ಚಿತ್ರಗಳಲ್ಲಿ: ಗೋಡೆ ಕುಸಿತಕ್ಕೆ 3 ಬಲಿ, ಯಾರು ಹೊಣೆ?
ಬೆಂಗಳೂರು, ಸೆ.21: ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕಾಂಪೌಂಡ್ ಕುಸಿದು ಮೂವರು ದುರಂತ ಸಾವನ್ನಪ್ಪಿದ ಘಟನೆ ಬಗ್ಗೆ ಶನಿವಾರ ಒನ್ ಇಂಡಿಯಾದಲ್ಲಿ ಸುದ್ದಿ ಓದಿರುತ್ತೀರಿ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದ ಈ ದುರಂತಕ್ಕೆ ಕಟ್ಟಡದ ಮಾಲೀಕನೇ ನೇರ ಹೊಣೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ನಡುವೆ ಮೃತಪಟ್ಟವರ ಕುಟುಂಬಸ್ಥರ ದುಃಖದ ಕಟ್ಟೆಯೊಡೆದು ಕೋಡಿ ಹರಿದಿದೆ.
ಹೊಸೂರು ರಸ್ತೆಗೆ ಹೊಂದಿಕೊಂಡಂತೆ ಇರುವ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ದುರ್ಘಟನೆ ಶನಿವಾರ ನಡೆಯಿತು. ಬೊಮ್ಮಸಂದ್ರದ ಡೆಕ್ಕನ್ ಎಂಟರ್ ಪ್ರೈಸಸ್ ಗೆ ಸೇರಿದ ಕಟ್ಟಡದ ನಿರ್ಮಾಣ ಹಂತದ ಗೋಡೆ ಏಕಾಏಕಿ ಕುಸಿದ ಪರಿಣಾಮ ಸಮೀರ್(32) ಎಂಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡಿದ್ದ ಪಾಂಚು(30) ಮತ್ತು ಶಂಕರ್ (30) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.[ಸಾವಿನ ಕೂಪದಲ್ಲಿ ಇಸಿಟಿ]
ಸಾವನ್ನಪ್ಪಿದ ದುರ್ದೈವಿಗಳ ಚಿತ್ರಗಳು, ಕಟ್ಟಡದ ಅವಶೇಷಗಳು, ಸಂತ್ರಸ್ಥ ಕುಟುಂಬದವರ ರೋದನದ ಚಿತ್ರಗಳು ಇಲ್ಲಿವೆ. [ಚಿತ್ರಗಳು: ಮಾಲ ಎಂ, ಎಲೆಕ್ಟ್ರಾನಿಕ್ ಸಿಟಿ]

ಘಟನೆ ನಡೆದಿದ್ದು ಹೇಗೆ? ಎಲ್ಲಿ?
ಶನಿವಾರದಂದು ಹೊಸೂರು ರಸ್ತೆಗೆ ಹೊಂದಿಕೊಂಡಂತೆ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಡೆಕ್ಕನ್ ಇಂಡಸ್ಟ್ರೀಸ್ ಗೆ ಸೇರಿದ ಕಟ್ಟಡದ ಗೋಡೆ ನಿರ್ಮಾಣ ಕಾರ್ಯದಲ್ಲಿ 8 ಮಂದಿ ಕಾರ್ಮಿಕರು ತೊಡಗಿದ್ದರು.
ಸುಮಾರು 30 ಅಡಿ ಎತ್ತರದ ಈ ಗೋಡೆ ಕುಸಿದು ಸಮೀರ್ ಎಂಬುವರನ್ನು ಬಲಿ ತೆಗೆದುಕೊಂಡಿದೆ. ಪಾಂಚು ಹಾಗೂ ಶಂಕರ್ ಎಂಬುವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನಿತರರಿಗೆ ಗಾಯಗಳಾಗಿವೆ.
ನೆರವಿಗೆ ಧಾವಿಸಿದ ಬಂದ ಅಗ್ನಿಶಾಮಕ ದಳ
ಸುದ್ದಿ ತಿಳಿದ ತಕ್ಷನವೇ ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡರು.ಕುಸಿದ ಗೋಡೆಯ ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲು ಯತ್ನಿಸಿದರು. ಅದರೆ, ಮೂವರು ಸಾವನ್ನಪ್ಪಿದ್ದರೆ, ಉಳಿದವರಿಗೆ ಗಾಯಗಳಾಯಿತು.

ಮೃತರ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿದೆ
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಮೃತರ ಕುಟುಂಬಸ್ಥರು ತಮ್ಮವರ ದುಃಸ್ಥಿತಿ ಕಂಡು ಹೃದಯ ಬಿರಿಯುವಂತೆ ರೋದಿಸಿದರು. ಕಟ್ಟಡದ ಮಾಲೀಕರಿಗೆ ಹಿಡಿಶಾಪ ಹಾಕಿದರು.

ಅವಘಡಕ್ಕೆ ಕಳಪೆ ಕಾಮಗಾರಿಯೇ ಕಾರಣ
ಕುಸಿದ ಗೋಡೆಯನ್ನು ನೋಡಿದ ಮೇಲೆ ಅಗ್ನಿಶಾಮಕದಳ ಸಿಬ್ಬಂದಿ ಮಾತನಾಡುತ್ತಾ, ಅವಘಡಕ್ಕೆ ಕಳಪೆ ಕಾಮಗಾರಿಯೇ ಕಾರಣ, ನಿಗದಿತ ಪ್ರಮಾಣದಲ್ಲಿ ಸಿಮೆಂಟ್ ಮತ್ತು ಕಬ್ಬಿಣ ಬಳಸದಂತೆ ಕಾಣುವುದಿಲ್ಲ. ಕಾಮಗಾರಿಗೆ ಬಳಸಿದ ಸಾಮಾಗ್ರಿಗಳು ಕಳಪೆ ಗುಣಮಟ್ಟದ್ದಾಗಿದ್ದರಿಂದ ಗೋಡೆ ಕುಸಿದಿದೆ ಎಂದು ಹೇಳಿದರು.

ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದಿಲ್ಲವೇ?
ಅಲ್ಲದೇ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದವರು ಎನ್ಒಸಿ ಪಡೆದಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದ್ದು, ಪರಿಶೀಲನೆ ನಡೆಯುತ್ತಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಗೋಡಿ ಪೊಲೀಸರು ಹೇಳಿದ್ದಾರೆ.

ಆರೋಪ ನಿರಾಕರಿಸಿದ ಡೆಕ್ಕನ್ ಸಂಸ್ಥೆ ಪ್ರತಿನಿಧಿ
ಆದರೆ ಈ ಬಗ್ಗೆ ನಮ್ಮ ಪ್ರತಿನಿಧಿ ಜೊತೆ ಮಾತನಾಡಿದ ಡೆಕ್ಕನ್ ಇಂಡಸ್ಟ್ರೀಸ್ ವಕ್ತಾರರು, ಇಲ್ಲಿ ಯಾವುದೇ ಕಳಪೆ ಕಾಮಗಾರಿಯಾಗಿಲ್ಲ ಮತ್ತು ದಾಖಲೆಗಳೆಲ್ಲಾ ಸರಿಯಾಗಿವೆ. ಆಕಸ್ಮಿಕವಾಗಿ ಅವಘಡ ಸಂಭವಿಸಿದೆ ಎಂದರು.

ಪೊಲೀಸರು ಏನು ಹೇಳುತ್ತಾರೆ?
ಕಟ್ಟಡ ನಿರ್ಮಾಣ ಸ್ಥಳದಲ್ಲೂ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿಲ್ಲ. ಎನ್ ಒಸಿ ಪಡೆಯದಿರುವುದು, ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಯುತ್ತಿದೆ. ಕಟ್ಟಡದ ಗುತ್ತಿಗೆದಾರ ಹಾಗೂ ನಿವೇಶನದ ಮಾಲೀಕ ಜಮೀರ್ ಅವರ ಮೇಲೆ ಕೇಸು ದಾಖಲಿಸಿಕೊಳ್ಳಲಾಗಿದೆ.
ಹೆಬ್ಬಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications