವಾಗಲಿದೆ.

ವಿಮಾನ ನಿಲ್ದಾಣಗಳಲ್ಲಿ ಮೊಟ್ಟ ಮೊದಲ ಬಾರಿಗೆ ಈ ವ್ಯವಸ್ಥೆಯನ್ನು ತರಲಾಗಿದ್ದು, ಬೆಂಗಳೂರಿನಲ್ಲಿ ಆಗಸ್ಟ್ 15ರಂದು ಜಾರಿಗೆ ಬರಲಿದೆ. ಇನ್ನಿತರ ವಿಮಾನ ನಿಲ್ದಾಣಗಳಲ್ಲೂ ಜಾರಿಗೆ ತರುವುದಾಗಿ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ದತ್ತಾಂಶಗಳು ಲೀಕ್ ಆಗದಂತೆ ತಡೆಗಟ್ಟುವ ಕಾರ್ಯ ಇದರದ್ದಾಗಿದ್ದು, ಪ್ರಯಾಣಿಕರಿಗೂ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಸಾಮಾನ್ಯವಾಗಿ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಡೇಟಾಗಳು ಲೀಕ್ ಆಗಿರುವ ಪ್ರಕರಣಗಳು ದಾಖಲಾಗುತ್ತಿರುವುದನ್ನು ನೋಡಿದ್ದೇವೆ. ಇದಕ್ಕೆಲ್ಲ ನಾಂದಿ ಆಡಲು ವಿಮಾನಯಾನ ಸಚಿವಾಲಯ ಈ ಮಹತ್ವದ ಯೋಜನೆ ಜಾರಿ ಮಾಡಲು ಮುಂದಾಗಿದೆ..
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications