ಚಿತ್ರ ಸುದ್ದಿ : ಓ ಮನಸೇ, ಆರುಷಿ ಹತ್ಯೆ ಬಗ್ಗೆ ಬೆಳಗರೆ ಕೃತಿ
ಬೆಂಗಳೂರು, ಡಿ.16: ಹಿರಿಯ ಪತ್ರಕರ್ತ ಉದಯ ಮರಕಿಣಿ ಅವರ ಸಂಪಾದಕತ್ವದಲ್ಲಿ 'ಓ ಮನಸೇ' ಪಾಕ್ಷಿಕ ಮತ್ತೆ ಪ್ರಕಟಣೆಯಾಗುತ್ತಿದೆ. ಬೆಂಗಳೂರಿನ ಬೆಳೆಗೆರೆ ಬುಕ್ಸ್ ಅಂಡ್ ಕಾಫಿ ಪುಸ್ತಕ ಮಳಿಗೆಯಲ್ಲಿ ಡಿ.14 ರಂದು ಲೋಕಾರ್ಪಣೆಗೊಂಡಿದೆ. ಇದರ ಜತೆಗೆ ರವಿಬೆಳಗೆರೆ ಅವರು ರಚಿಸಿರುವ ದೇಶದಾದ್ಯಂತ ಚರ್ಚೆಗೊಳಗಾದ ಆರುಷಿ ಹೇಮರಾಜ್ ಹತ್ಯೆ ರಹಸ್ಯಗಳ ಬಗ್ಗೆ ಬೆಳಕು ಚೆಲ್ಲುವ ಕೃತಿಯನ್ನು ಬಿಡುಗಡೆ ಮಾಡಲಾಗಿದೆ.
ಕಾರ್ಯಕ್ರಮದ ಚಿತ್ರಗಳು, ಓ ಮನಸೇ ಮತ್ತೆ ಆರಂಭಗೊಂಡಿದ್ದರ ಖುಷಿಯಲ್ಲಿ ಹಾಯ್ ಬೆಂಗಳೂರು ಸಂಪಾದಕ, ಜನಶ್ರೀ ಸಿಇಒ ರವಿ ಬೆಳೆಗೆರೆ ಅವರು ಹೇಳಿದ್ದೇನು? ಮುಂದೆ ಓದಿ...
ಓ ಮನಸೇ ನೀಡಿದ ತೃಪ್ತಿ ಯಾವುದು ನೀಡಿಲ್ಲ: ರವಿ ಬೆಳಗೆರೆ
ಮತ್ತೆ ಹೊಸ ಹುರುಪಿನಿಂದ ಮನಸು ಮನಸುಗಳ ಪಿಸುಮಾತಿಗೊಂದು ಪಾಕ್ಷಿಕ "ಓ ಮನಸೇ..." ಮೂರು ವರ್ಷಗಳ ನಂತರ ಮನಸಿಗೆ ಮುದ ನೀಡಲು ಬಂದಿದೆ. ಓ ಮನಸೇ ಹಾಗೇ ಎಷ್ಟೋ ನಿಯತಕಾಲಿಕೆಗಳು ಮಾರುಕಟ್ಟೆಗೆ ಬಂದು ಹೋಗಿವೆ. ಆದರೆ "ಓ ಮನಸೇ...." ಪಾಕ್ಷಿಕ ಮನಸ್ಸಿಗೆ ನೀಡಿದ ತೃಪ್ತಿ, ಸಮಾಧಾನ ಯಾವುದು ಮಾಡಲಿಲ್ಲ ಎಂದು ಖ್ಯಾತ ಹಿರಿಯ ಪತ್ರಕರ್ತರಾದ ರವಿ ಬೆಳಗೆರೆ ಹೇಳಿದರು.
ಅವರು ತಮ್ಮ ಬೆಳಗೆರೆ ಬುಕ್ಸ್ ಆಂಡ್ ಕಾಫಿ ಪುಸ್ತಕಾಲಯದಲ್ಲಿ ನಡೆದ "ಓ ಮನಸೇ...." ಪಾಕ್ಷಿಕ ಮತ್ತು "ಏನಾಯ್ತು ಮಗಳೇ" ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ಪುಸ್ತಕೋದ್ಯಮ ಬೆಳೆಯಬೇಕು. ಅದಕ್ಕೆ ತಕ್ಕಂತೆ ಓದುಗ ದೊರೆಗಳಿಗೆ ತೃಪ್ತಿ ನೀಡುವಂಥ ಕಾದಂಬರಿಗಳನ್ನು ಬರೆದೆ. ಬರೆಯುತ್ತಲೇ ಇದ್ದೇನೆ. ಈಗ ಆರುಷಿ ಕೊಲೆ ಪ್ರಕರಣದ ಪುಸ್ತಕವನ್ನ ಆರೇ ದಿನಗಳಲ್ಲಿ ಬರೆದಿದ್ದೇನೆ ಎಂದರು. ಸಮಾರಂಭದ ಚಿತ್ರಗಳನ್ನು ನೋಡಿ...

ಬೆಳಗರೆ ಹೇಳಿದ್ದೇನು?
ಈ ಕೊಲೆ ಪ್ರಕರಣದ ಮಾಹಿತಿ ಮತ್ತು ಕೋರ್ಟ್ ನೀಡಿದ ತೀರ್ಪಿನ ಪ್ರತಿಯನ್ನ ಸುಪ್ರೀಂ ಕೋರ್ಟ್ ವಕೀಲರಾದ ಚಂದ್ರಕಾಂತ ಅಂಗಡಿಯವರು ನನಗೆ ನೀಡಿದರು. ಅಲ್ಲದೇ ಓ ಮನಸೇ ನಿಯತಕಾಲಿಕೆಯನ್ನು ನನ್ನ ಆತ್ಮೀಯ ಗೆಳೆಯನಾದ ಉದಯ ಮರಕಿಣಿ ಸಂಪಾದಕತ್ವದಲ್ಲಿ ಮರಳಿ ಮೂರು ವರ್ಷಗಳ ನಂತರ ಬಿಡುಗಡೆ ಮಾಡಲಾಗುತ್ತಿದೆ. ಅದರ ಗೌರವ ಸಂಪಾದಕನಾಗಿದ್ದಾನೆ. ಮನಸೇಯಲ್ಲಿರುವ ನನ್ನ ಕಾಲಂಗಳನ್ನು ಬರೆಯುತ್ತೇನೆ. ಅಲ್ಲದೇ ಹೊಸ ಕಾದಂಬರಿ ಲವ್ ಆಟ್ ಫೇಸ್ಬುಕ್ ಬರುತ್ತದೆ ಎಂದರು.

ಗಣ್ಯರ ಉಪಸ್ಥಿತಿ
ಹಿರಿಯ ವಕೀಲರಾದ ರೇವಣಸಿದ್ದಯ್ಯನವರು 'ಏನಾಯತ್ತು ಮಗಳೇ ಪುಸ್ತಕವನ್ನು ಬಿಡುಗಡೆ ಮಾಡಿದರೇ, ಓ ಮನಸೇ ಪಾಕ್ಷಿಕವನ್ನು ಪತ್ರಕರ್ತ ದೀಪಕ್ ತಿಮ್ಮಯ್ಯ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ವಿಜಯವಾಣಿ ದಿನಪತ್ರಿಕೆ ಸಂಪಾದಕ ತಿಮ್ಮಪ್ಪ ಭಟ್ಟ, ಓ ಮನಸೇ ಸಂಪಾದಕ ಉದಯ ಮರಕಿಣಿ, ಲೇಖಕ ರಾಜಾ ಚಂಡೂರ್, ಸಂಸ್ಥೆಯ ಸಿ.ಇ.ಒ. ಉಮೇಶ್ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

ಕೃತಿಗಳ ಬಿಡುಗಡೆ
ಓ ಮನಸೇ ಪಾಕ್ಷಿಕ ಹಾಗೂ ಆರುಷಿ ಹತ್ಯೆ ಬಗ್ಗೆ ಬೆಳಗರೆ ಕೃತಿಯನ್ನು ಬೆಳೆಗೆರೆ ಬುಕ್ಸ್ ಅಂಡ್ ಕಾಫಿ ಪುಸ್ತಕ ಮಳಿಗೆಯಲ್ಲಿ ಲೋಕಾರ್ಪಣೆ ಮಾಡಲಾಗಿದೆ.

ಜೋಗಿ ಜತೆ ಬೆಳಗೆರೆ
ಪತ್ರಕರ್ತ ಜೋಗಿ ಅಲಿಯಾಸ್ ಗಿರೀಶ್ ರಾವ್ ಹಾಗೂ ಅವರ ಪುತ್ರಿ ಜತೆ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ

ಪುಸ್ತಕ ಮಳಿಗೆ
ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳೆಗೆರೆ ಅವರ ಬೆಳೆಗೆರೆ ಬುಕ್ಸ್ ಅಂಡ್ ಕಾಫಿ ಪುಸ್ತಕ ಮಳಿಗೆ
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications