BMTC: ಬಿಎಂಟಿಸಿ ಪ್ರಯಾಣಿಕರು ಗಮನಿಸಲೇಬೇಕಾದ ಸುದ್ದಿ
BMTC: ಬೆಂಗಳೂರು ಜೀವನಾಡಿ ಸಾರಿಗೆಗಳಲ್ಲಿ ಬಿಎಂಟಿಸಿ ಬಸ್ ಕೂಡ ಒಂದಾಗಿದೆ. ಈ ಬಸ್ಗಳಲ್ಲಿ ಪ್ರತಿನಿತ್ಯ ಲಕ್ಷಾಂತರ ಮಂದಿ ಪ್ರಯಾಣಿಕರನ್ನು ಒಂದು ಕಡೆಯಿಂದ ಮತ್ತೊಂದೆಡೆಗೆ ಪ್ರಯಾಣ ಮಾಡುತ್ತಲೇ ಇರುತ್ತಾರೆ. ಇನ್ನೂ ಈ ಸಾರಿಗೆಯೂ ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ಗಳ ಸೇವೆಯನ್ನು ಒದಗಿಸುತ್ತಲೇ ಇರುತ್ತದೆ. ಇದೀಗ ಇದು ಪ್ರಯಾಣಿಕರಿಗೆ ಮಹತ್ವದ ಸಂದೇಶವನ್ನು ರವಾನಿಸಿದೆ.
ವಾರ ಹೋಗಲಿ, ಒಂದೇ ಒಂದು ದಿನ ಈ ಸಾರಿಗೆ ಇಲ್ಲ ಅಂದ್ರೆ ಒಂದೆಡೆಯಿಂದ ಮತ್ತೊಂದೆಡೆಗೆ ಪ್ರಯಾಣಿಸುವ ಪ್ರಯಾಣಿಕರು ಪರದಾಡಬೇಕಾಗುತ್ತದೆ. ಇದೀಗ ಜನವರಿ 15ರಿಂದ 30ರ ವರೆಗೆ ನಮ್ಮ ಬಿಎಂಟಿಸಿ ಮೊಬೈಲ್ ಅಪ್ಲಿಕೇಶನ್ ಕಾರ್ಯನಿರ್ವಹಿಸುವುದಿಲ್ಲ. ಈ ವೇಳೆ ಅಪ್ಲಿಕೇಶನ್ನಲ್ಲಿ ಯಾವ ಮಾಹಿತಿಯೂ ಸಿಗುವುದಿಲ್ಲ. ಪ್ರಯಾಣಿಕರು ಸಂಸ್ಥೆ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದೆ.

ಬಿಎಂಟಿಸಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕಾಗಿ ಬಸ್ಗಳ ಅಂದಾಜು ಆಗಮನ ಮತ್ತು ನಿರ್ಗಮನ ಸಮಯವನ್ನು ಪಾಲನೆ ಮಾಡಬೇಕಾಗುತ್ತದೆ. ಬಹುತೇಕ ಪ್ರಯಾಣಿಕರು ಬಸ್ ವೇಳಾಪಟ್ಟಿಯ ಮಾಹಿತಿಗಾಗಿ ನಮ್ಮ ಬಿಎಂಟಿಸಿ ಮೊಬೈಲ್ ಅಪ್ಲಿಕೇಶನ್ ಬಳಕೆ ಮಾಡುತ್ತಿದ್ದರು. ನಗರಕ್ಕೆ ಹೊಸದಾಗಿ ಬರುವ ಜನರಿಗೆ ಈ ಅಪ್ಲಿಕೇಶನ್ ಸಹಾಯಕ ಆಗಿದೆ. ಆದರೆ, ದತ್ತಾಂಶ ನಿರ್ವಹಣೆ ಹಿನ್ನೆಲೆ ಜನವರಿ 15ರಿಂದ 30ರ ವರೆಗೆ 'ನಮ್ಮ ಬಿಎಂಟಿಸಿ' ಮೊಬೈಲ್ ಅಪ್ಲಿಕೇಶನ್ ಕಾರ್ಯ ನಿರ್ವಹಿಸುವುದಿಲ್ಲ ಎಂದು ತಿಳಿಸಿದೆ.
ಈ ದಿನಗಳಲ್ಲಿ ಬಸ್ಗಳ ಮಾಹಿತಿ, ಯೋಜನೆ, ದರಗಳ ಪಟ್ಟಿ ಸೇರಿ ಯಾವುದೇ ಸೇವೆಗಳು ಕಾರ್ಯನಿರ್ಹಿಸುವುದಿಲ್ಲ. ಯಾವುದೇ ಸಮಸ್ಯೆಯಾದರೆ, ಬಿಎಂಟಿಸಿ ವಿಷಾದಿಸುತ್ತದೆ, ದತ್ತಾಂಶಗಳ ನಿರ್ವಹಣೆ ಪೂರ್ಣಗೊಂಡ ನಂತರ ಅಪ್ಲಿಕೇಶನ್ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನಗರದಲ್ಲಿ ಪ್ರತಿನಿತ್ಯ ಒಂದು ಕಡೆಯಿಂದ ಮತ್ತೊಂದಡೆಗೆ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣ ಮಾಡುವವರಿಗೆ ಬಸ್ಗಳ ಸಮಯ, ಮಾರ್ಗಗಳ ವಿವರದ ಬಗ್ಗೆ ಅಂದಾಜು ಇದ್ದೇ ಇರುತ್ತದೆ. ಆದರೆ, ಯಾವುದೇ ಮಾಹಿತಿ ಇಲ್ಲದವರು ಮಾತ್ರ ಈ ಅಪ್ಲಿಕೇಷನ್ ಅನ್ನು ಬಳಕೆ ಮಾಡುತ್ತಿದ್ದಾರೆ. ಪ್ರತಿನಿತ್ಯ ಸಂಚಾರ ಮಾಡುವವರು ಹೊಸ ಮಾರ್ಗಗಳಿಗೆ ಹೋಗಬೇಕಾದರೆ ಮಾತ್ರ ಇದನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ.
ಒಟ್ಟಿನಲ್ಲಿ ಈ ಅಪ್ಲಿಕೇಷನ್ ಒಂದು ರೀತಿಯಲ್ಲಿ ನಗರದ ಹೊಸಬರಿಗೆ ಹಾಗೂ ಹಳಬರಿಗೂ ಕೂಡ ತುಂಬಾ ಉಪಯುಕ್ತ ಎಂದರೆ ತಪ್ಪಾಗಲಾರದು. ಇದೀಗ ಇದು ಮುಂದಿನ 15 ದಿನ ಕಾರ್ಯನಿರ್ವಹಿಸುವುದಿಲ್ಲ. ಈ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಬಿಎಂಟಿಸಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಈ ಮಹತ್ವದ ಮಾಹಿತಿಯನ್ನು ಮುಂಚಿತವಾಗಿ ನೀಡಿದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications