ನೋಡ ಬನ್ನಿ: ಬೆಂಗಳೂರು ಕರಗ ಎಷ್ಟೊಂದು ಸುಂದರ!
ಬೆಂಗಳೂರು, ಏಪ್ರಿಲ್ 22: ನೂರಾರು ವರ್ಷಗಳ ಇತಿಹಾಸವಿರುವ ಬೆಂಗಳೂರು ಕರಗ ಶುಕ್ರವಾರ ಮಧ್ಯರಾತ್ರಿ ಮತ್ತೊಮ್ಮೆ ನಗರದ ಹಿರಿಮೆಯನ್ನು ಹೆಚ್ಚಿಸಲಿದೆ. ಧಾರ್ಮಿಕ, ಜಾನಪದ ಸೊಗಡು, ಶ್ರದ್ದೆ, ನಂಬಿಕೆ, ಭಕ್ತಿಯ ಪ್ರತೀಕವಾದ ತಿಗಳರಪೇಟೆ ಧರ್ಮರಾಯಸ್ವಾಮಿ ದೇವಾಲಯದ ವಾರ್ಷಿಕ ಕರಗೋತ್ಸವ ಏಪ್ರಿಲ್22ರ ಮಧ್ಯರಾತ್ರಿ ಧರ್ಮರಾಯಸ್ವಾಮಿ ದೇವಾಲಯದಿಂದ ಆರಂಭವಾಗಲಿದೆ.
ಚೈತ್ರ ಶುಕ್ಲ ಸಪ್ತಮಿಯಿಂದ ಬಹುಳ ಬಿದಿಗೆಯವರೆಗೆ ಕರಗ ಮಹೋತ್ಸವ ನಡೆಯಲಿದೆ. ಕರಗ ಉತ್ಸವದ ಕೇಂದ್ರಬಿಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ ಏ.22ರಂದು ನಡೆಯಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಬಾರಿಯ ಕರಗ ಮಹೋತ್ಸವಕ್ಕಾಗಿ ಅನುದಾನವನ್ನು ನೀಡುತ್ತಾ ಬಂದಿದೆ. ಮುಜರಾಯಿ ಇಲಾಖೆ ಹಾಗೂ ಧರ್ಮರಾಯಸ್ವಾಮಿ ದೇವಾಲಯದ ಸಮಿತಿ ವತಿಯಿಂದ ಕರಗ ಮಹೋತ್ಸವ ಆಯೋಜನೆ ಮಾಡಲಾಗಿದೆ.[ಹೊಸ ಇತಿಹಾಸ ಬರೆದ ಚಿಕ್ಕದೇವಮ್ಮನ ಜಾತ್ರೆ]
ದ್ರೌಪದಿ ದೇವಿಯ ಮಾನಸ ಪುತ್ರರಾದ ತಿಗಳ ಜನಾಂಗದ ವಂಶಸ್ಥರು ಕರಗ ಹೊರುವುದು ಪದ್ಧತಿ. ಈ ಬಾರಿ ಏಪ್ರಿಲ್ 14 ರಂದು ಧ್ವಜಾರೋಹಣದ ಮೂಲಕ ಕರಗ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಏಪ್ರಿಲ್ 22ರ ಮಧ್ಯರಾತ್ರಿ ಮಹೋತ್ಸವ ನಡೆಯಲಿದೆ.[ಸುತ್ತೂರು ಜಾತ್ರೆಗೆ ಕಳೆಗಟ್ಟಿದ ಜನಜಾತ್ರೆ]
ನಗರದ ನಾಲ್ಕು ದಿಕ್ಕಿನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಗಳ ಗಡಿ ದಾಟದಂತೆ, ಯಾವುದೇ ಜಾತಿ, ಮತ, ವರ್ಗ ಭೇದಭಾವವಿಲ್ಲದೆ ಕರಗ ಸಾಗಲಿದೆ. ನಾಲ್ಕನೇ ಬಾರಿಗೆ ಅರ್ಚಕ ಲಕ್ಷ್ಮೀಶ ಅವರು ಕರಗ ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾರೆ.
ಕರಗ ಸಾಗುವ ಹಾದಿ: ಮಧ್ಯರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ರ ತನಕ ಉತ್ಸವ ಜರುಗಲಿದ್ದು, ನಗರತ್ ಪೇಟೆ, ಸಿದ್ದಣ್ಣಗಲ್ಲಿ, ಕಬ್ಬನ್ ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ, ಕೆ. ಆರ್ ಮಾರುಕಟ್ಟೆ, ರಾಣಾಸಿಂಗ್ ಪೇಟೆ, ಅಕ್ಕಿಪೇಟೆ, ಮಸ್ತಾನ್ ದರ್ಗಾ, ಬಳೆಪೇಟೆ, ಕಿಲಾರಿ ರಸ್ತೆ, ಯಲಹಂಕ ಗೇಟ್, ಕುಂಬಾರ ಪೇಟೆ, ಗೊಲ್ಲರ ಪೇಟೆ ಮೂಲಕ ಮರಳಿ ಧರ್ಮರಾಯನಗುಡಿಗೆ ವಾಪಸಾಗಲಿದೆ.[ಶಿರಸಿ ಮಾರಿಕಾಂಬಾ ಜಾತ್ರೆಯ ಇತಿಹಾಸವೇನು?]
ಬೆಂಗಳೂರು ಕರಗ ಎಷ್ಟೊಂದು ಸುಂದರ!
ಬೆಂಗಳೂರು ಕರಗ ಎಷ್ಟೊಂದು ಸುಂದರ!
ಕರಗ ಉತ್ಸವ ಅರಳೆ ಪೇಟೆಯಲ್ಲಿರುವ ಮಸ್ತಾನ್ ಸಾಹೇಬರ ದರ್ಗಾಕ್ಕೆ ಭೇಟಿಕೊಡುವುದು ವಿಶೇಷ ಇದು ಟಿಪ್ಪು ಸುಲ್ತಾನರ ಕಾಲದಿಂದ ನಡೆದುಕೊಂಡು ಬಂದ ಪದ್ಧತಿ. [ತಿಗಳ ಸಮುದಾಯತ್ತ ಸಿಎಂ ಸಿದ್ದರಾಮಯ್ಯ ಸ್ನೇಹ 'ಹಸ್ತ']
ಸಂತ ಮಸ್ತಾನ್ ಸಾಹೇಬ್ ಅವರು ಧರ್ಮರಾಯಸ್ವಾಮಿ ದೇವಾಲಯಕ್ಕೆ ಪ್ರತಿನಿತ್ಯ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದರು. ಅವರು ಕಾಲವಶವಾದ ನಂತರ ಅವರಿಗೆ ಗೌರವ ಸೂಚಿಸುವ ಸಲುವಾಗಿ ಕರಗ ಅಲ್ಲಿಗೆ ಹೋಗುವುದು ವಾಡಿಕೆ. ಹಸಿ ಕರಗ ಉತ್ಸವದ ವಿಡಿಯೋ ನೋಡಿ
ಈ ಬಾರಿ ಪಟಾಕಿ ಸಿಡಿ ಮದ್ದಿನ ಆರ್ಭಟವಿಲ್ಲದೆ ಕರಗ ಮಹೋತ್ಸವ ನಡೆಸಲಿದೆ. ಜಾನಪದ ಕಲೆಗಳಾದ ವೀರಗಾಸೆ, ಡೊಳ್ಳು ಕುಣಿತ, ಪೂಜಾ ಕುಣಿತ, ಚೋಮನ ಕುಣಿತ ಸೇರಿದಂತೆ ಅನೇಕ ರೀತಿಯ ಸಾಂಸ್ಕೃತಿಕ ವೈಭವವನ್ನು ವೀಕ್ಷಿಸಬಹುದು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು













Click it and Unblock the Notifications