ಬೆಂಗಳೂರು - ಮೆಲ್ಬೋರ್ನ್ "ಸಿಸ್ಟರ್ ಸಿಟಿ"ಗಳ ನಡುವೆ ಮಹತ್ವದ ಒಪ್ಪಂದ
Bengaluru-Melbourne Partnership: ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಬೆಂಗಳೂರು ಮತ್ತು ಮೆಲ್ಬೋರ್ನ್ನ ನಗರಗಳ ನಡುವೆ ನವೀನತೆ, ಸ್ಥಿರತೆ ಮತ್ತು ಸಮಗ್ರ ನಗರಾಭಿವೃದ್ಧಿಯನ್ನು ಉತ್ತೇಜಿಸಲು ಉದ್ದೇಶ ಪತ್ರ (Letter of Intent) ಹಸ್ತಾಂತರ ಮಾಡಲಾಗಿದೆ. ಆಸ್ಟ್ರೇಲಿಯಾ ದೇಶದ ಮೆಲ್ಬೋರ್ನ್ ನಗರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದೊಂದಿಗೆ ನವೀನತೆ, ಸ್ಥಿರತೆ ಮತ್ತು ಸಮಗ್ರ ನಗರಾಭಿವೃದ್ಧಿ ಕ್ಷೇತ್ರಗಳಲ್ಲಿ ಸಹಕಾರ ನೀಡಲು ಆಸಕ್ತಿಯನ್ನು ವ್ಯಕ್ತಪಡಿಸಿದೆ. ಈ ಸಂಬಂಧ ತಾಜ್ ವೆಸ್ಟ್ ಎಂಡ್ ನಲ್ಲಿ ಉದ್ದೇಶ ಪತ್ರವನ್ನು ಹಸ್ತಾಂತರಿಸಲಾಗಿದೆ.
ಮೆಲ್ಬೋರ್ನ್ನ ಲಾರ್ಡ್ ಮೇಯರ್ ನಿಕೊಲಸ್ ರೀಸ್ ಅವರು ಕರ್ನಾಟಕ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಅವರಿಗೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರಿಗೆ ಈ ಉದ್ದೇಶ ಪತ್ರವನ್ನು ಹಸ್ತಾಂತರಿಸಿದ್ದಾರೆ.

"ಸಿಸ್ಟರ್ ಸಿಟಿ" ಗಳ ನಡುವಿನ ಪರಸ್ಪರ ಸಹಕಾರವನ್ನು ಗಟ್ಟಿಗೊಳಿಸುವ ಉದ್ದೇಶದಿಂದ, ಎರಡೂ ನಗರಗಳು ಕೆಳಕಂಡ ಪ್ರಮುಖ ಕ್ಷೇತ್ರಗಳಲ್ಲಿ ಸಹಯೋಗವನ್ನು ಅನ್ವೇಷಿಸಲು ಒಮ್ಮತ ವ್ಯಕ್ತಪಡಿಸಿವೆ.
1. ನಗರ ನವೀನತೆ ಮತ್ತು ಸ್ಮಾರ್ಟ್ ಸಿಟಿ
2. ತಂತ್ರಜ್ಞಾನ ಮತ್ತು ನಾವೀನ್ಯ ಪರಿಸರ ವ್ಯವಸ್ಥೆಗಳು
3. ಸುಸ್ಥಿರತೆ ಮತ್ತು ಹವಾಮಾನ ಸ್ಥಿತಿಸ್ಥಾಪಕತೆ
4. ಶಿಕ್ಷಣ ಹಾಗೂ ಜ್ಞಾನ ವಿನಿಮಯ
5. ಸಾಂಸ್ಕೃತಿಕ ಮತ್ತು ಕ್ರೀಡಾ ವಿನಿಮಯ
ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿ ನಾಥ್ ಅವರು ಮಾತನಾಡಿ, ಮೆಲ್ಬೋರ್ನ್ ನಗರ ಹಾಗೂ ಬೆಂಗಳೂರು ನಗರಗಳ ನಡುವಿನ ವ್ಯವಸ್ಥಿತ ಮಾಹಿತಿ ವಿನಿಮಯ ಮತ್ತು ಅನುಭವ ಹಂಚಿಕೆ ಎರಡೂ ನಗರಗಳ ಅಭಿವೃದ್ಧಿಗೆ ದಾರಿಯಾಗಲಿದೆ ಎಂದಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು, ನಗರಗಳ ನಡುವಿನ ಈ ಉದ್ದೇಶ ಘೋಷಣೆ, ಪರಸ್ಪರ ಕಲಿಕೆ ಮತ್ತು ಸಹಕಾರಕ್ಕೆ ಬಲ ತುಂಬುತ್ತದೆ. ಇದರಿಂದ ನಗರಾಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಮೆಲ್ಬೋರ್ನ್ ಲಾರ್ಡ್ ಮೇಯರ್ ನಿಕೊಲಸ್ ರೀಸ್ ಅವರು, ಸಹಕಾರ ಮತ್ತು ಪರಿಣಿತಿಯ ಹಂಚಿಕೆ ಮೂಲಕ, ಎರಡೂ ನಗರಗಳ ಹೊಸತನ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವ AI ಆಧಾರಿತ ನಗರ ಪರಿಹಾರಗಳನ್ನು ರೂಪಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಅಭಿಪ್ರಾಯಪಟ್ಟರು. ಅಲ್ಲದೇ ಈ ವೇಳೆ ಜಿಬಿಎ ಹಾಗೂ ನಗರ ಪಾಲಿಕೆಗಳ ಕಾರ್ಯವೈಖರಿ, ಬೆಂಗಳೂರು ನಗರದಲ್ಲಿನ ನಡೆಯುತ್ತಿರುವ ಮತ್ತು ಮುಂದಿನ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದ್ದು, ಲಾರ್ಡ್ ಮೇಯರ್ ಅವರು ಜಿಬಿಎ ಮತ್ತು ನಗರಪಾಲಿಕೆ ವ್ಯವಸ್ಥೆಯನ್ನು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಮೆಲ್ಬೋರ್ನ್ ಉಪ ಲಾರ್ಡ್ ಮೇಯರ್ ರೋಶೇನಾ ಕ್ಯಾಂಪ್ಬೆಲ್, ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್, ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್, ಮೆಲ್ಬೋರ್ನ್ ನಗರದ ಪ್ರತಿನಿಧಿಗಳು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications