ನೋಡ ಬನ್ನಿ: ಬೆಂಗಳೂರು ಕರಗ ಎಷ್ಟೊಂದು ಸುಂದರ!
ಬೆಂಗಳೂರು, ಏಪ್ರಿಲ್ 22: ನೂರಾರು ವರ್ಷಗಳ ಇತಿಹಾಸವಿರುವ ಬೆಂಗಳೂರು ಕರಗ ಶುಕ್ರವಾರ ಮಧ್ಯರಾತ್ರಿ ಮತ್ತೊಮ್ಮೆ ನಗರದ ಹಿರಿಮೆಯನ್ನು ಹೆಚ್ಚಿಸಲಿದೆ. ಧಾರ್ಮಿಕ, ಜಾನಪದ ಸೊಗಡು, ಶ್ರದ್ದೆ, ನಂಬಿಕೆ, ಭಕ್ತಿಯ ಪ್ರತೀಕವಾದ ತಿಗಳರಪೇಟೆ ಧರ್ಮರಾಯಸ್ವಾಮಿ ದೇವಾಲಯದ ವಾರ್ಷಿಕ ಕರಗೋತ್ಸವ ಏಪ್ರಿಲ್22ರ ಮಧ್ಯರಾತ್ರಿ ಧರ್ಮರಾಯಸ್ವಾಮಿ ದೇವಾಲಯದಿಂದ ಆರಂಭವಾಗಲಿದೆ.
ಚೈತ್ರ ಶುಕ್ಲ ಸಪ್ತಮಿಯಿಂದ ಬಹುಳ ಬಿದಿಗೆಯವರೆಗೆ ಕರಗ ಮಹೋತ್ಸವ ನಡೆಯಲಿದೆ. ಕರಗ ಉತ್ಸವದ ಕೇಂದ್ರಬಿಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ ಏ.22ರಂದು ನಡೆಯಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಬಾರಿಯ ಕರಗ ಮಹೋತ್ಸವಕ್ಕಾಗಿ ಅನುದಾನವನ್ನು ನೀಡುತ್ತಾ ಬಂದಿದೆ. ಮುಜರಾಯಿ ಇಲಾಖೆ ಹಾಗೂ ಧರ್ಮರಾಯಸ್ವಾಮಿ ದೇವಾಲಯದ ಸಮಿತಿ ವತಿಯಿಂದ ಕರಗ ಮಹೋತ್ಸವ ಆಯೋಜನೆ ಮಾಡಲಾಗಿದೆ.[ಹೊಸ ಇತಿಹಾಸ ಬರೆದ ಚಿಕ್ಕದೇವಮ್ಮನ ಜಾತ್ರೆ]
ದ್ರೌಪದಿ ದೇವಿಯ ಮಾನಸ ಪುತ್ರರಾದ ತಿಗಳ ಜನಾಂಗದ ವಂಶಸ್ಥರು ಕರಗ ಹೊರುವುದು ಪದ್ಧತಿ. ಈ ಬಾರಿ ಏಪ್ರಿಲ್ 14 ರಂದು ಧ್ವಜಾರೋಹಣದ ಮೂಲಕ ಕರಗ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಏಪ್ರಿಲ್ 22ರ ಮಧ್ಯರಾತ್ರಿ ಮಹೋತ್ಸವ ನಡೆಯಲಿದೆ.[ಸುತ್ತೂರು ಜಾತ್ರೆಗೆ ಕಳೆಗಟ್ಟಿದ ಜನಜಾತ್ರೆ]
ನಗರದ ನಾಲ್ಕು ದಿಕ್ಕಿನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಗಳ ಗಡಿ ದಾಟದಂತೆ, ಯಾವುದೇ ಜಾತಿ, ಮತ, ವರ್ಗ ಭೇದಭಾವವಿಲ್ಲದೆ ಕರಗ ಸಾಗಲಿದೆ. ನಾಲ್ಕನೇ ಬಾರಿಗೆ ಅರ್ಚಕ ಲಕ್ಷ್ಮೀಶ ಅವರು ಕರಗ ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾರೆ.
ಕರಗ ಸಾಗುವ ಹಾದಿ: ಮಧ್ಯರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ರ ತನಕ ಉತ್ಸವ ಜರುಗಲಿದ್ದು, ನಗರತ್ ಪೇಟೆ, ಸಿದ್ದಣ್ಣಗಲ್ಲಿ, ಕಬ್ಬನ್ ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ, ಕೆ. ಆರ್ ಮಾರುಕಟ್ಟೆ, ರಾಣಾಸಿಂಗ್ ಪೇಟೆ, ಅಕ್ಕಿಪೇಟೆ, ಮಸ್ತಾನ್ ದರ್ಗಾ, ಬಳೆಪೇಟೆ, ಕಿಲಾರಿ ರಸ್ತೆ, ಯಲಹಂಕ ಗೇಟ್, ಕುಂಬಾರ ಪೇಟೆ, ಗೊಲ್ಲರ ಪೇಟೆ ಮೂಲಕ ಮರಳಿ ಧರ್ಮರಾಯನಗುಡಿಗೆ ವಾಪಸಾಗಲಿದೆ.[ಶಿರಸಿ ಮಾರಿಕಾಂಬಾ ಜಾತ್ರೆಯ ಇತಿಹಾಸವೇನು?]
ಬೆಂಗಳೂರು ಕರಗ ಎಷ್ಟೊಂದು ಸುಂದರ!
ಬೆಂಗಳೂರು ಕರಗ ಎಷ್ಟೊಂದು ಸುಂದರ!
ಕರಗ ಉತ್ಸವ ಅರಳೆ ಪೇಟೆಯಲ್ಲಿರುವ ಮಸ್ತಾನ್ ಸಾಹೇಬರ ದರ್ಗಾಕ್ಕೆ ಭೇಟಿಕೊಡುವುದು ವಿಶೇಷ ಇದು ಟಿಪ್ಪು ಸುಲ್ತಾನರ ಕಾಲದಿಂದ ನಡೆದುಕೊಂಡು ಬಂದ ಪದ್ಧತಿ. [ತಿಗಳ ಸಮುದಾಯತ್ತ ಸಿಎಂ ಸಿದ್ದರಾಮಯ್ಯ ಸ್ನೇಹ 'ಹಸ್ತ']
ಸಂತ ಮಸ್ತಾನ್ ಸಾಹೇಬ್ ಅವರು ಧರ್ಮರಾಯಸ್ವಾಮಿ ದೇವಾಲಯಕ್ಕೆ ಪ್ರತಿನಿತ್ಯ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದರು. ಅವರು ಕಾಲವಶವಾದ ನಂತರ ಅವರಿಗೆ ಗೌರವ ಸೂಚಿಸುವ ಸಲುವಾಗಿ ಕರಗ ಅಲ್ಲಿಗೆ ಹೋಗುವುದು ವಾಡಿಕೆ. ಹಸಿ ಕರಗ ಉತ್ಸವದ ವಿಡಿಯೋ ನೋಡಿ
ಈ ಬಾರಿ ಪಟಾಕಿ ಸಿಡಿ ಮದ್ದಿನ ಆರ್ಭಟವಿಲ್ಲದೆ ಕರಗ ಮಹೋತ್ಸವ ನಡೆಸಲಿದೆ. ಜಾನಪದ ಕಲೆಗಳಾದ ವೀರಗಾಸೆ, ಡೊಳ್ಳು ಕುಣಿತ, ಪೂಜಾ ಕುಣಿತ, ಚೋಮನ ಕುಣಿತ ಸೇರಿದಂತೆ ಅನೇಕ ರೀತಿಯ ಸಾಂಸ್ಕೃತಿಕ ವೈಭವವನ್ನು ವೀಕ್ಷಿಸಬಹುದು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers













Click it and Unblock the Notifications