ಸಿಟಿ ರೈಲ್ವೆ ನಿಲ್ದಾಣಕ್ಕೆ ಸ್ವಯಂ ಚಾಲಿತ ಟಿಕೆಟ್ ಯಂತ್ರ
ಬೆಂಗಳೂರು, ಅ.30: ನಗರದ ರೈಲು ನಿಲ್ದಾಣದಲ್ಲಿ ಸ್ವಯಂ ಚಾಲಿತ ಟಿಕೆಟ್ ವಿತರಿಸುವ ಯಂತ್ರ (ಎಪಿವಿಎಂ) ಗಳಿಗೆ ಚಾಲನೆ ನೀಡಲಾಗಿದೆ. ಇದರಿಂಡಾಗಿ ಪ್ಯಾಸೆಂಜರ್ ಎಕ್ಸ್ಪ್ರೆಸ್ ಹಾಗೂ ಸೂಪರ್ ಫಾಸ್ಟ್ ರೈಲಿನ ಟಿಕೆಟ್ ಪಡೆಯಲು ಉಂಟಾಗುತ್ತಿದ್ದ ನೂಕು ನುಗ್ಗಲು ತಪ್ಪುತ್ತದೆ. ಪ್ರಯಾಣಿಕರು ಸುಲಭವಾಗಿ ಟಿಕೆಟ್ ಪಡೆದುಕೊಳ್ಳಬಹುದಾಗಿದೆ.
ನಗರದ ರೈಲು ನಿಲ್ದಾಣದಲ್ಲಿ ನಾಲ್ಕು ಎಪಿವಿಎಂ ಯಂತ್ರಗಳಿಗೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸಂಜೀವ್ ಅಗರ್ವಾಲ್ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿ, ದೇಶದ ಯಾವುದೇ ಭಾಗಕ್ಕೆ ಬೇಕಾದರೂ ಈ ಯಂತ್ರದ ಮೂಲಕ ಕಾಯ್ದಿರಿಸದ ಟಿಕೆಟ್ಗಳನ್ನು ಕ್ಷಣಮಾತ್ರದಲ್ಲಿ ಪಡೆಯಬಹುದು. ಇದಕ್ಕಾಗಿ ಕನಿಷ್ಟ 100 ರೂ. ನಿಂದ 5 ಸಾವಿರ ರೂ. ಮೊತ್ತದ ಸ್ಮಾರ್ಟ್ ಕಾರ್ಡ್ಗಳನ್ನು ಇಲಾಖೆ ಪರಿಚಯಿಸಿದ್ದು, ಅದರ ಮೂಲಕ ಟಿಕೆಟ್ ಪಡೆಯಬಹುದಾಗಿದೆ.

ಸ್ಮಾರ್ಟ್ ಕಾರ್ಡ್ ಕೊಂಡ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ ಶೇ. 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಈ ಕಾರ್ಡ್ ಒಂದು ವರ್ಷದ ಅವಧಿಯದ್ದಾಗಿದ್ದು, ಕೊಂಡ ಸ್ಮಾರ್ಟ್ ಕಾರ್ಡ್ ಬೇಡವೆಂದು ವಾಪಸ್ ಮಾಡಿದರೆ, ಅದರ ಬೆಲೆಯ ಅರ್ಧದಷ್ಟು ಹಣವನ್ನು ವಾಪಸ್ ನೀಡಲಾಗುವುದು ಎಂದು ಹೇಳಿದರು.
ಬೆಂಗಳೂರು ನಗರ ರೈಲು ನಿಲ್ದಾಣದಲ್ಲಿ 4 ಟಿಕೆಟ್ ನೀಡುವ ಯಂತ್ರಗಳೂ ಸೇರಿದಂತೆ, ಹತ್ತು ಯಂತ್ರಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಯಶವಂತಪುರ, ಕಂಟೋನ್ಮೆಂಟ್, ತುಮಕೂರು, ಮಂಡ್ಯ ಸೇರಿದಂತೆ, ಬೆಂಗಳೂರು ವಿಭಾಗದಲ್ಲಿ ಬರುವ ರೈಲು ನಿಲ್ದಾಣಗಳಲ್ಲಿ ಈ ಯಂತ್ರಗಳನ್ನು ಅಳವಡಿಸಲಾಗುವುದು ಎಂದು ಅವರು ಹೇಳಿದರು.
INAUGURATION OF ATVM & MOBILE CHARGING UNIT at B'luru City Railway station @RailMinIndia @SWRRLY @GMSWR @drmsbc pic.twitter.com/D6OaRfTZR2
— Bengaluru Division (@swrbengaluru) October 29, 2015 ನಗರ ರೈಲ್ವೆ ನಿಲ್ದಾಣ 13ನೇ ಕೌಂಟರ್ನಲ್ಲಿ ಸ್ಮಾರ್ಟ್ ಕಾರ್ಡ್ ದೊರೆಯಲಿದ್ದು, ಸ್ಮಾರ್ಟ್ ಕಾರ್ಡ್ನಲ್ಲಿರುವ ಮೊತ್ತ ಖಾಲಿಯಾದ ನಂತರ ಅಲ್ಲೇ ರೀಚಾರ್ಜ್ ಮಾಡಿಸಿಕೊಳ್ಳಬಹುದು ಎಟಿವಿಎಂ ಯಂತ್ರಗಳ ಪರದೆಯಲ್ಲಿ ಕಾಣುವ ಭೂಪಟದಲ್ಲಿ ಎಲ್ಲಾ ರೈಲು ನಿಲ್ದಾಣಗಳ ಹೆಸರುಗಳಿವೆ. ಪ್ರಯಾಣಿಕರು ಯಾವ ಸ್ಥಳಕ್ಕೆ ಹೋಗಬೇಕು ಎನ್ನುವ ಗುರುತಿನ ಮೇಲೆ ಬಟನ್ ಒತ್ತಿದರೆ ಸಾಕು. ಅತಿ ಬೇಗ ಟಿಕೆಟ್ ಸಿಗಲಿದೆ. ಇದು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Ugadi Special Train: ವಿಶೇಷ ರೈಲು ಸಂಚಾರ, ಬೆಂಗಳೂರು-ಬೆಳಗಾವಿ ಪ್ರಯಾಣಿಕರೇ ಗಮನಿಸಿ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು












Click it and Unblock the Notifications