ಚಿತ್ರಗಳು : ಮಳೆ ನೀರಿನಲ್ಲಿ ಮುಳುಗಿತು ಬೆಂಗಳೂರಿಗರ ಬದುಕು
ಬೆಂಗಳೂರು, ಅಕ್ಟೋಬರ್ 05 : ಗುರುವಾರ ಮಧ್ಯಾಹ್ನ ಬೆಂಗಳೂರು ನಗರದಲ್ಲಿ ಸುರಿದ ಮಳೆ ಭಾರೀ ಅನಾಹುತ ಉಂಟು ಮಾಡಿದೆ. ವಿವಿಧ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಕಿ.ಮೀ.ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ.
In Pics:ಕುಂಭದ್ರೋಣ ಮಳೆಗೆ ಮುಳುಗುತಿಹುದು ಬೆಂಗಳೂರು
ಮಲ್ಲೇಶ್ವರಂ, ನಾಯಂಡಹಳ್ಳಿ, ರಾಜಾಜಿನಗರ, ಜಯನಗರ, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಬನ್ನೇರುಘಟ್ಟ ರಸ್ತೆ ಮುಂತಾದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಸುಮಾರು ಎರಡು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ.
ನಾಯಂಡಹಳ್ಳಿ, ಬಿನ್ನಿಮಿಲ್ ರಸ್ತೆಯಲ್ಲಿ ಎರಡು ಮನೆಗಳು ಕುಸಿದುಬಿದ್ದಿವೆ. ಶಿವಾನಂದ ಸರ್ಕಲ್, ಶಾಂತಿನಗರ, ಬಿಟಿಎಂ ರಿಂಗ್ ರಿಂಗ್ ರಸ್ತೆ, ಕೊನಪ್ಪನ ಅಗ್ರಹಾರ, ಶೇಷಾದ್ರಿಪುರಂ, ಮಹಾರಾಜ ಜಂಕ್ಷನ್ ಮುಂತಾದ ಪ್ರದೇಶಗಳಲ್ಲಿ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ.
ನಾಯಂಡಹಳ್ಳಿಯಲ್ಲಿ ರಾಜಾಕಾಲುವೆ ಉಕ್ಕಿ ಹರಿಯುತ್ತಿದ್ದು, ಕೊಳಚೆ ನೀರು ರಸ್ತೆಯ ತುಂಬಾ ತುಂಬಿಕೊಂಡಿದೆ. ವೈಟ್ಫೀಲ್ಡ್ ಬಳಿ ಸಿಲಿಂಡರ್ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ಮರ ಬಿದ್ದಿದೆ. ವಿಲ್ಸನ್ ಗಾರ್ಡನ್ನಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದು, ಆಂಬ್ಯುಲೆನ್ಸ್ ನೀರಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಕಳೆದ 9 ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 65 ಮಿ.ಮೀ.ಮಳೆಯಾಗಿದೆ ಎಂದು ಸ್ಕೈ ಮೆಟ್ ವೆದರ್ ಮಾಹಿತಿ ನೀಡಿದೆ.
ಬಿಬಿಎಂಪಿ ಸಹಾಯವಣಿ ಸಂಖ್ಯೆ : 080-22660000

ವಿಲ್ಸನ್ ಗಾರ್ಡನ್
ಗುರುವಾರ ಮಧ್ಯಾಹ್ನ ಸುರಿದ ಮಳೆಗೆ ವಿಲ್ಸನ್ ಗಾರ್ಡನ್ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ರಸ್ತೆಯಲ್ಲಿನ ವಾಹನಗಳು ನೀರಿನಲ್ಲಿ ಸಿಲುಕಿದೆ. ಆಂಬ್ಸುಲೆನ್ಸ್ ನೀರಿನಲ್ಲಿ ಮುಳುಗಡೆಗೊಂಡಿದೆ.

ನಾಯಂಡಹಳ್ಳಿ
ನಾಯಂಡಹಳ್ಳಿ ಜಂಕ್ಷನ್ನಲ್ಲಿ ರಾಜಾಕಾಲುವೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ.

ಶಾಂತಿನಗರದಲ್ಲಿ ರಸ್ತೆ ಜಲಾವೃತ
ಶಾಂತಿನಗರದಲ್ಲಿ ಮಳೆ ನೀರು ರಸ್ತೆಯ ಎರಡೂ ಕಡೆ ತುಂಬಿಕೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

ಬನ್ನೇರುಘಟ್ಟ ರಸ್ತೆ
ಬನ್ನೇರುಘಟ್ಟ ಮುಖ್ಯ ರಸ್ತೆ ಮತ್ತು ಬಿಟಿಎಂ ಔಟರ್ ರಿಗ್ ರಸ್ತೆ ಮಳೆ ನೀರಿನಿಂದ ತುಂಬಿಕೊಂಡಿದ್ದು, ವಾಹನ ಸಂಚಾರ ಮಂದಗತಿಯಲ್ಲಿ ಸಾಗಿದೆ.

ಕೋನಪ್ಪನ ಅಗ್ರಹಾರ
ಕೋನಪ್ಪನ ಅಗ್ರಹಾರ ಬಳಿ ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಬಿಎಂಟಿಸಿ ಬಸ್, ಕಾರು, ಸೇರಿದಂತೆ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಶೇಷಾದ್ರಿಪುರಂ ಕಡೆ ಹೋಗಬೇಡಿ
ಶೇಷಾದ್ರಿಪುರಂ ಬ್ರಿಡ್ಜ್ ಬಳಿ ರಸ್ತೆಯ ಮೇಲೆ ಮಳೆ ನೀರು ನಿಂತಿದ್ದು ಆ ಕಡೆ ಹೋಗಬೇಡಿ ಎಂದು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಮಹಾರಾಜ ಜಂಕ್ಷನ್
ಮಹಾರಾಜ ಜಂಕ್ಷನ್, ವಿಪ್ರೋ ಜಂಕ್ಷನ್ ಗಳ ಬಳಿ ರಸ್ತೆಯ ಎರಡೂ ಕಡೆ ನೀರು ತುಂಬಿಕೊಂಡಿದ್ದು ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ನೆಹರು ಸರ್ಕಲ್
ಗುರುವಾರ ಮಧ್ಯಾಹ್ನ ಸುರಿದ ಮಳೆಗೆ ನೆಹರು ಸರ್ಕಲ್ ಬಳಿಯ ರಸ್ತೆ ಜಲಾವೃತವಾಗಿದೆ.

ವೀರಸಂದ್ರ ಜಂಕ್ಷನ್
ವೀರಸಂದ್ರ ಜಂಕ್ಷನ್ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಳೆ ನೀರು ರಸ್ತೆ ಮೇಲೆ ಹರಿಯುತ್ತಿದೆ.
|
ಪಿಇಎಸ್ ಕಾಲೇಜು ಬಳಿ
ಪಿಇಎಸ್ ಕಾಲೇಜು ಬಳಿಯ ನೈಸ್ ರಸ್ತೆಯಲ್ಲಿ ನೀರು ತುಂಬಿಕೊಂಡಿರುವುದು

ಕ್ಯಾಂಪಸ್ ತುಂಬಾ ನೀರು
ಇನ್ಫೋಸಿಸ್ ಕ್ಯಾಂಪಸ್ ತುಂಬಾ ನೀರು ತುಂಬಿಕೊಂಡಿದೆ. ಕ್ಯಾಂಪಸ್ನಲ್ಲಿ ಸಂಚರಿಸಲಾಗದೆ ಟೆಕ್ಕಿಗಳು ಪರದಾಡುತ್ತಿದ್ದಾರೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications