KWIN City: ಬೆಂಗಳೂರು 'ಕ್ವಿನ್ ಸಿಟಿ' ಯೋಜನೆ, ಮಹತ್ವದ ಅಪ್ಡೇಟ್ ಕೊಟ್ಟ ಕೈಗಾರಿಕೆ ಸಚಿವರು
ಬೆಂಗಳೂರು, ಫೆಬ್ರವರಿ 04: ಫೆಬ್ರವರಿ ಎರಡನೇ ವಾರ ಜಾಗತಿಕ ಹೂಡಿಕೆದಾರರ ಸಮಾವೇಶ 2025 ನಡೆಯಲಿದೆ. ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳು ಪಾಲ್ಗೊಳ್ಳಲಿವೆ. ಈ ವೇಳೆ ಬೆಂಗಳೂರು ಹೊರ ವಲಯದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಜ್ಞಾನ, ಆರೋಗ್ಯ ಮತ್ತು ಸಂಶೋಧನೆ ನಗರ (KWIN City) ನಿರ್ಮಿಸುವ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವ ಹೆಸರಾಂತ ವಿವಿಗಲು, ಉದ್ಯಮ ಪ್ರತಿಷ್ಠಾನಗಳ ಜೊತೆಗೆ ಕರ್ನಾಟಕ ಸರ್ಕಾರದ ಉದ್ದೇಶಿತ 'ಕ್ವಿನ್ ಸಿಟಿ'ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್ ಟೇಬಲ್ ಗೋಷ್ಠಿ ನಡೆಸಲಾಗುತ್ತಿದೆ.

ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಮಂಗಳವಾರ ಅಧಿಕೃತ ಮಾಹಿತಿ ನೀಡಿದರು. ಸಮಾವೇಶದ ಎರಡನೆಯ ದಿನವಾದ ಫೆ,13ರಂದು ಈ ಗೋಷ್ಠಿ ನಡೆಯಲಿದೆ. ಈ ಸಂದರ್ಭದಲ್ಲಿ ವಿದೇಶಗಳ 5-6 ಮತ್ತು ಭಾರತದ 7-8 ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ. ಈ ಸಂಬಂಧ ಮಾತುಕತೆ ಪ್ರಗತಿಯಲ್ಲಿದ್ದು, ಯಾವ ವಿ.ವಿ.ಗಳೊಂದಿಗೆ ಒಡಂಬಡಿಕೆ ಆಗಲಿದೆ ಎನ್ನುವುದನ್ನು ನಂತರದ ದಿನಗಳಲ್ಲಿ ಅಂತಿಮವಾಗಲಿದೆ.
ಯುಜಿಸಿ ನಿಯಮಗಳ ಪ್ರಕಾರ, ಜಗತ್ತಿನ ಮೊದಲ 500 ಸ್ಥಾನಗಳಲ್ಲಿರುವ ವಿಶ್ವ ವಿದ್ಯಾಲಯಗಳು ಭಾರತದಲ್ಲಿ ತಮ್ಮ ಕ್ಯಾಂಪಸ್ಸನ್ನು ತೆರೆಯಲು ಅವಕಾಶವಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕೈಗಾರಿಕೋದ್ಯಮಗಳಲ್ಲಿನ ಹೂಡಿಕೆ ಬಗ್ಗೆ ಮಾತ್ರ ಗಮನವಿರುವುದಿಲ್ಲ. ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿಯೂ ಸೇರಿದಂತೆ ಸಂಶೋಧನೆ ಮತ್ತು ಅದಕ್ಕೆ ಪೂರಕವಾಗಿರುವ ವಲಯಗಳಿಗೂ ಆದ್ಯತೆ ಇರಲಿದೆ. ಏಕೆಂದರೆ, ಕ್ವಿನ್ ಸಿಟಿ ಯೋಜನೆಯು ಭವಿಷ್ಯದ ನಗರಾಭಿವೃದ್ಧಿಯ ಪರಿಕಲ್ಪನೆ ಮತ್ತು ಜಾಗತಿಕ ಗುಣಮಟ್ಟದ ಉದ್ಯಮಶೀಲತೆ, ಕೌಶಲ ಮುಂತಾದವನ್ನು ಒಳಗೊಂಡಿದೆ ಎಂದು ಹೇಳಿದರು.
ಒಂದೂವರೆ ಗಂಟೆ ಕಾಲದ ಈ ಗೋಷ್ಠಿಯಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ದೊಡ್ಡಬಳ್ಳಾಪುರ- ದಾಬಸ್ಪೇಟೆ ಮಧ್ಯೆ ಸುಮಾರು 5000 ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ನಿರ್ಮಾಣ ಮಾಡುತ್ತಿದ್ದು, ಇದರಲ್ಲಿ ಶಿಕ್ಷಣ, ಆರೋಗ್ಯ, ಸಂಶೋಧನೆ ಮತ್ತು ನಾವೀನ್ಯತೆ ಕುರಿತಾದ ಪ್ರತಿಷ್ಠಿತ ಸಂಸ್ಥೆಗಳು ತಲೆ ಎತ್ತಲಿವೆ ಎಂದು ತಿಳಿಸಿದರು.
ಯಾವೆಲ್ಲ ವಿಶ್ವ ವಿದ್ಯಾಲಯ ಪರಿಣಿತರು ಭಾಗಿ
ಅಜೀಂ ಪ್ರೇಂಜಿ, ಪಿಇಎಸ್, ಎಂ ಎಸ್ ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿವಿ, ದಯಾನಂದ ಸಾಗರ್, ಚಾಣಕ್ಯ, ಸೆಂಟ್ ಜೋಸೆಫ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಅಮಿಟಿ, ಬಿಎಲ್ ಡಿಇ, ಕ್ರೈಸ್ಟ್, ಜೈನ್, ಕೆಎಲ್ಇ ಸೇರಿದಂತೆ ಇನ್ನೂ ಅನೇಕ ಪತಿಷ್ಠಿತ ವಿಶ್ವವಿದ್ಯಾಲಯಗಳಿಗೆ ಆಹ್ವಾನ ನೀಡಲಾಗಿದೆ.
ಜತೆಗೆ ಐಐಎಸ್ಸಿ, ಜವಾಹರಲಾಲ್ ನೆಹರು ಉನ್ನತ ವಿಜ್ಞಾನ ಸಂಶೋಧನಾ ಕೇಂದ್ರ, ನಿಮ್ಹಾನ್ಸ್, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ, ನ್ಯೂಯಾರ್ಕಿನ ಸೆಂಟ್ ಜಾನ್ ಯೂನಿವರ್ಸಿಟಿ, ಇಂಗ್ಲೆಂಡಿನ ಯೂನಿವರ್ಸಿಟಿ ಆಫ್ ಯಾರ್ಕ್, ವೆಲ್ಲೂರಿನ ವಿಐಟಿ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು, ಪಿಲಾನಿಯ ಬಿರ್ಲಾ ತಂತ್ರಜ್ಞಾನ ಮತ್ತು ವಿಜ್ಞಾನ ಸಂಸ್ಥೆ (ಬಿಟ್ಸ್), ಶಾಸ್ತ್ರ ಯೂನಿವರ್ಸಿಟಿ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗಳ ಪರಿಣತರೂ ಭಾಗವಹಿಸಲು ವಿಶ್ವಾಸ ಇದೆ ಎಂದು ಅವರು ನುಡಿದಿದ್ದಾರೆ.
ಮಿಗಿಲಾಗಿ ಅಜೀಂ ಪ್ರೇಂಜಿ, ಇನ್ಫೋಸಿಸ್, ರಿಲಯನ್ಸ್, ಅದಾನಿ, ಭಾರತಿ, ವಿಪ್ರೋ, ಬಯೋಕಾನ್, ಕೊಟಕ್ ಎಜುಕೇಶನ್, ಶಿವ ನಾಡಾರ್, ಬಜಾಜ್ ಮತ್ತು ಮಹೀಂದ್ರ ಪ್ರತಿಷ್ಠಾನಗಳು, ಟಾಟಾ ಟ್ರಸ್ಟ್, ಎಚ್.ಡಿ.ಎಫ್.ಸಿ. ಬ್ಯಾಂಕ್ ಪರಿವರ್ತನ್, ಆದಿತ್ಯ ಬಿರ್ಲಾ ಗ್ರೂಪ್ ಸಿಎಸ್ಆರ್ ಹಾಗೂ ಏಷ್ಯನ್ ಪೇಂಟ್ಸ್ ಸಿಎಸ್ಆರ್ ಸಂಸ್ಥೆಗಳ ಉನ್ನತ ಮಟ್ಟದ ಪ್ರತಿನಿಧಿಗಳು ಕೂಡ ಇದರಲ್ಲಿ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ ಎಂದು ವಿವರಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications