Get Updates
Get notified of breaking news, exclusive insights, and must-see stories!

ಗೊಂದಲದ ನಡುವೆ ಸಂಚಾರಕ್ಕೆ ಮುಕ್ತವಾದ ಹೊಸಕೆರೆಹಳ್ಳಿ ಮೇಲ್ಸೇತುವೆ

ಬೆಂಗಳೂರು, ಸೆ. 17: ಬೆಂಗಳೂರು ನಗರದ ಹೊಸಕೆರೆಹಳ್ಳಿಯ ಹೊರವರ್ತುಲ ರಸ್ತೆ ಕೆ.ಇ.ಬಿ ಜಂಕ್ಷನ್ ಬಳಿ ಇರುವ ಮೇಲ್ಸೇತುವೆ ಕೊನೆಗೂ ಸಂಚಾರಕ್ಕೆ ಮುಕ್ತವಾಗಿದೆ.

ಗ್ಯಾಲರಿ: ಹೊಸಕೆರೆಹಳ್ಳಿ ಫ್ಲೈಓವರ್ ಉದ್ಘಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್, ಮೇಯರ್ ಪದ್ಮಾವತಿ ಹಾಗೂ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಅವರ ಉಪಸ್ಥಿತಿಯಲ್ಲಿ ತುಂತುರು ಮಳೆ ನಡುವೆ ಲೋಕಾರ್ಪಣೆಗೊಂಡಿದೆ.

ಸುಮಾರು 16 ತಿಂಗಳುಗಳ ವಿಳಂಬದ ಬಳಿಕ ಕೆ.ಇ.ಬಿ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಸಿಲ್ಕ್‌ಬೋರ್ಡ್‌ನಿಂದ ಮೈಸೂರು ರಸ್ತೆ ಜಂಕ್ಷನ್‌ ತನಕದ ಹೊರ ವರ್ತುಲ ರಸ್ತೆಯ ಸಿಗ್ನಲ್ ಫ್ರೀ ಕಾರೀಡಾರ್ ನ ಭಾಗವಾಗಿರುವ ಈ ಮೇಲ್ಸೇತುವೆ ನಿರ್ಮಾಣದಿಂದಾಗಿ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ಉಲ್ಬಣವಾಗಿತ್ತು.

ಮುಖ್ಯಮಂತ್ರಿ ಅವರ ನಗರೋತ್ಥಾನ ಅನುದಾನ(ಸುಮಾರು 153.8 ಕೋಟಿ ರು) ದಡಿ ಹೊರವರ್ತುಲ ರಸ್ತೆಯನ್ನು ತಡೆರಹಿತ ಸಂಚಾರದ ಯೋಜನೆಯನ್ನು ಕೈಗೊಳ್ಳಲಾಗಿತ್ತು. ಆದರೆ, ಯೋಜನೆಯ ಕಾಮಗಾರಿ ಮಾತ್ರ ಪ್ರಗತಿ ಕಾಣದೆ ಕುಂಟುತ್ತಾ ಸಾಗಿತ್ತು. ಹೊಸಕೆರೆಹಳ್ಳಿ ಸಿಗ್ನಲ್ ಬಳಿಯ ಅಂಡರ್ ಪಾಸ್ ಕಾಮಗಾರಿ ಸ್ಥಗಿತಗೊಂಡಿದ್ದು, ಸಮಸ್ಯೆ ಇನ್ನೂ ಹೆಚ್ಚಾಗುವಂತೆ ಮಾಡಿತ್ತು.

2016ರ ಮಾರ್ಚ್‌ 1ಕ್ಕೆ ಮುಗಿಯಬೇಕಿತ್ತು

2016ರ ಮಾರ್ಚ್‌ 1ಕ್ಕೆ ಮುಗಿಯಬೇಕಿತ್ತು

ಹೊಸಕೆರೆ ಹಳ್ಳಿ ಜಂಕ್ಷನ್ ಫ್ಲೈ ಓವರ್ ಕಾಮಗಾರಿ 2016ರ ಮಾರ್ಚ್‌ 1ಕ್ಕೆ ಪೂರ್ಣಗೊಳಿಸಬೇಕಿತ್ತು. ಸುಮಾರು 17.82 ಕೋಟಿ ರು ವೆಚ್ಚದ ಸೇತುವೆ ನಿರ್ಮಾಣದ ಗುತ್ತಿಗೆಯನ್ನು ಎಂ. ವೆಂಕಟರಾವ್‌ ಇನ್ಫ್ರಾ ಪ್ರಾಜೆಕ್ಟ್‌ ಕಂಪೆನಿ ಪಡೆದುಕೊಂಡಿತ್ತು. 2015ರ ಸೆಪ್ಟೆಂಬರ್‌ 1ರಂದು ಕಾಮಗಾರಿಗೆ ಚಾಲನೆ ನೀಡಲಾದರೂ ಕಾಮಗಾರಿ ವಿಳಂಬವಾಗಿ ಕೊನೆಗೂ ಪೂರ್ಣಗೊಂಡಿದೆ.

ಸಂಚಾರ ದಟ್ಟಣೆ ಕಡಿಮೆ

ಸಂಚಾರ ದಟ್ಟಣೆ ಕಡಿಮೆ

ಕೆ.ಇ.ಬಿ ಜಂಕ್ಷನ್‌ನಲ್ಲಿ ಬೆಳಗಿನ ದಟ್ಟಣೆ ಅವಧಿಯಲ್ಲಿ ಗಂಟೆಗೆ ಸರಾಸರಿ 10,000 ವಾಹನಗಳು ಚಲಿಸುತ್ತವೆ. ಸಂಜೆ 6ರಿಂದ 7ರ ಅವಧಿಯಲ್ಲಿ ಸರಾಸರಿ 9,000 ವಾಹನಗಳು ಓಡಾಡುತ್ತವೆ. ಈ ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾದರೆ ಬನಶಂಕರಿ, ಕತ್ರಿಗುಪ್ಪೆ, ಗಿರಿನಗರ, ಆವಲಹಳ್ಳಿ, ನಾಯಂಡಹಳ್ಳಿ ಮಾರ್ಗದ ಸಂಚಾರ ದಟ್ಟಣೆ ಕಡಿಮೆಯಾಗುತ್ತದೆ.

ನಾಗರೀಕರ ಅಸಮಾಧಾನ

ನಾಗರೀಕರ ಅಸಮಾಧಾನ

ಮೇಲ್ಸೇತುವೆ ನಿರ್ಮಾಣಕ್ಕಾಗಿ ಕತ್ರಿಗುಪ್ಪೆಯಿಂದ ಇಲ್ಲಿ ತನಕ ಅನೇಕ ಮರಗಳು ನಾಶವಾಗಿವೆ. ಅಂಗಡಿ-ಮುಂಗಟ್ಟುಗಳ ಮುಂಭಾಗ ಒಡೆದಿದ್ದಾರೆ. ಪಕ್ಕದ ರಸ್ತೆ ವಿಸ್ತರಣೆ ಮಾಡಿಲ್ಲ. ಒಂದು ಕಡೆ ಮಾತ್ರ ಸೇತುವೆ ನಿರ್ಮಿಸಲಾಗಿದೆ. ಎರಡೂ ಕಡೆ ಸೇತುವೆ ಮಾಡಿದ್ದರೆ ಹೆಚ್ಚು ಅನುಕೂಲವಾಗುತ್ತದೆ. ಹೊಸಕೆರೆಹಳ್ಳಿ ಸಿಗ್ನಲ್ ಅಂಡರ್ ಪಾಸ್ ಆಗುವ ತನಕ ತೊಂದರೆ ತಪ್ಪಿದ್ದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಬೆಸ್ಕಾಂ ಮೇಲೆ ಆರೋಪ

ಬೆಸ್ಕಾಂ ಮೇಲೆ ಆರೋಪ

ರಸ್ತೆಯ ಪಕ್ಕದಲ್ಲೇ ಹಾದು ಹೋಗಿರುವ ಹೈಟೆನ್ಷನ್ ಕಂಬಗಳನ್ನು ಸ್ಥಳಾಂತರಿಸುವ ವಿಷಯದಲ್ಲಿ ಉಂಟಾದ ಸಮಸ್ಯೆಯಿಂದ ಮೇಲ್ಸೇತುವೆ ಕಾಮಗಾರಿ ವಿಳಂಬವಾಗಿತ್ತು. ರಸ್ತೆ ಬದಿಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ನೆಲದಡಿ ಕೇಬಲ್‌ ಅಳವಡಿಸಲಾಗುತ್ತಿದೆ. ಅದೇ ರೀತಿ ನೀವೂ ನೆಲದಡಿ ಕೇಬಲ್‌ ಅಳವಡಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳು ಸೂಚಿಸಿದ್ದರು. ಇದರಿಂದ ಕಾಮಗಾರಿ ವಿಳಂಬವಾಯಿತು ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್‌ (ಮೂಲಸೌಕರ್ಯ) ಶ್ರೀನಿವಾಸಮೂರ್ತಿ ಹೇಳಿದ್ದಾರೆ.

ಕಾಂಗ್ರೆಸ್‌ ಮುಖಂಡರ ನಡುವೆ ವಾಗ್ವಾದ

ಕಾಂಗ್ರೆಸ್‌ ಮುಖಂಡರ ನಡುವೆ ವಾಗ್ವಾದ

ಮೇಲ್ಸೇತುವೆಗೆ ಹೊಸಕೆರೆಹಳ್ಳಿ ಪಟೇಲ್‌ ಚಿನ್ನಪ್ಪ ಅವರ ಹೆಸರಿಡಬೇಕೆಂದು ಎಂದು ಅವರ ಪುತ್ರ ಮಂಜುನಾಥ ಪಟೇಲ್ ನೀಡಿದ ಸಲಹೆಗೆ ಆಕ್ಷೇಪ ಕೇಳಿ ಬಂದಿದೆ.

ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂಪಕಾವತಿ ಅವರು ತಮ್ಮ ಪತಿ ಪತಿ ರಂಗಸ್ವಾಮಿ ಅವರ ಹೆಸರಿಡುವುದು ಸೂಕ್ತ ಎಂದಿದ್ದಾರೆ.

ರಂಗಸ್ವಾಮಿ ಅವರಿಂದ 4 ಎಕರೆ 20 ಗುಂಟೆ ಭೂಮಿ ಖರೀದಿಸಿ ಇಲ್ಲಿ ಲೇಔಟ್ ಮಾಡಲಾಗಿದೆ. ಬಿಡಿಎ ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಇದರ ಸ್ವಲ್ಪ ಭಾಗವನ್ನು ಸ್ವಾಧೀನಪಡಿಸಿಕೊಂಡಿತ್ತು

ಮೇಯರ್ ಸ್ಪಷ್ಟನೆ

ಮೇಯರ್ ಸ್ಪಷ್ಟನೆ

ಇಲ್ಲಿನ ರಸ್ತೆಗೆ ಮಾತ್ರ ಪಟೇಲ್ ಚಿನ್ನಪ್ಪ ಅವರ ಹೆಸರಿಡುವ ಪ್ರಸ್ತಾವನೆ ಬಂದಿದೆ. ಮೇಲ್ಸೇತುವೆಗೆ ಯಾರ ಹೆಸರಿಡಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಚಿನ್ನಪ್ಪ, ರಂಗಸ್ವಾಮಿ ಕುಟುಂಬದವರು ಮನವಿ ಮಾಡಿದ್ದಾರೆ. ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಮೇಯರ್ ಪದ್ಮಾವತಿ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರು ಅಥವಾ ಮಹಾನ್ ಸಾಧಕರ ಹೆಸರನ್ನಿಡುವುದೇ ಸೂಕ್ತ ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+