ಬೆಂಗಳೂರಿಗರ ನೆಮ್ಮದಿ ಕಿತ್ತುಕೊಳ್ಳಲಿದ್ದ ಬಿಡಿಎ ವಿರುದ್ಧ ಜನರ ಗೆಲುವು!
ತನ್ನ 2015 ನಗರ ವಾಣಿಜ್ಯ ಯೋಜನೆಗೆ ತಿದ್ದುಪಡಿ ತಂದ ಬಿಡಿಎ. ಜನ ವಸತಿ ಪ್ರದೇಶಗಳಲ್ಲಿ ಹೇರಳವಾಗಿ ವಾಣಿಜ್ಯ ಚಟುವಟಿಕೆಗೆ ಅನುವು ಮಾಡಲಿದ್ದ ಯೋಜನೆ. ಈ ಯೋಜನೆ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದ ನಾಗರಿಕರು.
ಬೆಂಗಳೂರು, ಜುಲೈ 27: ನಗರದಲ್ಲಿ ಮಧ್ಯಮ ವರ್ಗಗಳು ಹೆಚ್ಚಾಗಿ ವಾಸಿಸುವ ವಸತಿ ಪ್ರದೇಶಗಳಲ್ಲಿನ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡುವ ತನ್ನ ಪ್ರಸ್ತಾವನೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತಿದ್ದುಪಡಿ ತಂದಿದೆ. ಹೈಕೋರ್ಟ್ ಸೂಚನೆಯ ಮೇರೆಗೆ ಈ ತಿದ್ದುಪಡಿ ತರಲಾಗಿದ್ದು, ಇದು ಜನರ ಆಕ್ರೋಶಕ್ಕೆ ಸಂದ ಜಯ ಎಂದು ಬಣ್ಣಿಸಲಾಗಿದೆ.
2015ರಲ್ಲಿ ಇಂಥದ್ದೊಂದು ನಿಯಮಾವಳಿಗಳನ್ನು (Bangalore's Revised Master Plan 2015) ಬಿಡಿಎ ರೂಪಿಸಿತ್ತು. ಈ ಹೊಸ ನಿಯಮಾವಳಿಗಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿತ್ತು. ಅದರಂತೆ, ಜನ ವಸತಿಯಿರುವ ಯಾವುದೇ ಪ್ರದೇಶಗಳಲ್ಲಿನ 40 ಅಡಿ ಹಾಗೂ ಅದಕ್ಕಿಂತ ಹೆಚ್ಚು ಅಗಲವಿರುವ ರಸ್ತೆಗಳ ಎರಡೂ ಬದಿಯಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅನುವು ಮಾಡಿಕೊಡುವ ಪ್ರಸ್ತಾವನೆ ಇದಾಗಿತ್ತು.

ಆದರೆ, ಇದರ ವಿರುದ್ಧ ಇಂದಿರಾನಗರ ಮುಂತಾದ ಬಡಾವಣೆಗಳ ನಾಗರಿಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಜನ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಹೇರಳವಾಗಿ ಅವಕಾಶ ನೀಡಿದರೆ, ನಾಗರಿಕರು ನೆಮ್ಮದಿಗೆ ಧಕ್ಕೆಯುಂಟಾಗುತ್ತದೆಂದು ಅಹವಾಲು ಸಲ್ಲಿಸಿದ್ದರು.
ನಾಗರಿಕರ ಅರ್ಜಿ ಹಿನ್ನೆಲೆಯಲ್ಲಿ, ತಿಂಗಳುಗಟ್ಟಲೆ ವಿಚಾರಣೆ ನಡೆಸಿದ ಹೈಕೋರ್ಟ್, ಇದೇ ವರ್ಷ ಫೆಬ್ರವರಿ 19ರಂದು ಆದೇಶ ನೀಡಿ, ಬಿಡಿಎ ನಿಯಾವಳಿಗಳಲ್ಲಿ ಬದಲಾವಣೆ ತರುವಂತೆ ಸೂಚಿಸಿತ್ತು. ಅದರಂತೆ, ಬಿಡಿಎ ತನ್ನ ಮಾಸ್ಟರ್ ಪ್ಲಾನ್ ನಲ್ಲಿ ಬದಲಾವಣೆ ತಂದಿದೆ ಎಂದು ಹೇಳಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications