Voter ID : ವೋಟರ್ ಐಡಿ ಕಳೆದು/ಹರಿದಿದ್ದರೆ ಹೊಸದಾಗಿ ಪಡೆಯುವುದು ಹೇಗೆ?, ಇಲ್ಲಿದೆ ಸರಳ ಉಪಾಯ
ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಗುರುತಿನ (Voter ID) ಚೀಟಿ ಕಳೆದು ಹೋಗಿದ್ದರೆ, ಅಥವಾ ತುಂಬಾ ಹಳೆಯದಾಗಿ ಬಳಸಲು ಯೋಗ್ಯವಾಗಿರದಿದ್ದಲ್ಲಿ ಹೊಸ ಚೀಟಿ ಪಡಯಲು ಅವಕಾಶ ನೀಡಲಾಗಿದೆ.
ಬೆಂಗಳೂರು, ಫೆಬ್ರವರಿ 14: ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಗುರುತಿನ (Voter ID) ಚೀಟಿ ಕಳೆದು ಹೋಗಿದ್ದರೆ, ಅಥವಾ ತುಂಬಾ ಹಳೆಯದಾಗಿ ಬಳಸಲು ಯೋಗ್ಯವಾಗಿರದಿದ್ದಲ್ಲಿ ಹೊಸ ಚೀಟಿ ಪಡಯಲು ಅವಕಾಶ ನೀಡಲಾಗಿದೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ 2023ರ ಕಾರ್ಯ ಚಟುವಟಿಕೆಗಳು, ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಸೇರಿದಂತೆ ಅಗತ್ಯ ಎಲ್ಲ ಸಿದ್ಧತೆಗಳು ಒಂದೊಂದಾಗೆ ನಡೆಯುತ್ತಿವೆ. ಅದೇ ರೀತಿ ಬೃಹತ್ ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) 243 ವಾರ್ಡ್ಗಳಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು.
ಇದೀಗ ಅದರ ಬೆನ್ನಲ್ಲೆ ಮತದಾರರ ಗುರುತಿನ ಚೀಟಿ ಕಳೆದುಹೋದ ಅಥವಾ ಬಳಸಲು ಯೋಗ್ಯವಾಗಿರದ ಗುರುತಿನ ಚೀಟಿ ಹೊಂದಿರುವವರು ಹೊಸ ಚೀಟಿ ಪಡೆಯಬಹುದು. ಅದಕ್ಕಾಗಿ ಅರ್ಜಿ ಸಲ್ಲಿಸಬೇಕು. ಆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು, ಯಾವ ನಿಯಮ ಪಾಲಿಸಬೇಕು ಎಂದು ಬಿಬಿಎಂಪಿ ತಿಳಿಸಿರುವ ಮಾಹಿತಿ ಇಲ್ಲಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಬೇಕು. 2023 ಜನವರಿ 01ರಂದು ಅಂತಿಮಗೊಳಿಸಿ ಮತದಾರರ ಪಟ್ಟಿಯ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಭಾರತ ಚುನಾವಣಾ ಆಯೋಗ ತಿಳಿಸಿರುವಂತೆ ಕಳೆದ 2022 ವರ್ಷ ಜೂನ್ 22 ರಲ್ಲಿನ ಅವಕಾಶಗಳಂತೆ ಈಗಾಗಲೇ ಮತದಾರರು ನೊಂದಣಿಯಾಗಿದ್ದಾರೆ. ಮತದಾರರ ಗುರುತಿನ ಚೀಟಿ ಕಳೆದು ಹೋಗಿದ್ದರೆ ಇಲ್ಲವೇ ಹರಿದು ಹೋಗಿ ಬಳಸಲು ಯೋಗ್ಯವಾಗಿರದಿದ್ದರೆ ಅಂತವರು ಹೊಸ ಚೀಟಿ ಪಡೆಯಿರಿ.
ಅದಕ್ಕಾಗಿ ಹೊಸ ಮತದಾರರ ಚೀಟಿಗಾಗಿ ನಮೂನೆ 8 ಅನ್ನು (EPIC Replacement) NVSP ಅಥವಾ Voter Helpline App ಮುಖೇನ ಹೊಸ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬೇಕು. ಈ ಶುಲ್ಕ ರಹಿತ ಅರ್ಜಿ ಸಲ್ಲಿಸಿದ ಬಳಿಕ ಮುಂದಿನ 30 ದಿನದಲ್ಲಿ ತಮ್ಮ ಮನೆ ಬಾಗಿಲಿಗೇ ಭಾರತೀಯ ಅಂಚೆ ಇಲಾಖೆ ಮೂಲಕ ಹೊಸ ಗುರುತಿನ ಚೀಟಿ ಸಿಗುತ್ತದೆ.

ಒಂದು ವೇಳೆ ಮತದಾರರ ಗುರುತಿನ ಚೀಟಿ ತಲುಪದೇ ಇದ್ದಂತಹ ಸಂದರ್ಭದಲ್ಲಿ ಸಂಬಂಧಪಟ್ಟ ಮತದಾರರ ನೊಂದಣಾಧಿಕಾರಿ/ ಕಂದಾಯ ಅಧಿಕಾರಿಗಳ ಕಛೇರಿಯಲ್ಲಿ ಪ್ರಸ್ತುತ ಸ್ಥಿತಿಯ ಮಾಹಿತಿಯನ್ನು ಪಡೆಬಹುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications