ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಭಾರೀ ಇಳಿಕೆ, ರಾಜ್ಯಕ್ಕೂ ನಿರಾಳತೆ
ಬೆಂಗಳೂರು, ಜೂನ್ 11: ಕೊರೊನಾವೈರಸ್ ಎರಡನೇ ಅಲೆ ಏರುತ್ತಿದ್ದಂತೆಯೇ ರಾಜ್ಯದ ಪಾಸಿಟಿವಿಟಿ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಕಳೆದ ತಿಂಗಳು ಇದು ಶೇಕಡಾ 40ಕ್ಕೆ ಏರಿಕೆಯಾಗುವ ಮೂಲಕ ಸರ್ಕಾರಕ್ಕೆ ಸವಾಲಿನ ಮೇಲೆ ಸವಾಲನ್ನು ತಂದೊಡ್ಡಿತ್ತು. ಆದರೆ ಈಗ ಈ ವಿಚಾರದಲ್ಲಿ ಸರ್ಕಾರ ಹಾಗೂ ಸಾರ್ವಜನಿಕರು ನಿಟ್ಟುಸಿರುವ ಬಿಡುವಂತಾ ಸುದ್ದಿಯನ್ನು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೀಡಿದ್ದಾರೆ. ರಾಜ್ಯದ ಒಟ್ಟು ಪಾಸಿಟಿವಿಟಿ ದರ ಈಗ 5 ಶೇಕಡಾಗಿಂತ ಕೆಳಕ್ಕಿಳಿದಿದೆ.
ರಾಜ್ಯದಲ್ಲಿನ ಕೊರೊನಾವೈರಸ್ ವಿಚಾರವಾಗಿ ಕೆಲ ಅಂಕಿಅಂಶಗಳನ್ನು ಟ್ವೀಟ್ ಮೂಲಕ ಹಂಚಿಕೊಳ್ಳುವ ಜೊತೆಗೆ ಪಾಸಿಟಿವಿಟಿ ದರದಲ್ಲಿ ಕಂಡು ಬಂದಿರುವ ಈ ಸಮಾಧಾನಕರ ಸಂಗತಿಯನ್ನು ಸಚಿವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಕೊರೊನಾವೈರಸ್ಗೆ ತುತ್ತಾಗಿ ಚೇತರಿಸಿಕೊಂಡವರ ಸಂಖ್ಯೆ 25 ಲಕ್ಷದ ಗಡಿ ದಾಟಿದೆ ಎಂದು ತಿಳಿಸಿದ್ದಾರೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ 14,975 ಜನರು ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 1,69,695 ಜನರ ಕೊರೊನಾ ಪರೀಕ್ಷೆಯನ್ನು ನಡೆಸಲಾಗಿದ್ದು ಇದರಲ್ಲಿ 8,249 ಜನರು ವೈರಸ್ಗೆ ತುತ್ತಾಗಿದ್ದಾರೆ. ಈ ಮೂಲಕ ಪಾಸಿಟಿವಿಟಿ ದರ 5ಕ್ಕಿಂತ ಕೆಳಗಿಳಿದಿದ್ದು 4.86 ಶೇಕಡಾ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ 62,515 ಜನರಿಗೆ ಕೊರೊನಾ ಪರೀಕ್ಷೆಯನ್ನು ನಡೆಸಲಾಗಿದ್ದು ಟೆಸ್ಟ್ ಪಾಸಿಟಿವಿಟಿ ರೇಟ್ 1.84%ಕ್ಕೆ ಇಳಿಕೆಯಾಗಿದೆ.
ಈ ಇಳಿಕೆ ರಾಜ್ಯದ ಜನರ ಪಾಲಿಗೆ ನಿಜಕ್ಕೂ ನಿರಾಳತೆಯನ್ನು ನೀಡುವಂತಿದೆ. ಅದರಲ್ಲೂ ಬೆಂಗಳೂರಿನ ವಿಚಾರದಲ್ಲಿ ಈ ಪ್ರಮಾಣದ ಇಳಿಕೆ ಸರ್ಕಾರಕ್ಕೂ ದೊಡ್ಡ ಒತ್ತಡವನ್ನು ಕಡಿಮೆ ಮಾಡಲಿದೆ. ಹಾಗಿದ್ದರೂ ರಾಜ್ಯ ಸರ್ಕಾರ ತನ್ನ ಎಚ್ಚರಿಕೆಯ ಹೆಜ್ಜೆಯಿಂದ ಹಿಂದಕ್ಕೆ ಸರಿದಿಲ್ಲ. ಕೆಲ ಸಡಿಲಿಕೆಗಳೊಂದಿಗೆ ಜೂನ್ 21ರ ವರೆಗೂ ಲಾಕ್ಡೌನ್ ವಿಸ್ತರಿಸಿದೆ. ಅದರಲ್ಲೂ ಪಾಸಿಟಿವಿಟಿ ದರ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಕಠಿಣ ಲಾಕ್ಡೌನ್ ಮುಂದುವರಿಯಲಿದೆ. ಜಿಲ್ಲೆಗಳ ವಿಚಾರವಾಗಿ 15 ಶೇಕಡಾಗಿಂತ ಕಡಿಮೆ ಇರುವ ಜಿಲ್ಲೆಗಳಿಗೆ ಮಾತ್ರವೇ ಲಾಕ್ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications