MBBS: ಕರ್ನಾಟಕದ ಎಲ್ಲ ಎಂಬಿಬಿಎಸ್ ಸೀಟುಗಳ ಭರ್ತಿ ಪ್ರಕ್ರಿಯೆ ಆರಂಭ
ಬೆಂಗಳೂರು, ನವೆಂಬರ್ 14: ಕರ್ನಾಟಕದಲ್ಲಿ ಈ ವರ್ಷ ಎಲ್ಲ ಕೋಟಾಗಳಡಿ ಎಂಬಿಬಿಎಸ್ ಮತ್ತು ಬಿಡಿಎಸ್ ಸೀಟುಗಳು ಲಭ್ಯ ಇವೆ. ಆದರೆ ಈ ವರ್ಷ ಇವೆರಡು ಕೋರ್ಸ್ಗಳ ಸೀಟುಗಳ ಸಂಖ್ಯೆಯಲ್ಲಿ ಇಳಿಕೆ ಆಗಲಿವೆ ಎಂದು ವೈದ್ಯಕೀಯ ನಿರ್ದೇಶನಕಾಲಯ ತಿಳಿಸಿದೆ.
ಹೀಗೆಂದು ವರದಿ ಶ್ರುತಿ ಸೂಸನ್ ಉಲ್ಲಾಸ್ ವರದಿ ಮಾಡಿದ್ದಾರೆ. ರಾಜ್ಯದಲ್ಲಿ ಲಭ್ಯವಿರುವ ಎಲ್ಲ ಎಂಬಿಬಿಎಸ್ ಸೀಟುಗಳು ಈ ವರ್ಷ ಕಡಿಮೆ ಆಗಲಿವೆ. ಖಾಲಿ ಇರುವ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (ಬಿಡಿಎಸ್) ಸೀಟುಗಳ ಸಂಖ್ಯೆ ಕಳೆದ ವರ್ಷ 691 ಇದ್ದು, ಈ ವರ್ಷ 187ಕ್ಕೆ ಕುಸಿದಿವೆ ಎಂದು ವರದಿ ಮಾಡಿದ್ದಾರೆ ಎಂದು TOI ವರದಿ ಮಾಡಿದೆ.

ಪ್ರಸಕ್ತ ವರ್ಷ ಕರ್ನಾಟಕದಲ್ಲಿ ಒಟ್ಟು 11,595 ಎಂಬಿಬಿಎಸ್ ಮತ್ತು 3,405 ಬಿಡಿಎಸ್ ಸೀಟುಗಳು ಎಲ್ಲಾ ಕೋಟಾಗಳ ಮೂಲಕ ಲಭ್ಯವಿವೆ. ಭಾರತದಲ್ಲಿ ಖಾಲಿ ಇರುವ ಎಲ್ಲ MBBS, BDS ಮತ್ತು BSc ನರ್ಸಿಂಗ್ ಸೀಟುಗಳ ನೇಮಕಾತಿ ನಡೆಸಲು ಸುಪ್ರೀಂ ಕೋರ್ಟ್ 2023ರ ಆರಂಭದಲ್ಲಿ ಅನುಮತಿ ನೀಡಿತ್ತು.
ಖಾಲಿ ಇರುವ ಎಂಬಿಬಿಎಸ್ ಸೀಟು ಹಂಚಿಕೆ
ರಾಜ್ಯದಲ್ಲಿ ಇದೇ ನವೆಂಬರ್ 7 ರಿಂದ ವಿಶೇಷ ಸುತ್ತಿನಡಿ ಹುದ್ದೆಗಳಿಗೆ ಆನ್ಲೈನ್ ಕೌನ್ಸೆಲಿಂಗ್ ನಡೆಸಲಾಯಿತು ಮತ್ತು ಖಾಲಿ ಇರುವ ಎಲ್ಲ 152 ಎಂಬಿಬಿಎಸ್ ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಅಖಿಲ ಭಾರತ ವಿಶೇಷ ಸುತ್ತಿನಲ್ಲಿ ಹಂಚಿಕೆಯಾಗಿದ್ದ ಒಂದು ಸ್ಥಾನವನ್ನು ಮರಳಿ ಪಡೆಯಲಾಯಿತು. ಮತ್ತೆ ಆ ಸೀಟನ್ನು ಸೋಮವಾರ ಹಂಚಿಕೆ ಮಾಡಲಾಗಿದೆ. ಒಟ್ಟು 40 ವಿದ್ಯಾರ್ಥಿಗಳು ಸ್ಪರ್ಧಿಸಿದ್ದರು. ಕಳೆದ ವರ್ಷ ಐದು ಎಂಬಿಬಿಎಸ್ ಸೀಟುಗಳು ಖಾಲಿ ಉಳಿದಿದ್ದವರು ಎಂದು ವರದಿ ಆಗಿದೆ.
ಮೂಲಗಳ ಪ್ರಕಾರ, 2022ರಲ್ಲಿ 2,810 ಸೀಟುಗಳ ಪೈಕಿ 691 ಬಿಡಿಎಸ್ ಸೀಟುಗಳನ್ನು ಮ್ಯಾನೇಜ್ಮೆಂಟ್ಗೆ ಹಿಂತರುಗಿವೆ. ಈ ವರ್ಷ, ಖಾಲಿ ಇರುವ ಸೀಟುಗಳ ಸಂಖ್ಯೆ 187 ಕ್ಕೆ ಕುಸಿದಿದೆ, ವಿಶೇಷ ಸುತ್ತಿನಲ್ಲಿ 33 ಸೀಟುಗಳನ್ನು ಕಡಿಮೆ ಮಾಡಲಾಗಿದೆ. ಇನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮ್ಯಾನೇಜ್ಮೆಂಟ್ ಕೋಟಾದಡಿ ಸೇರಿ ಎಲ್ಲ ಕೋಟಾಗಳಡಿ ಎಂಬಿಬಿಎಸ್ ಮತ್ತು ಬಿಡಿಎಸ್ ಸೀಟುಗಳ ಹಂಚಿಕೆ ಮಾಡಲಾಗಿದೆ.

ಈ ವರ್ಷ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC)ವು ಎಲ್ಲ ಸೀಟುಗಳಿಗೆ ಕೆಇಎ ಮೂಲಕ ಪ್ರವೇಶಾತಿ ಪಡೆಯುವ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತಂದಿದೆ. ಮುಂದಿನ ವರ್ಷ, ವಿದ್ಯಾರ್ಥಿಗಳಿಗೆ ಅವರ ರಾಜ್ಯದ ಶ್ರೇಯಾಂಕಗಳು ಮತ್ತು ನಿರ್ದಿಷ್ಟ ಆಯ್ಕೆ ಸುತ್ತಿನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಮಾಹಿತಿ ಒದಗಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ತಿಳಿಸಿದರು.
ಹೆಚ್ಚು ಸುತ್ತಿನ ಕೌನ್ಸೆಲಿಂಗ್ ನಿಂದ ಸೀಟುಗಳ ಕುಸಿತ
ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಸುಜಾತಾ ರಾಥೋಡ್ ಅವರು ರಾಜ್ಯದಲ್ಲಿ ಖಾಲಿ ಉಳಿದ ಬಿಡಿಎಸ್ ಸೀಟುಗಳ ಸಂಖ್ಯೆಯಲ್ಲಿನ ಕುಸಿತಕ್ಕೆ ಹೆಚ್ಚುವರಿ ಸುತ್ತಿನ ಕೌನ್ಸೆಲಿಂಗ್ ಕಾರಣವಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ಹೆಚ್ಚಿನ ಸುತ್ತುಗಳಲ್ಲಿ ಕೌನ್ಸೆಲಿಂಗ್ ನಡೆಯುತ್ತಿವೆ ಎಂದು ವಿವರಿಸಿದರು.
ರಾಜ್ಯದಲ್ಲಿ ಯುಜಿ ಆಯುಷ್ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ UGNEET-2023 ರಲ್ಲಿ ಆಯ್ಕೆ ಮಾಡಲು ಶೇಕಡಾ 5 ಅಂಕ ಕಡಿತಗೊಳಿಸುವುದಾಗಿ ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗವು ಘೋಷಿಸಿದೆ. ಕೋರ್ಸ್ಗಳ ಪ್ರವೇಶಾತಿ ಬಯಸುವವರು ನೋಂದಾಯಿಸಿಕೊಳ್ಳಬೇಕು ಎಂದು ಆಯೋಗ ತಿಳಿಸಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications